AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ನೂತನ ಕೃಷಿ ಕಾಯ್ದೆ ವಿರೋಧಿಸಿ ಟ್ರ್ಯಾಕ್ಟರ್​ ಏರಿ ಸಂಸತ್ತಿಗೆ ಬಂದ ರಾಹುಲ್​ ಗಾಂಧಿ

Rahul Gandhi Drives Tractor: ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಸಂಸತ್ತಿಗೆ ಆಗಮಿಸುವ ಮೂಲಕ ಕೃಷಿ ಕಾಯ್ದೆ ವಿರೋಧಿ ಹೋರಾಟಕ್ಕೆ ರಾಹುಲ್​ ಗಾಂಧಿ ತಮ್ಮ ಬೆಂಬಲ ಸೂಚಿಸಿದರು. ಎಲ್ಲಾ ಮೂರು ಕಾಯ್ದೆಗಳನ್ನೂ ಹಿಂಪಡೆಯಿರಿ ಎಂಬ ಘೋಷ ವಾಕ್ಯವನ್ನು ಟ್ರ್ಯಾಕ್ಟರ್​ ಮುಂಭಾಗಕ್ಕೆ ಕಟ್ಟಲಾಗಿತ್ತು.

Rahul Gandhi: ನೂತನ ಕೃಷಿ ಕಾಯ್ದೆ ವಿರೋಧಿಸಿ ಟ್ರ್ಯಾಕ್ಟರ್​ ಏರಿ ಸಂಸತ್ತಿಗೆ ಬಂದ ರಾಹುಲ್​ ಗಾಂಧಿ
ಟ್ರ್ಯಾಕ್ಟರ್​ ಹತ್ತಿ ಬಂದ ರಾಹುಲ್​ ಗಾಂಧಿ
TV9 Web
| Edited By: |

Updated on:Jul 26, 2021 | 11:44 AM

Share

ದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಮಾಡುತ್ತಿರುವ ನಿರಂತರ ಹೋರಾಟಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಕೂಡಾ ಕೈ ಜೋಡಿಸಿದ್ದು, ಇಂದು ಟ್ರ್ಯಾಕ್ಟರ್ (Tractor)​ ಚಲಾಯಿಸಿಕೊಂಡು ಸಂಸತ್ತಿಗೆ (Parliament) ಆಗಮಿಸುವ ಮೂಲಕ ಕೃಷಿ ಕಾಯ್ದೆ (Farm Laws) ವಿರೋಧಿ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು. ಎಲ್ಲಾ ಮೂರು ಕಾಯ್ದೆಗಳನ್ನೂ ಹಿಂಪಡೆಯಿರಿ ಎಂಬ ಘೋಷ ವಾಕ್ಯವನ್ನು ಟ್ರ್ಯಾಕ್ಟರ್​ ಮುಂಭಾಗಕ್ಕೆ ಕಟ್ಟಲಾಗಿದ್ದು, ರಾಹುಲ್​ ಗಾಂಧಿಗೆ ಅನೇಕರು ಜತೆಯಾದರು.

ಮುಂಗಾರು ಅಧಿವೇಶನದ ವೇಳೆ ಸಂಸತ್ತಿನತ್ತ ಆಗಮಿಸಿದ ವಯನಾಡು ಸಂಸದ ರಾಹುಲ್​ ಗಾಂಧಿ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಕೃಷಿ ಕಾಯ್ದೆ ವಿರೋಧಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಗಮನ ಸೆಳೆಯಿತು. ಈ ವೇಳೆ, ಅವರಿಗೆ ಜತೆಯಾದ ಪಂಜಾಬ್​, ಹರಿಯಾಣದ ಕಾಂಗ್ರೆಸ್​ ಸಂಸದರಾದ ದೀಪೆಂದರ್​ ಹೂಡಾ, ರವ್​ನೀತ್​ ಸಿಂಗ್​ ಬಿಟ್ಟು, ಪ್ರತಾಪ್​ ಸಿಂಗ್​ ಬಾಜ್ವಾ ಕೂಡಾ ವಿವಾದಾಸ್ಪದ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿದ ಅವರು ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು, ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸಂಸತ್ತಿನತ್ತ ಆಗಮಿಸಿದ ಟ್ರ್ಯಾಕ್ಟರ್​ ಮುಂಭಾಗದಲ್ಲಿ ದೊಡ್ಡ ಬ್ಯಾನರ್​ ಒಂದನ್ನು ಕಟ್ಟಲಾಗಿದ್ದು, ಎಲ್ಲಾ ಮೂರು ಕಾಯ್ದೆಗಳನ್ನೂ ಹಿಂಪಡೆಯಿರಿ ಎಂಬ ವಾಕ್ಯ ಎದ್ದು ಕಾಣುತ್ತಿತ್ತು.

ಟ್ರ್ಯಾಕ್ಟರ್​ ಚಲಾಯಿಸುವ ವೇಳೆ ಎನ್​ 95 ಮಾಸ್ಕ್​​ ಧರಿಸಿದ್ದ ರಾಹುಲ್​ ಗಾಂಧಿ, ತಮ್ಮ ಪಕ್ಷದ ಸಂಸದರೊಂದಿಗೆ ಮಾತನಾಡುತ್ತಾ ಸಂಸತ್ತಿನತ್ತ ಆಗಮಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು ಅವರ ಪರವಾಗಿ ಆಗಮಿಸಿದ್ದಾಗಿ ತಿಳಿಸಿದರು. ಸರ್ಕಾರ ಸಂಸತ್ತಿನಲ್ಲಿ ಈ ವಿಚಾರವನ್ನು ಮಾತನಾಡುವುದಕ್ಕೆ ಸಿದ್ಧವಿಲ್ಲ. ಆದರೆ, 2-3 ದೊಡ್ಡ ದೊಡ್ಡ ಉದ್ಯಮಿಗಳ ಪರವಾಗಿ ತರುತ್ತಿರುವ ಈ ಕಾಯ್ದೆಯನ್ನು ಅವರು ಹಿಂಪಡೆಯಲೇಬೇಕಾಗುತ್ತದೆ. ಅವರು ಇದನ್ನು ಯಾರಿಗೋಸ್ಕರ ಜಾರಿ ಮಾಡುತ್ತಿದ್ದಾರೆ ಎನ್ನುವುದು ಇಡೀ ದೇಶಕ್ಕೆ ಗೊತ್ತಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕೇಂದ್ರದ ಹೊಸ ಕೃಷಿ ಕಾಯ್ದೆಗಳ ಫಲ: ಪಂಜಾಬ್​ ರೈತರ ಗೋಧಿ ಖರೀದಿಸಿ ನೇರವಾಗಿ ಅವರ ಖಾತೆಗೆ ಹಣ ವರ್ಗಾಯಿಸಿದ ಕೇಂದ್ರ ಆಹಾರ ನಿಗಮ​ 

ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ

(Rahul Gandhi reaches parliament on tractor protesting against new farm laws)

Published On - 11:19 am, Mon, 26 July 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ