AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ನಿಯಮಾವಳಿ ಪಾಲಿಸಿ ಎಂಬ ಕೇಂದ್ರ ಆರೋಗ್ಯ ಸಚಿವರ ಪತ್ರ ನೆಪ: ರಾಹುಲ್ ಗಾಂಧಿ

ಕೋವಿಡ್ ಬರುತ್ತಿದೆ, ಆದ್ದರಿಂದ ಯಾತ್ರೆಯನ್ನು ನಿಲ್ಲಿಸಿ ಎಂದು ಅವರು ನನಗೆ ಪತ್ರ ಬರೆದಿದ್ದಾರೆ. ನೋಡಿ, ಈಗ ಯಾತ್ರೆಯನ್ನು ನಿಲ್ಲಿಸಲು ಸಕಾರಣಗಳನ್ನು ಹೇಳಲಾಗುತ್ತಿದೆ. ಮಾಸ್ಕ್ ಧರಿಸಿ, ಯಾತ್ರೆಯನ್ನು ನಿಲ್ಲಿಸಿ...ಇವೆಲ್ಲವೂ ನೆಪ, ಅವರು ಈ ದೇಶದ ಶಕ್ತಿ ಮತ್ತು ಸತ್ಯಕ್ಕೆ ಹೆದರುತ್ತಾರೆ ಎಂದ ರಾಹುಲ್ ಗಾಂಧಿ

ಕೋವಿಡ್ ನಿಯಮಾವಳಿ ಪಾಲಿಸಿ ಎಂಬ ಕೇಂದ್ರ ಆರೋಗ್ಯ ಸಚಿವರ ಪತ್ರ ನೆಪ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on:Dec 22, 2022 | 8:53 PM

Share

ದೆಹಲಿ: ದೇಶದಲ್ಲಿ ಕೋವಿಡ್ (Covid 19) ಉಲ್ಬಣಕ್ಕೆ ಸಂಬಂಧಿಸಿದಂತೆ ಹಠಾತ್ ಕ್ರಮವು ‘ಭಾರತ್ ಜೋಡೋ ಯಾತ್ರೆ’ಗೆ (Bharat Jodo Yatra)  ಅಡ್ಡಿಪಡಿಸುವ ತಂತ್ರವಾಗಿದೆ ಎಂದು ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಸೂಚಿಸಿದ ಗಂಟೆಗಳ ನಂತರ ಪಾದಯಾತ್ರೆಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi), ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸದಿದ್ದಲ್ಲಿ ಯಾತ್ರೆ ನಿಲ್ಲಿಸುವಂತೆ ಆರೋಗ್ಯ ಸಚಿವರು ಇತ್ತೀಚೆಗೆ ಅವರಿಗೆ ಬರೆದ ಪತ್ರವು ಒಂದು ನೆಪ ಆಗಿತ್ತು ಎಂದಿದ್ದಾರೆ. “ಈ ಯಾತ್ರೆ ಕಾಶ್ಮೀರದವರೆಗೆ ಸಾಗಲಿದೆ. ಈಗ ಅವರು (ಬಿಜೆಪಿ) ಹೊಸ ಐಡಿಯಾವನ್ನು ಮಾಡಿದ್ದಾರೆ.  ಕೋವಿಡ್ ಬರುತ್ತಿದೆ, ಆದ್ದರಿಂದ ಯಾತ್ರೆಯನ್ನು ನಿಲ್ಲಿಸಿ ಎಂದು ಅವರು ನನಗೆ ಪತ್ರ ಬರೆದಿದ್ದಾರೆ. ನೋಡಿ, ಈಗ ಯಾತ್ರೆಯನ್ನು ನಿಲ್ಲಿಸಲು ಸಕಾರಣಗಳನ್ನು ಹೇಳಲಾಗುತ್ತಿದೆ. ಮಾಸ್ಕ್ ಧರಿಸಿ, ಯಾತ್ರೆಯನ್ನು ನಿಲ್ಲಿಸಿ…ಇವೆಲ್ಲವೂ ನೆಪ, ಅವರು ಈ ದೇಶದ ಶಕ್ತಿ ಮತ್ತು ಸತ್ಯಕ್ಕೆ ಹೆದರುತ್ತಾರೆ ಎಂದು ಅವರು ಹರಿಯಾಣದ ನುಹ್‌ನಲ್ಲಿ ಮಾಧ್ಯಮದವರೊಡನೆ ಮಾತನಾಡಿದ ರಾಹುಲ್ ಹೇಳಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಕೋವಿಡ್ “ಪ್ರೋಟೋಕಾಲ್” ಅನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪತ್ರ ಬರೆದಿದ್ದರು. ಚೀನಾದಲ್ಲಿ ಉಲ್ಬಣಗೊಂಡ ನಂತರ ಕಳವಳಗಳನ್ನು ಉಲ್ಲೇಖಿಸಿದ ಮಾಂಡವಿಯಾ ಅವರು ಮಂಗಳವಾರ ತಮ್ಮ ಪತ್ರದಲ್ಲಿ, “ಪ್ರೋಟೋಕಾಲ್” ಅನುಸರಿಸಲು ಸಾಧ್ಯವಾಗದಿದ್ದರೆ “ರಾಷ್ಟ್ರೀಯ ಹಿತಾಸಕ್ತಿಯಿಂದ” ತಮ್ಮ ಯಾತ್ರೆಯನ್ನು ನಿಲ್ಲಿಸುವಂತೆ ರಾಹುಲ್ ಗಾಂಧಿಗೆ “ವಿನಂತಿ” ಮಾಡಿದ್ದರು.

ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳ ಬಳಕೆ ಸೇರಿದಂತೆ ಕೋವಿಡ್ ಪ್ರೋಟೋಕಾಲ್ ಅನ್ನು ಪಾದಯಾತ್ರೆಯಲ್ಲಿಕಟ್ಟುನಿಟ್ಟಾಗಿ ಅನುಸರಿಸಬೇಕು. ಲಸಿಕೆ ಹಾಕಿದವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕು ಎಂದು ನಾನು ವಿನಂತಿಸುತ್ತೇನೆ ಎಂದು ರಾಹುಲ್ ಗೆ ಬರೆದ ಪತ್ರದಲ್ಲಿ ಮಾಂಡವಿಯಾ ಹೇಳಿದ್ದಾರೆ. ಯಾತ್ರೆಯಲ್ಲಿ ಭಾಗವಹಿಸಿದ ನಂತರ ಹಲವಾರು ಜನರು ವೈರಸ್‌ಗೆ ತುತ್ತಾಗಿದ್ದಾರೆ ಎಂದು ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರನ್ನು ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ.

ಯಾವುದೇ ಪ್ರೋಟೋಕಾಲ್ ಜಾರಿಗೆ ಬಂದರೂ ನಾವು ಖಂಡಿತವಾಗಿಯೂ ಅನುಸರಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ, ಕೋವಿಡ್ ಪರೀಕ್ಷೆ ಹೆಚ್ಚಿಸಲು ಸೂಚನೆ: ಕೋವಿಡ್ ಪರಿಸ್ಥಿತಿ ಪರಿಶೀಲನೆ ಸಭೆಯಲ್ಲಿ ಮೋದಿ

ವಿಮಾನ ನಿಲ್ದಾಣಗಳಲ್ಲಿ ಒಳಬರುವ ಅಂತರರಾಷ್ಟ್ರೀಯ ಪ್ರಯಾಣಿಕರ ಕೋವಿಡ್ ಪರೀಕ್ಷೆಗಾಗಿ ಯಾದೃಚ್ಛಿಕ ಮಾದರಿಯನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಸಂಸತ್ತಿಗೆ ತಿಳಿಸಿದೆ. ಚೀನಾದಲ್ಲಿ ಭಾರೀ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲನಾ ಸಭೆ ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Thu, 22 December 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!