AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ

ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹಿಡಿದುಕೊಂಡು ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ
ರಾಹುಲ್​​ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Sep 21, 2023 | 2:19 PM

Share

ದೆಹಲಿ, ಸೆ.21: ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ (Rahul Gandhi)​​ ದಿನಕ್ಕೊಂದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆ ಒಂದು ಕಡೆ ಹತ್ತಿರವಾಗುತ್ತಿರುವ ಕಾರಣ ಈ ಎಲ್ಲ ರಾಜಕೀಯ ಅಲೆದಾಟ ಇರುವುದು ಸಹಜ ಎಂದು ಅನೇಕರ ವಾದ, ಇನ್ನು ಕೆಲವರು ಇದು ಜನನಾಯಕನ ಕೆಲಸ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ರಾಹುಲ್​​ ಗಾಂಧಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿದ್ದಾರೆ. ಇದೀಗ ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹೊತ್ತುಕೊಂಡು ಕೂಲಿ ಕಾರ್ಮಿಕರ ಜತೆಗೆ ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ಈ ಹಿಂದೆ ರಾಹುಲ್​​ ಗಾಂಧಿ ಅವರು ರೈತರ ಹೊಲಕ್ಕೆ ಹೋಗಿ ಕೃಷಿ ಮಾಡಿದ್ದರು. ಇನ್ನು ಇಂತಹ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಇದೀಗ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಕಾಣಿಸಿಕೊಂಡ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್​​ಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್​​ನ ನಾಯಕ ರಾಹುಲ್​​ ಗಾಂಧಿ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ ತಲೆಯ ಮೇಲೆ ಸೂಟ್​​​ಕೇಸ್​​ ಹೊತ್ತುಕೊಂಡು, ಅಲ್ಲಿ ಜನರ ಜತೆಗೆ ಸಂವಾದ ನಡೆಸಿದ್ದಾರೆ.

ರಾಹುಲ್​​ ಗಾಂಧಿ ಅವರು ಈ ಸಂವಾದ ಸಮಯದಲ್ಲಿ, ಅಲ್ಲಿನ ಜನರ ಜತೆಗೆ ಸುದೀರ್ಘ ಚರ್ಚೆಯನ್ನು ನಡೆಸಿ, ಅವರ ಕಷ್ಟಗಳನ್ನು ಆಲಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್​​ ಪಕ್ಷ ತನ್ನ X (ಹಿಂದಿನ ಟ್ವಿಟರ್​​)ನಲ್ಲಿ ಹಂಚಿಕೊಂಡಿದೆ. ಜನನಾಯಕರಾದ ನಮ್ಮ ರಾಹುಲ್​​ ಗಾಂಧಿ ಅವರು ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿರುವ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ, ಅವರ ಕಷ್ಟಗಳನ್ನು ಆಲಿಸಿದ್ದಾರೆ ಎಂದು ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ಲುಕ್​​ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಹೇಗಿದ್ರು.. ಹೇಗಾದ್ರು ನೋಡಿ?

ರಾಹುಲ್​​ ಗಾಂಧಿ ಅವರ ಮುಂದಿನ ಭಾರತ್ ಜೋಡೋ ಪ್ರಯಾಣಕ್ಕೆ ಈ ಸಂವಾದ ಹಾದಿ ಎಂದು ಪಕ್ಷ ಹೇಳಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್​​ ಕೈಗೊಂಡ ಭಾರತ್ ಜೋಡೋ ಯಾತ್ರೆಯು ಮತ್ತೆ ಸಂವಾದದೊಂದಿಗೆ ಮುಂದುವರಿಯುತ್ತದೆ, ಇನ್ನು ರಾಹುಲ್​​ ಅವರು ಸಮಾಜದ ವಿವಿಧ ವರ್ಗಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್​​ ಪಕ್ಷ ತನ್ನ ಅಧಿಕೃತ ಟ್ವೀಟ್​​​ನಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:15 pm, Thu, 21 September 23

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್