Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ

ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹಿಡಿದುಕೊಂಡು ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ
ರಾಹುಲ್​​ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 21, 2023 | 2:19 PM

ದೆಹಲಿ, ಸೆ.21: ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ (Rahul Gandhi)​​ ದಿನಕ್ಕೊಂದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆ ಒಂದು ಕಡೆ ಹತ್ತಿರವಾಗುತ್ತಿರುವ ಕಾರಣ ಈ ಎಲ್ಲ ರಾಜಕೀಯ ಅಲೆದಾಟ ಇರುವುದು ಸಹಜ ಎಂದು ಅನೇಕರ ವಾದ, ಇನ್ನು ಕೆಲವರು ಇದು ಜನನಾಯಕನ ಕೆಲಸ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ರಾಹುಲ್​​ ಗಾಂಧಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿದ್ದಾರೆ. ಇದೀಗ ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹೊತ್ತುಕೊಂಡು ಕೂಲಿ ಕಾರ್ಮಿಕರ ಜತೆಗೆ ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ಈ ಹಿಂದೆ ರಾಹುಲ್​​ ಗಾಂಧಿ ಅವರು ರೈತರ ಹೊಲಕ್ಕೆ ಹೋಗಿ ಕೃಷಿ ಮಾಡಿದ್ದರು. ಇನ್ನು ಇಂತಹ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಇದೀಗ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಕಾಣಿಸಿಕೊಂಡ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್​​ಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್​​ನ ನಾಯಕ ರಾಹುಲ್​​ ಗಾಂಧಿ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ ತಲೆಯ ಮೇಲೆ ಸೂಟ್​​​ಕೇಸ್​​ ಹೊತ್ತುಕೊಂಡು, ಅಲ್ಲಿ ಜನರ ಜತೆಗೆ ಸಂವಾದ ನಡೆಸಿದ್ದಾರೆ.

ರಾಹುಲ್​​ ಗಾಂಧಿ ಅವರು ಈ ಸಂವಾದ ಸಮಯದಲ್ಲಿ, ಅಲ್ಲಿನ ಜನರ ಜತೆಗೆ ಸುದೀರ್ಘ ಚರ್ಚೆಯನ್ನು ನಡೆಸಿ, ಅವರ ಕಷ್ಟಗಳನ್ನು ಆಲಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್​​ ಪಕ್ಷ ತನ್ನ X (ಹಿಂದಿನ ಟ್ವಿಟರ್​​)ನಲ್ಲಿ ಹಂಚಿಕೊಂಡಿದೆ. ಜನನಾಯಕರಾದ ನಮ್ಮ ರಾಹುಲ್​​ ಗಾಂಧಿ ಅವರು ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿರುವ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ, ಅವರ ಕಷ್ಟಗಳನ್ನು ಆಲಿಸಿದ್ದಾರೆ ಎಂದು ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ಲುಕ್​​ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಹೇಗಿದ್ರು.. ಹೇಗಾದ್ರು ನೋಡಿ?

ರಾಹುಲ್​​ ಗಾಂಧಿ ಅವರ ಮುಂದಿನ ಭಾರತ್ ಜೋಡೋ ಪ್ರಯಾಣಕ್ಕೆ ಈ ಸಂವಾದ ಹಾದಿ ಎಂದು ಪಕ್ಷ ಹೇಳಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್​​ ಕೈಗೊಂಡ ಭಾರತ್ ಜೋಡೋ ಯಾತ್ರೆಯು ಮತ್ತೆ ಸಂವಾದದೊಂದಿಗೆ ಮುಂದುವರಿಯುತ್ತದೆ, ಇನ್ನು ರಾಹುಲ್​​ ಅವರು ಸಮಾಜದ ವಿವಿಧ ವರ್ಗಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್​​ ಪಕ್ಷ ತನ್ನ ಅಧಿಕೃತ ಟ್ವೀಟ್​​​ನಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:15 pm, Thu, 21 September 23

ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?