AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ನಲ್ಲಿ ಮಾತನಾಡೋಕೆ ಬಿಡಲ್ಲ, ಟ್ವಿಟರ್​ನಲ್ಲೂ ಅವಕಾಶ ಇಲ್ಲ; ಇದು ಪ್ರಜಾಪ್ರಭುತ್ವದ ಮೇಲಿನ‌ ದಾಳಿ: ರಾಹುಲ್​ ಗಾಂಧಿ

ಟ್ವಿಟರ್ ನಿಷ್ಪಕ್ಷಪಾತ, ವಸ್ತುನಿಷ್ಠ ವೇದಿಕೆಯಾಗಿ ಇಲ್ಲ. ಅದು ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ. ನಮ್ಮ ರಾಜಕೀಯವನ್ನು ನಾವೇ ನಿರ್ಧರಿಸಬೇಕೋ ಬೇರೆಯವರೋ? ಎಂದು ಭಾರತೀಯರಾಗಿ ನಾವು ಪ್ರಶ್ನೆ ಕೇಳಬೇಕು: ರಾಹುಲ್​ ಗಾಂಧಿ

ಸಂಸತ್​ನಲ್ಲಿ ಮಾತನಾಡೋಕೆ ಬಿಡಲ್ಲ, ಟ್ವಿಟರ್​ನಲ್ಲೂ ಅವಕಾಶ ಇಲ್ಲ; ಇದು ಪ್ರಜಾಪ್ರಭುತ್ವದ ಮೇಲಿನ‌ ದಾಳಿ: ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
Follow us
TV9 Web
| Updated By: Skanda

Updated on: Aug 13, 2021 | 12:06 PM

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಹಾಗೂ ಕೆಲ ನಾಯಕರ ವೈಯಕ್ತಿಕ ಖಾತೆಯನ್ನು ಟ್ವಿಟರ್​ (Twitter) ತಾತ್ಕಾಲಿಕವಾಗಿ ತಡೆಹಿಡಿದಿರುವುದನ್ನು ಈಗಾಗಲೇ ಕಾಂಗ್ರೆಸ್​ (Congress) ಖಂಡಿಸಿದೆ. ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ನಮ್ಮ ರಾಜಕೀಯ (Politics) ಪ್ರಕ್ರಿಯೆಯಲ್ಲಿ ಟ್ವಿಟರ್‌ನಿಂದ ಹಸ್ತಕ್ಷೇಪ ಆಗುತ್ತಿದೆ. ನನ್ನ‌ ಟ್ವಿಟರ್ ಖಾತೆಯನ್ನು ಬಂದ್ ಮಾಡಲಾಗಿದೆ. ಕಂಪನಿಯಿಂದ ನಮ್ಮ ರಾಜಕೀಯ ನಿರ್ಧರಿಸುವ ಪ್ರಯತ್ನ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಟ್ವಿಟರ್ ವಿರುದ್ಧ ಕೈ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದು, ರಾಜಕಾರಣಿಯಾಗಿ ನಾನು ಇದನ್ನು ಇಷ್ಟಪಡುವುದಿಲ್ಲ. ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ‌ ದಾಳಿ ಎಂದು ಹೇಳಿದ್ದಾರೆ. ನಮಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಭರವಸೆ ಬೆಳಕಾಗಿ ಟ್ವಿಟರ್ ಇದೆ ಎಂದು ಭಾವಿಸಿದ್ದೆ. ಆದರೆ ಟ್ವಿಟರ್ ಆ ರೀತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವಿಟರ್ ನಿಷ್ಪಕ್ಷಪಾತ, ವಸ್ತುನಿಷ್ಠ ವೇದಿಕೆಯಾಗಿ ಇಲ್ಲ. ಅದು ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ. ನಮ್ಮ ರಾಜಕೀಯವನ್ನು ನಾವೇ ನಿರ್ಧರಿಸಬೇಕೋ ಬೇರೆಯವರೋ? ಎಂದು ಭಾರತೀಯರಾಗಿ ನಾವು ಪ್ರಶ್ನೆ ಕೇಳಬೇಕು. ಬ್ಯುಸಿನೆಸ್ ನಡೆಸುವ ಕಂಪನಿಯು ನಮ್ಮ ರಾಜಕೀಯವನ್ನು ನಿರ್ಧರಿಸಲು ಯತ್ನಿಸುತ್ತಿರುವುದನ್ನು ಒಪ್ಪಲಾಗದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟ್ವಿಟರ್ ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ‌ಹಸ್ತಕ್ಷೇಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ನಮಗೆ ಪಾರ್ಲಿಮೆಂಟ್​ನಲ್ಲಿ ಮಾತನಾಡಲು ಅವಕಾಶ ಕೊಡದ ಸರ್ಕಾರದ ನಡೆಗೂ ಇದಕ್ಕೂ ವ್ಯತ್ಯಾಸ ಇಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

(Rahul Gandhi slams twitter and Union Government says they are destroying Democracy)

ಇದನ್ನೂ ಓದಿ: ಐವರು ಹಿರಿಯ ನಾಯಕರ ಟ್ವಿಟರ್​ ಖಾತೆ ತಾತ್ಕಾಲಿಕ ಅಮಾನತು: ಲಾರ್ಡ್​ ನರೇಂದ್ರ ಮೋದಿ ಕಾರಣವೆಂದ ಕಾಂಗ್ರೆಸ್​ 

Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ