AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ದಲಿತ ಯುವತಿಯನ್ನು ಮದುವೆಯಾಗಲಿ..ನಮ್ಮ ಇಲಾಖೆಯಿಂದ 2.5 ಲಕ್ಷ ರೂ. ಕೊಡುತ್ತೇನೆ: ರಾಮದಾಸ್​ ಅಠಾವಳೆ

ರಾಹುಲ್​ ಗಾಂಧಿಯವರು ನನ್ನ ಅತ್ಯುತ್ತಮ ಸ್ನೇಹಿತ. ಅವರು ಅಂದು ಬಜೆಟ್ ಭಾಷಣದ ವೇಳೆ ಹಮ್​ ದೋ, ಹಮಾರೆ ದೋ ಎಂಬ ಘೋಷವಾಕ್ಯ ಬಳಸಿದ್ದಾರೆ. ಆದರೆ ಈ ವಾಕ್ಯವನ್ನು ಕುಟುಂಬ ಯೋಜನೆಗಾಗಿ ಬಳಕೆ ಮಾಡಲಾಗುತ್ತದೆ ಎಂದು ರಾಮದಾಸ್​ ಅಠಾವಳೆ ಹೇಳಿದ್ದಾರೆ.

ರಾಹುಲ್ ಗಾಂಧಿ ದಲಿತ ಯುವತಿಯನ್ನು ಮದುವೆಯಾಗಲಿ..ನಮ್ಮ ಇಲಾಖೆಯಿಂದ 2.5 ಲಕ್ಷ ರೂ. ಕೊಡುತ್ತೇನೆ: ರಾಮದಾಸ್​ ಅಠಾವಳೆ
ರಾಮದಾಸ್ ಅಠಾವಳೆ (ಸಂಗ್ರಹ ಚಿತ್ರ)
Lakshmi Hegde
|

Updated on:Feb 17, 2021 | 7:52 PM

Share

ದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುವ ರಾಹುಲ್ ಗಾಂಧಿ, ಎರಡು ದಿನಗಳ ಹಿಂದೆ ಲೋಕಸಭೆಯಲ್ಲಿ ಬಜೆಟ್ ಭಾಷಣೆ ಮಾಡುವ ವೇಳೆ ಹಮ್​ ದೋ ಹಮಾರೆ ದೋ (hum do humare do) ಎಂಬ ವಾಕ್ಯದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಅಂದು ಬಿಜೆಪಿ ಸಂಸದರು ಗದ್ದಲ ಮಾಡಿ, ಇದು ಬಜೆಟ್ ಭಾಷಣ, ನಿಯಮಗಳನ್ನು ಉಲ್ಲಂಘಿಸಬೇಡಿ ಎಂದು ರಾಹುಲ್​ ಗಾಂಧಿಯವರನ್ನು ಎಚ್ಚರಿಸಿದ್ದರೂ, ಯಾವುದಕ್ಕೂ ಬಗ್ಗದೆ ವಾಗ್ದಾಳಿ ನಡೆಸಿದ್ದರು. ಅಂದು ಹಮ್​ ದೋ, ಹಮಾರೆ ದೋ ಎಂದಿದ್ದ ರಾಹುಲ್ ಗಾಂಧಿಗೆ ಇಂದು ಬಿಜೆಪಿ ಸಚಿವ ರಾಮದಾಸ್​ ಅಠಾವಳೆ ತಿರುಗೇಟು ನೀಡಿದ್ದಾರೆ.

ರಾಹುಲ್​ ಗಾಂಧಿಯವರು ನನ್ನ ಅತ್ಯುತ್ತಮ ಸ್ನೇಹಿತ. ಅವರು ಅಂದು ಬಜೆಟ್ ಭಾಷಣದ ವೇಳೆ ಹಮ್​ ದೋ, ಹಮಾರೆ ದೋ ಎಂಬ ಘೋಷವಾಕ್ಯ ಬಳಸಿದ್ದಾರೆ. ಆದರೆ ಈ ವಾಕ್ಯವನ್ನು ಕುಟುಂಬ ಯೋಜನೆಗಾಗಿ ಬಳಕೆ ಮಾಡಲಾಗುತ್ತದೆ. ಹಾಗಾಗಿ ರಾಹುಲ್ ಗಾಂಧಿ ಹಮ್​ ದೋ, ಹಮಾರೆ ದೋ ಎಂದು ಹೇಳಬೇಕೆಂದರೆ ಮೊದಲು ಮದುವೆಯಾಗಬೇಕು. ಅದರಲ್ಲೂ ರಾಹುಲ್ ಗಾಂಧಿ ಒಬ್ಬ ದಲಿತ ಯುವತಿಯನ್ನು ಮದುವೆಯಾದರೆ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸು ಮಾಡಿದಂತೆ ಆಗುತ್ತದೆ. ಜಾತಿವಾದವನ್ನು ಕೊನೆಗೊಳಿಸಿದಂತೆಯೂ ಆಗುತ್ತದೆ. ಹಾಗೇ ಎಲ್ಲ ಯುವಕರಿಗೂ ಸ್ಫೂರ್ತಿಯಾಗುತ್ತಾರೆ ಎಂದು ಅಠಾವಳೆ ಹೇಳಿದ್ದಾರೆ.

ಒಬ್ಬ ದಲಿತ ಯುವತಿಯನ್ನು ಮದುವೆಯಾಗಿ ಎಂದು ರಾಹುಲ್ ಗಾಂಧಿಯವರಿಗೆ ನಾನು ಸಲಹೆ ನೀಡುತ್ತೇನೆ. ಅವರೇನಾದರೂ ಹೀಗೆ ಅಂತರ್ಜಾತಿ ವಿವಾಹ ಆದರೆ ನಮ್ಮ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2.5 ಲಕ್ಷ ರೂಪಾಯಿ ನೀಡುತ್ತೇವೆ ಎಂದೂ ಅಠಾವಳೆ ತಿಳಿಸಿದ್ದಾರೆ.

ಗೋ ಕೊರೊನಾ ಎಂದಿದ್ದ ಸಚಿವ ರಾಮದಾಸ್ ಅಠಾವಳೆ ಗೋ ಕರೊನಾ..ಗೋ ಕರೊನಾ ಎಂದು ಕೂಗುತ್ತಿರುವ ವಿಡಿಯೋವೊಂದು ಕಳೆದ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗಿತ್ತು. ಅದಾದ ನಂತರ ರೂಪಾಂತರ ಕೊರೊನಾ ಕಾಲಿಟ್ಟಾಗ (2020ರ ಡಿಸೆಂಬರ್) ಪ್ರತಿಕ್ರಿಯೆ ನೀಡಿದ್ದ ಅಠಾವಳೆ, ಆಗ ನಾನು ಗೋ ಕೊರೊನಾ ಗೋ ಎಂದಿದ್ದೆ, ಅದೀಗ ಹೋಗುತ್ತಿದೆ..ಈ ಹೊಸ ಕೊರೊನಾ ಹೋಗಲೆಂದು ನಾನು, ನೋ ಕೊರೊನಾ ನೋ ಎನ್ನುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: Aishwarya – Amartya Reception: ಇಂದು ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಆರತಕ್ಷತೆ, ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಹಲವರಿಗೆ ಆಹ್ವಾನ

Published On - 7:48 pm, Wed, 17 February 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!