AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಬಿಜೆಪಿ, ಆರ್‌ಎಸ್‌ಎಸ್ ನಾಯಕರು ದಲಿತರನ್ನು ಓಲೈಸಲು ಅಂಬೇಡ್ಕರ್ ಮುಂದೆ ಕೈ ಜೋಡಿಸಿ, ಬೆನ್ನಿಗೆ ಚೂರಿ ಹಾಕುತ್ತಾರೆ: ರಾಹುಲ್ ಗಾಂಧಿ

ಬಿಜೆಪಿ(BJP) ಮತ್ತು ಆರ್‌ಎಸ್‌ಎಸ್(RSS) ನಾಯಕರು ಸಂವಿಧಾನ(Constitution)ವನ್ನು ಕತ್ತು ಹಿಸುಕಲು ಮತ್ತು ನಾಶಮಾಡಲು ಪ್ರಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Bharat Jodo Yatra: ಬಿಜೆಪಿ, ಆರ್‌ಎಸ್‌ಎಸ್ ನಾಯಕರು ದಲಿತರನ್ನು ಓಲೈಸಲು ಅಂಬೇಡ್ಕರ್ ಮುಂದೆ ಕೈ ಜೋಡಿಸಿ, ಬೆನ್ನಿಗೆ ಚೂರಿ ಹಾಕುತ್ತಾರೆ: ರಾಹುಲ್ ಗಾಂಧಿ
Rahul Gandhi
TV9 Web
| Edited By: |

Updated on: Nov 27, 2022 | 11:39 AM

Share

ಬಿಜೆಪಿ(BJP) ಮತ್ತು ಆರ್‌ಎಸ್‌ಎಸ್(RSS) ನಾಯಕರು ಸಂವಿಧಾನ(Constitution)ದ ಕತ್ತು ಹಿಸುಕಲು ಮತ್ತು ನಾಶಮಾಡಲು ಪ್ರಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬಿಜೆಪಿ, ಆರ್​ಎಸ್​ಎಸ್​ ನಾಯಕರು ದಲಿತರ ಓಲೈಸಲು  ಬಿಆರ್ ಅಂಬೇಡ್ಕರ್ ಅವರ ಮುಂದೆ ಕೈ ಜೋಡಿಸಿ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಮಧ್ಯಪ್ರದೇಶದಲ್ಲಿ ಉಪಸ್ಥಿತರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮೊವ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನವು ಕೇವಲ ಪುಸ್ತಕವಾಗಿರದೆ ಜೀವಂತ ಶಕ್ತಿ, ಚಿಂತನೆ ಮತ್ತು ಧ್ವನಿಯಾಗಿದ್ದು, ಆ ಶಕ್ತಿಯನ್ನು ನಾಶ ಮಾಡಲು ಆರ್‌ಎಸ್‌ಎಸ್ ಬಯಸುತ್ತಿದೆ ಎಂದು ಹೇಳಿದರು.

ನ್ಯಾಯಾಂಗ, ಮಾಧ್ಯಮ, ಸೇನೆ ಸೇರಿದಂತೆ ದೇಶದ ಪ್ರತಿಯೊಂದು ಸಂಸ್ಥೆಗಳಲ್ಲೂ ಸಂಘದ ಪ್ರಭಾವವಿದೆ ಎಂದು ರಾಹುಲ್ ಹೇಳಿದ್ದಾರೆ. ಸಂವಿಧಾನದಿಂದ ತ್ರಿವರ್ಣ ಧ್ವಜಕ್ಕೆ ಬಲ ಬಂದಿದೆ, ಆರ್‌ಎಸ್‌ಎಸ್ ತನ್ನ ಕೇಂದ್ರ ಕಚೇರಿಯಲ್ಲಿ 52 ವರ್ಷಗಳಿಂದ ರಾಷ್ಟ್ರಧ್ವಜವನ್ನು ಹಾರಿಸಿಲ್ಲ. ಅವರು (ಬಿಜೆಪಿ-ಆರ್‌ಎಸ್‌ಎಸ್) ಅಂಬೇಡ್ಕರ್ ಅವರ ಮುಂದೆ ಕೈ ಜೋಡಿಸಿ ನಂತರ ಬಾಬಾಸಾಹೇಬರು ನಿರ್ಮಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಂವಿಧಾನವನ್ನು ನಾಶಮಾಡಲು ಮತ್ತು ಹರಿದು ಹಾಕಲು ಪ್ರಯತ್ನಿಸುತ್ತಾರೆ.

ಅವರು ಎಂದಿಗೂ ಅಂಬೇಡ್ಕರ್ ಅವರನ್ನು ಬಹಿರಂಗವಾಗಿ ಅವಮಾನಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು. RSS ನವರು ಈಗ ಏನು ಮಾಡುತ್ತಿದ್ದಾರೆ? ಮೊದಲು ಅವರು ಗಾಂಧಿ ಮುಂದೆ ಕೈ ಜೋಡಿಸಲಿಲ್ಲ. ಮೊದಲು ಅವರು ಗೋಡ್ಸೆಯ ಮುಂದೆ ಕೈ ಜೋಡಿಸುತ್ತಿದ್ದರು ಆದರೆ ಇಂದು ಅವರು ಗಾಂಧಿಯ ಮುಂದೆ ಬಲವಂತವಾಗಿ ಬಾಗುತ್ತಿದ್ದಾರೆ, ಗಾಂಧಿಯವರ ಪ್ರತಿಮೆಯ ಮುಂದೆ ಕೈ ಜೋಡಿಸಿ ನಂತರ ಅವರ ಅಹಿಂಸೆಯ ಸಂದೇಶವನ್ನು ಅಳಿಸಲು ಪ್ರಯತ್ನಿಸುತ್ತಿದ್ದಾರೆ. ಆರ್​ಎಸ್​ಎಸ್​ ಮತ್ತು ಬಿಜೆಪಿಗೆ ಸಂವಿಧಾನವನ್ನು ಬಹಿರಂಗವಾಗಿ ನಾಶಮಾಡಲು ಧೈರ್ಯವಿಲ್ಲ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ