AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ

ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹಿಡಿದುಕೊಂಡು ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ
ರಾಹುಲ್​​ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Sep 21, 2023 | 2:19 PM

Share

ದೆಹಲಿ, ಸೆ.21: ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ (Rahul Gandhi)​​ ದಿನಕ್ಕೊಂದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆ ಒಂದು ಕಡೆ ಹತ್ತಿರವಾಗುತ್ತಿರುವ ಕಾರಣ ಈ ಎಲ್ಲ ರಾಜಕೀಯ ಅಲೆದಾಟ ಇರುವುದು ಸಹಜ ಎಂದು ಅನೇಕರ ವಾದ, ಇನ್ನು ಕೆಲವರು ಇದು ಜನನಾಯಕನ ಕೆಲಸ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ರಾಹುಲ್​​ ಗಾಂಧಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿದ್ದಾರೆ. ಇದೀಗ ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹೊತ್ತುಕೊಂಡು ಕೂಲಿ ಕಾರ್ಮಿಕರ ಜತೆಗೆ ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ಈ ಹಿಂದೆ ರಾಹುಲ್​​ ಗಾಂಧಿ ಅವರು ರೈತರ ಹೊಲಕ್ಕೆ ಹೋಗಿ ಕೃಷಿ ಮಾಡಿದ್ದರು. ಇನ್ನು ಇಂತಹ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಇದೀಗ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಕಾಣಿಸಿಕೊಂಡ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್​​ಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್​​ನ ನಾಯಕ ರಾಹುಲ್​​ ಗಾಂಧಿ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ ತಲೆಯ ಮೇಲೆ ಸೂಟ್​​​ಕೇಸ್​​ ಹೊತ್ತುಕೊಂಡು, ಅಲ್ಲಿ ಜನರ ಜತೆಗೆ ಸಂವಾದ ನಡೆಸಿದ್ದಾರೆ.

ರಾಹುಲ್​​ ಗಾಂಧಿ ಅವರು ಈ ಸಂವಾದ ಸಮಯದಲ್ಲಿ, ಅಲ್ಲಿನ ಜನರ ಜತೆಗೆ ಸುದೀರ್ಘ ಚರ್ಚೆಯನ್ನು ನಡೆಸಿ, ಅವರ ಕಷ್ಟಗಳನ್ನು ಆಲಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್​​ ಪಕ್ಷ ತನ್ನ X (ಹಿಂದಿನ ಟ್ವಿಟರ್​​)ನಲ್ಲಿ ಹಂಚಿಕೊಂಡಿದೆ. ಜನನಾಯಕರಾದ ನಮ್ಮ ರಾಹುಲ್​​ ಗಾಂಧಿ ಅವರು ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿರುವ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ, ಅವರ ಕಷ್ಟಗಳನ್ನು ಆಲಿಸಿದ್ದಾರೆ ಎಂದು ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ಲುಕ್​​ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಹೇಗಿದ್ರು.. ಹೇಗಾದ್ರು ನೋಡಿ?

ರಾಹುಲ್​​ ಗಾಂಧಿ ಅವರ ಮುಂದಿನ ಭಾರತ್ ಜೋಡೋ ಪ್ರಯಾಣಕ್ಕೆ ಈ ಸಂವಾದ ಹಾದಿ ಎಂದು ಪಕ್ಷ ಹೇಳಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್​​ ಕೈಗೊಂಡ ಭಾರತ್ ಜೋಡೋ ಯಾತ್ರೆಯು ಮತ್ತೆ ಸಂವಾದದೊಂದಿಗೆ ಮುಂದುವರಿಯುತ್ತದೆ, ಇನ್ನು ರಾಹುಲ್​​ ಅವರು ಸಮಾಜದ ವಿವಿಧ ವರ್ಗಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್​​ ಪಕ್ಷ ತನ್ನ ಅಧಿಕೃತ ಟ್ವೀಟ್​​​ನಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:15 pm, Thu, 21 September 23

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ