AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವ ಕೆಲವೇ ಗಂಟೆಗಳ ಮೊದಲು ಅಳಬೇಡ ಎಂದಿದ್ದರು ನನ್ನಜ್ಜಿ: ನೆನಪು ಮೆಲುಕು ಹಾಕಿದ ರಾಹುಲ್ ಗಾಂಧಿ

ಅಜ್ಜಿಯ ಅಂತ್ಯಕ್ರಿಯೆ ನಡೆದ ದಿನವು ನನ್ನ ಜೀವನದ 2ನೇ ಅತ್ಯಂತ ಕಠಿಣ ದಿನ ಅದಾಗಿತ್ತು ಎಂದು ಹೇಳಿದರು.

ಸಾಯುವ ಕೆಲವೇ ಗಂಟೆಗಳ ಮೊದಲು ಅಳಬೇಡ ಎಂದಿದ್ದರು ನನ್ನಜ್ಜಿ: ನೆನಪು ಮೆಲುಕು ಹಾಕಿದ ರಾಹುಲ್ ಗಾಂಧಿ
ಇಂದಿರಾ ಗಾಂಧಿ ಪಾರ್ಥಿವ ಶರೀರದೊಂದಿಗೆ ರಾಹುಲ್ ಗಾಂಧಿ (ಎಡಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 31, 2021 | 9:57 PM

Share

ದೆಹಲಿ: ಇಂದಿರಾ ಗಾಂಧಿ ಹತ್ಯೆ ಮತ್ತು ಅಂತ್ಯಕ್ರಿಯೆಯನ್ನು ನೆನಪಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಒಂದು ವೇಳೆ ನನಗೇನಾದರೂ ಆದರೆ ಅಳಬಾರದು ಎಂದು ಅಜ್ಜಿ ತಾನು ಸಾಯುವ ಕೆಲವೇ ಗಂಟೆಗಳ ಮೊದಲು ಹೇಳಿದ್ದರು’ ಎಂದು ನೆನಪಿಸಿಕೊಂಡರು. ಇಂದಿರಾ ಗಾಂಧಿ ಅವರ 37ನೇ ಪುಣ್ಯತಿಥಿ ಅಂಗವಾಗಿ ಯುಟ್ಯೂಬ್​ನಲ್ಲಿ ಬಿಡುಗಡೆಯಾಗಿರುವ ವಿಡಿಯೊದಲ್ಲಿ ಮಾತನಾಡಿರುವ ಅವರು, ಅಜ್ಜಿಯ ಅಂತ್ಯಕ್ರಿಯೆ ನಡೆದ ದಿನವು ನನ್ನ ಜೀವನದ 2ನೇ ಅತ್ಯಂತ ಕಠಿಣ ದಿನ ಅದಾಗಿತ್ತು ಎಂದು ಹೇಳಿದರು.

ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರನ್ನು 1984ರಲ್ಲಿ ಅವರ ಅಂಗರಕ್ಷಕರೇ ಹತ್ಯೆ ಮಾಡಿದ್ದರು. ‘ನನಗೆ ಏನಾದರೂ ಆದರೆ ನೀನು ಅಳಬಾರದು ಎಂದು ಹೇಳಿದ ಎರಡು-ಮೂರು ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದರು. ನನಗೆ ಅವರು ಹಾಗೆ ಏಕೆ ಹೇಳಿದರು ಎನ್ನುವುದು ಈವರೆಗೆ ಅರ್ಥವಾಗಲಿಲ್ಲ. ತಮಗೆ ಹಾಗೂ ತಮ್ಮ ಕುಟುಂಬ ಆ ದಿನ ಅನುಭವಿಸಿದ ಸಂಕಟದ ಕ್ಷಣಗಳ ಬಗ್ಗೆ ಅವರು ಬೇಸರ ತೋಡಿಕೊಂಡರು.

‘ತನ್ನನ್ನು ಕೊಲ್ಲಲಾಗುವುದು ಎಂಬ ಅನುಮಾನ ಅವರಿಗೆ (ಇಂದಿರಾ ಗಾಂಧಿ) ಬಂದಿತ್ತು. ಮನೆಯಲ್ಲಿದ್ದ ಎಲ್ಲರಿಗೂ ಈ ವಿಷಯ ಗೊತ್ತಿತ್ತು. ರೋಗ ಬಂದು ಸಾಯುವುದು ಕೆಟ್ಟ ಶಾಪ ಎಂದು ಊಟ ಮಾಡುವಾಗ ಒಮ್ಮೆ ಹೇಳಿದ್ದರು. ‘With love, in memory of my beloved Grandmother, Indira ji’ (ನನ್ನ ಪ್ರೀತಿಯ ಅಜ್ಜಿಯ ನೆನಪಿನೊಂದಿಗೆ) ಎಂಬ ಹೆಸರಿನ ವಿಡಿಯೊದಲ್ಲಿ ರಾಹುಲ್ ಗಾಂಧಿ ಮನದ ಮಾತು ಹಂಚಿಕೊಂಡಿದ್ದಾರೆ.

ತಾನು ನಂಬಿದ್ದ ತತ್ವ ಸಿದ್ಧಾಂತಗಳಿಗೆ ಮತ್ತು ತನ್ನ ದೇಶಕ್ಕಾಗಿ ಸಾಯುವುದು ಒಳ್ಳೆಯದು ಎಂಬುದು ಅವರ (ಇಂದಿರಾ ಗಾಂಧಿ) ಉದ್ದೇಶವಾಗಿತ್ತು. ನನಗೆ ಇಬ್ಬರು ಅಮ್ಮಂದಿರಿದ್ದರು. ನನ್ನ ಅಜ್ಜಿ ನನ್ನ ಪಾಲಿನ ಸೂಪರ್​ ಅಮ್ಮ ಆಗಿದ್ದರು. ಅಪ್ಪ ಸಿಟ್ಟು ಮಾಡಿಕೊಂಡಾಗ ನನ್ನ ಪರ ಮಾತನಾಡುತ್ತಿದ್ದರು. ಅಜ್ಜಿ ಸತ್ತ ದಿನ ನನಗೆ ತಾಯಿಯನ್ನು ಕಳೆದುಕೊಂಡಷ್ಟು ದುಃಖವಾಗಿತ್ತು ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿ ಅಂತಿಮಯಾತ್ರೆ ಮತ್ತು ಅಂತ್ಯಕ್ರಿಯೆಯ ದೃಶ್ಯಾವಳಿಗಳೂ ಈ ವಿಡಿಯೊದಲ್ಲಿವೆ. ಬಾಲಕ ರಾಹುಲ್ ಅಜ್ಜಿಯ ಸಾವಿನ ದಿನ ಶೋಕ ವ್ಯಕ್ತಪಡಿಸಿದ ದೃಶ್ಯವೂ ವಿಡಿಯೊದಲ್ಲಿದೆ. ಭಾನುವಾರ ಮುಂಜಾನೆ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸ್ಮಾರಕಕ್ಕೆ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು.

ಕೊನೆಯ ಕ್ಷಣದವರೆಗೂ ನನ್ನ ಅಜ್ಜಿಗೆ ದೇಶದ ಹಿತವೇ ಮುಖ್ಯವಾಗಿತ್ತು. ಆಕೆಯ ಬದುಕು ನಮಗೆ ಸ್ಫೂರ್ತಿ ಎಂದು ರಾಹುಲ್ ಗಾಂಧಿ ಹಿಂದಿ ಟ್ವೀಟ್​ನಲ್ಲಿ ಹೇಳಿದ್ದರು. ಮಹಿಳಾ ಶಕ್ತಿಯ ಅತ್ಯುತ್ತಮ ಉದಾಹರಣೆ. ಇಂದಿರಾ ಗಾಂಧಿ ಹುತಾತ್ಮರಾದ ದಿನದಂದು ಅವರಿಗೆ ನನ್ನ ನಮನಗಳು ಎಂದು ಹೇಳಿದರು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬೆನ್ನಲ್ಲೇ ಗೋವಾಕ್ಕೆ ತೆರಳಿದ ರಾಹುಲ್ ಗಾಂಧಿ; ಇಂದು ಮೀನುಗಾರರೊಂದಿಗೆ ಮಾತುಕತೆ ಇದನ್ನೂ ಓದಿ: RIP Puneeth Rajkumar: ನಟ ಪುನೀತ್ ರಾಜ್​ಕುಮಾರ್ ನಿಧನಕ್ಕೆ ರಾಹುಲ್ ಗಾಂಧಿ ಸೇರಿ ಹಲವು ಗಣ್ಯರ ಸಂತಾಪ

Published On - 9:57 pm, Sun, 31 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ