AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ

ನಿನ್ನೆ ಒಂದೇ ದಿನ 85 ಲಕ್ಷ ಜನರಿಗೆ ಲಸಿಕೆ ಕೊಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಹೌದು ನಿನ್ನೆ ತುಂಬ ಒಳ್ಳೆಯ ಕೆಲಸ ಆಗಿದೆ. ಆದರೆ ಇದು ಯಾವುದೇ ಸಮಾರಂಭವಲ್ಲ. ಅದೊಂದು ಪ್ರಕ್ರಿಯೆ. ಇದನ್ನು ಶ್ರದ್ಧೆಯಿಂದ ಮುಂದುವರಿಸಬೇಕು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ
ರಾಹುಲ್​ ಗಾಂಧಿ
TV9 Web
| Edited By: |

Updated on: Jun 22, 2021 | 4:48 PM

Share

ಕೊವಿಡ್ 19 ಸಾಂಕ್ರಾಮಿಕ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಮೊದಲಿನಿಂದಲೂ ಆರೋಪ ಮಾಡುತ್ತಲೇ ಬಂದಿರುವ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ, ಇದೀಗ ಕೇಂದ್ರ ಸರ್ಕಾರದ ಕೊವಿಡ್​ 19 ನಿರ್ವಹಣೆ ಕುರಿತು ಶ್ವೇತಪತ್ರ ಹೊರಡಿಸಿದ್ದಾರೆ. ಶೀಘ್ರದಲ್ಲೇ ಅಪ್ಪಳಿಸಲಿರುವ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಕೊರೊನಾ ಪರಿಸ್ಥಿತಿಯನ್ನು ಇಷ್ಟು ದಿನವಂತೂ ಸರಿಯಾಗಿ ನಿಭಾಯಿಸಲಿಲ್ಲ. ಇನ್ನು ಮುಂದೆಯೂ ಸಹ ಸರಿಯಾಗಿ ನಿಭಾಯಿಸದೆ ಇದ್ದರೆ ಹೀಗೆ ಕೊರೊನಾದ ಹಲವು ಅಲೆಗಳು ಬರುತ್ತವೆ ಎಂದು ಎಚ್ಚರಿಸಿದ್ದಾರೆ.

ಇಂದು ಡಿಜಿಟಲ್​ ಪ್ರೆಸ್​ಕಾನ್ಫರೆನ್ಸ್​ನಲ್ಲಿ ಮಾತನಾಡಿದ ರಾಹುಲ್​ ಗಾಂಧಿ, ನಾನಿವತ್ತು ಹೊರಡಿಸಿದ ಶ್ವೇತಪತ್ರದ ಉದ್ದೇಶ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವುದಲ್ಲ. ಮೂರನೇ ಅಲೆಯ ಬಗ್ಗೆ ಈ ದೇಶದ ಜನರನ್ನು ಎಚ್ಚರಿಸುವುದು ಎಂದು ಹೇಳಿದ್ದಾರೆ. ಹಾಗೇ, ಕೇಂದ್ರ ಸರ್ಕಾರ ಮೊದಲು ಮತ್ತು ಎರಡನೇ ಅಲೆಯ ಕೊವಿಡ್​ 19ನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ. ಹಾಗಾಗಿ ಇವೆರಡೂ ಅಲೆಗಳು ಅತ್ಯಂತ ವಿನಾಶಕಾರಿಯಾಗಿ ಪರಿಣಮಿಸಿದ್ದವು ಎಂದು ಶ್ವೇತಪತ್ರದಲ್ಲಿ ಹೇಳಿದ್ದಾರೆ.

ಕೊರೊನಾ ಮೂರನೇ ಅಲೆ ಬರುತ್ತದೆ ಎಂಬುದು ಇಡೀ ದೇಶಕ್ಕೇ ಗೊತ್ತು. ಅದರಲ್ಲೂ ವೈರಸ್​ ರೂಪಾಂತರಗೊಳ್ಳುತ್ತಿರುವುದರಿಂದ ಅದು ಇನ್ನಷ್ಟು ಮಾರಣಾಂತಿಕ ಆಗಬಹುದು. ಸಾಂಕ್ರಾಮಿಕ ನಿರ್ವಹಣೆಗೆ ಸಂಬಂಧಿಸಿದಂತೆ ಯಾರೇನೇ ಸಲಹೆ ನೀಡಿದರೂ ಕೇಂದ್ರ ಸರ್ಕಾರ ಅದನ್ನು ಸ್ವೀಕರಿಸದೆ ನಿರ್ಲಕ್ಷ್ಯ ಮಾಡುತ್ತದೆ ಎಂದ ರಾಹುಲ್​ ಗಾಂಧಿ, ಸರ್ಕಾರದ ತೀವ್ರ ನಿರ್ಲಕ್ಷ್ಯ ಮತ್ತು ಕೆಟ್ಟ ನಿರ್ವಹಣೆಯಿಂದಾಗಿ ಇಡೀ ದೇಶಕ್ಕೆ ಅಪಾರ ನಷ್ಟವಾಗಿದೆ ಎಂದು ಹೇಳಿದರು.

ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಕೊವಿಡ್ 19 ಎರಡನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಸಿಕ್ಕಾಪಟೆ ಆಕ್ಸಿಜನ್​ ಕೊರತೆ ಎದುರಾಯಿತು. ಆಮ್ಲಜನಕವಿಲ್ಲದೆ ಜೀವ ಕಳೆದುಕೊಂಡವರಲ್ಲಿ ಶೇ.90ರಷ್ಟು ಜನರನ್ನು ಉಳಿಸಬಹುದಿತ್ತು. ಸರಿಯಾದ ಸಮಯದಲ್ಲಿ ಆಕ್ಸಿಜನ್ ಲಭ್ಯವಾಗುವಂತೆ ಮಾಡಿದ್ದರೆ ಅವರು ಬದುಕುಳಿಯುತ್ತಿದ್ದರು. ಆಕ್ಸಿಜನ್​ ಲಭ್ಯವಾಗದೆ ಇದ್ದಾಗ ಪ್ರಧಾನಿಯ ಕಣ್ಣೀರು ಜನರ ಜೀವ ರಕ್ಷಣೆ ಮಾಡಲಿಲ್ಲ ಎಂದು ರಾಹುಲ್​ ಗಾಂಧಿ ವ್ಯಂಗ್ಯ ಮಾಡಿದರು.

ಸಣ್ಣ ಉದ್ದಿಮೆಗಳಿಗೆ ಸಹಾಯ ಮಾಡಿ ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವ ಸಣ್ಣ ಉದ್ದಿಮೆದಾರರು ಮತ್ತು ಬಡವರಿಗೆ ಸಹಾಯ ಮಾಡಬೇಕು. ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ನೀಡಲೆಂದು ಕೊವಿಡ್​ 19 ಪರಿಹಾರ ನಿಧಿ ಸ್ಥಾಪಿಸಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ನಿನ್ನೆ ಒಂದೇ ದಿನ 85 ಲಕ್ಷ ಜನರಿಗೆ ಲಸಿಕೆ ಕೊಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಹೌದು ನಿನ್ನೆ ತುಂಬ ಒಳ್ಳೆಯ ಕೆಲಸ ಆಗಿದೆ. ಆದರೆ ಇದು ಯಾವುದೇ ಸಮಾರಂಭವಲ್ಲ. ಅದೊಂದು ಪ್ರಕ್ರಿಯೆ. ಇದನ್ನು ಶ್ರದ್ಧೆಯಿಂದ ಮುಂದುವರಿಸಬೇಕು. ಎಲ್ಲರಿಗೂ ಲಸಿಕೆ ಕೊಟ್ಟು ಮುಗಿಯುವವರೆಗೂ ನಿರಂತರವಾಗಿ ಈ ಪ್ರಕ್ರಿಯೆ ನಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಬಳಿ ಚರ್ಚಿಸಿದ ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

(Rahul Gandhi released a white paper on the Central governments covid 19 management)

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?