AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ನೂತನ ಕೃಷಿ ಕಾಯ್ದೆ ವಿರೋಧಿಸಿ ಟ್ರ್ಯಾಕ್ಟರ್​ ಏರಿ ಸಂಸತ್ತಿಗೆ ಬಂದ ರಾಹುಲ್​ ಗಾಂಧಿ

Rahul Gandhi Drives Tractor: ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಸಂಸತ್ತಿಗೆ ಆಗಮಿಸುವ ಮೂಲಕ ಕೃಷಿ ಕಾಯ್ದೆ ವಿರೋಧಿ ಹೋರಾಟಕ್ಕೆ ರಾಹುಲ್​ ಗಾಂಧಿ ತಮ್ಮ ಬೆಂಬಲ ಸೂಚಿಸಿದರು. ಎಲ್ಲಾ ಮೂರು ಕಾಯ್ದೆಗಳನ್ನೂ ಹಿಂಪಡೆಯಿರಿ ಎಂಬ ಘೋಷ ವಾಕ್ಯವನ್ನು ಟ್ರ್ಯಾಕ್ಟರ್​ ಮುಂಭಾಗಕ್ಕೆ ಕಟ್ಟಲಾಗಿತ್ತು.

Rahul Gandhi: ನೂತನ ಕೃಷಿ ಕಾಯ್ದೆ ವಿರೋಧಿಸಿ ಟ್ರ್ಯಾಕ್ಟರ್​ ಏರಿ ಸಂಸತ್ತಿಗೆ ಬಂದ ರಾಹುಲ್​ ಗಾಂಧಿ
ಟ್ರ್ಯಾಕ್ಟರ್​ ಹತ್ತಿ ಬಂದ ರಾಹುಲ್​ ಗಾಂಧಿ
TV9 Web
| Edited By: |

Updated on:Jul 26, 2021 | 11:44 AM

Share

ದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಮಾಡುತ್ತಿರುವ ನಿರಂತರ ಹೋರಾಟಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಕೂಡಾ ಕೈ ಜೋಡಿಸಿದ್ದು, ಇಂದು ಟ್ರ್ಯಾಕ್ಟರ್ (Tractor)​ ಚಲಾಯಿಸಿಕೊಂಡು ಸಂಸತ್ತಿಗೆ (Parliament) ಆಗಮಿಸುವ ಮೂಲಕ ಕೃಷಿ ಕಾಯ್ದೆ (Farm Laws) ವಿರೋಧಿ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು. ಎಲ್ಲಾ ಮೂರು ಕಾಯ್ದೆಗಳನ್ನೂ ಹಿಂಪಡೆಯಿರಿ ಎಂಬ ಘೋಷ ವಾಕ್ಯವನ್ನು ಟ್ರ್ಯಾಕ್ಟರ್​ ಮುಂಭಾಗಕ್ಕೆ ಕಟ್ಟಲಾಗಿದ್ದು, ರಾಹುಲ್​ ಗಾಂಧಿಗೆ ಅನೇಕರು ಜತೆಯಾದರು.

ಮುಂಗಾರು ಅಧಿವೇಶನದ ವೇಳೆ ಸಂಸತ್ತಿನತ್ತ ಆಗಮಿಸಿದ ವಯನಾಡು ಸಂಸದ ರಾಹುಲ್​ ಗಾಂಧಿ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಕೃಷಿ ಕಾಯ್ದೆ ವಿರೋಧಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಗಮನ ಸೆಳೆಯಿತು. ಈ ವೇಳೆ, ಅವರಿಗೆ ಜತೆಯಾದ ಪಂಜಾಬ್​, ಹರಿಯಾಣದ ಕಾಂಗ್ರೆಸ್​ ಸಂಸದರಾದ ದೀಪೆಂದರ್​ ಹೂಡಾ, ರವ್​ನೀತ್​ ಸಿಂಗ್​ ಬಿಟ್ಟು, ಪ್ರತಾಪ್​ ಸಿಂಗ್​ ಬಾಜ್ವಾ ಕೂಡಾ ವಿವಾದಾಸ್ಪದ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿದ ಅವರು ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು, ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸಂಸತ್ತಿನತ್ತ ಆಗಮಿಸಿದ ಟ್ರ್ಯಾಕ್ಟರ್​ ಮುಂಭಾಗದಲ್ಲಿ ದೊಡ್ಡ ಬ್ಯಾನರ್​ ಒಂದನ್ನು ಕಟ್ಟಲಾಗಿದ್ದು, ಎಲ್ಲಾ ಮೂರು ಕಾಯ್ದೆಗಳನ್ನೂ ಹಿಂಪಡೆಯಿರಿ ಎಂಬ ವಾಕ್ಯ ಎದ್ದು ಕಾಣುತ್ತಿತ್ತು.

ಟ್ರ್ಯಾಕ್ಟರ್​ ಚಲಾಯಿಸುವ ವೇಳೆ ಎನ್​ 95 ಮಾಸ್ಕ್​​ ಧರಿಸಿದ್ದ ರಾಹುಲ್​ ಗಾಂಧಿ, ತಮ್ಮ ಪಕ್ಷದ ಸಂಸದರೊಂದಿಗೆ ಮಾತನಾಡುತ್ತಾ ಸಂಸತ್ತಿನತ್ತ ಆಗಮಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು ಅವರ ಪರವಾಗಿ ಆಗಮಿಸಿದ್ದಾಗಿ ತಿಳಿಸಿದರು. ಸರ್ಕಾರ ಸಂಸತ್ತಿನಲ್ಲಿ ಈ ವಿಚಾರವನ್ನು ಮಾತನಾಡುವುದಕ್ಕೆ ಸಿದ್ಧವಿಲ್ಲ. ಆದರೆ, 2-3 ದೊಡ್ಡ ದೊಡ್ಡ ಉದ್ಯಮಿಗಳ ಪರವಾಗಿ ತರುತ್ತಿರುವ ಈ ಕಾಯ್ದೆಯನ್ನು ಅವರು ಹಿಂಪಡೆಯಲೇಬೇಕಾಗುತ್ತದೆ. ಅವರು ಇದನ್ನು ಯಾರಿಗೋಸ್ಕರ ಜಾರಿ ಮಾಡುತ್ತಿದ್ದಾರೆ ಎನ್ನುವುದು ಇಡೀ ದೇಶಕ್ಕೆ ಗೊತ್ತಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕೇಂದ್ರದ ಹೊಸ ಕೃಷಿ ಕಾಯ್ದೆಗಳ ಫಲ: ಪಂಜಾಬ್​ ರೈತರ ಗೋಧಿ ಖರೀದಿಸಿ ನೇರವಾಗಿ ಅವರ ಖಾತೆಗೆ ಹಣ ವರ್ಗಾಯಿಸಿದ ಕೇಂದ್ರ ಆಹಾರ ನಿಗಮ​ 

ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ

(Rahul Gandhi reaches parliament on tractor protesting against new farm laws)

Published On - 11:19 am, Mon, 26 July 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ