AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ನಲ್ಲಿ ಮಾತನಾಡೋಕೆ ಬಿಡಲ್ಲ, ಟ್ವಿಟರ್​ನಲ್ಲೂ ಅವಕಾಶ ಇಲ್ಲ; ಇದು ಪ್ರಜಾಪ್ರಭುತ್ವದ ಮೇಲಿನ‌ ದಾಳಿ: ರಾಹುಲ್​ ಗಾಂಧಿ

ಟ್ವಿಟರ್ ನಿಷ್ಪಕ್ಷಪಾತ, ವಸ್ತುನಿಷ್ಠ ವೇದಿಕೆಯಾಗಿ ಇಲ್ಲ. ಅದು ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ. ನಮ್ಮ ರಾಜಕೀಯವನ್ನು ನಾವೇ ನಿರ್ಧರಿಸಬೇಕೋ ಬೇರೆಯವರೋ? ಎಂದು ಭಾರತೀಯರಾಗಿ ನಾವು ಪ್ರಶ್ನೆ ಕೇಳಬೇಕು: ರಾಹುಲ್​ ಗಾಂಧಿ

ಸಂಸತ್​ನಲ್ಲಿ ಮಾತನಾಡೋಕೆ ಬಿಡಲ್ಲ, ಟ್ವಿಟರ್​ನಲ್ಲೂ ಅವಕಾಶ ಇಲ್ಲ; ಇದು ಪ್ರಜಾಪ್ರಭುತ್ವದ ಮೇಲಿನ‌ ದಾಳಿ: ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
TV9 Web
| Edited By: |

Updated on: Aug 13, 2021 | 12:06 PM

Share

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಹಾಗೂ ಕೆಲ ನಾಯಕರ ವೈಯಕ್ತಿಕ ಖಾತೆಯನ್ನು ಟ್ವಿಟರ್​ (Twitter) ತಾತ್ಕಾಲಿಕವಾಗಿ ತಡೆಹಿಡಿದಿರುವುದನ್ನು ಈಗಾಗಲೇ ಕಾಂಗ್ರೆಸ್​ (Congress) ಖಂಡಿಸಿದೆ. ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ನಮ್ಮ ರಾಜಕೀಯ (Politics) ಪ್ರಕ್ರಿಯೆಯಲ್ಲಿ ಟ್ವಿಟರ್‌ನಿಂದ ಹಸ್ತಕ್ಷೇಪ ಆಗುತ್ತಿದೆ. ನನ್ನ‌ ಟ್ವಿಟರ್ ಖಾತೆಯನ್ನು ಬಂದ್ ಮಾಡಲಾಗಿದೆ. ಕಂಪನಿಯಿಂದ ನಮ್ಮ ರಾಜಕೀಯ ನಿರ್ಧರಿಸುವ ಪ್ರಯತ್ನ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಟ್ವಿಟರ್ ವಿರುದ್ಧ ಕೈ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದು, ರಾಜಕಾರಣಿಯಾಗಿ ನಾನು ಇದನ್ನು ಇಷ್ಟಪಡುವುದಿಲ್ಲ. ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ‌ ದಾಳಿ ಎಂದು ಹೇಳಿದ್ದಾರೆ. ನಮಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಭರವಸೆ ಬೆಳಕಾಗಿ ಟ್ವಿಟರ್ ಇದೆ ಎಂದು ಭಾವಿಸಿದ್ದೆ. ಆದರೆ ಟ್ವಿಟರ್ ಆ ರೀತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವಿಟರ್ ನಿಷ್ಪಕ್ಷಪಾತ, ವಸ್ತುನಿಷ್ಠ ವೇದಿಕೆಯಾಗಿ ಇಲ್ಲ. ಅದು ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ. ನಮ್ಮ ರಾಜಕೀಯವನ್ನು ನಾವೇ ನಿರ್ಧರಿಸಬೇಕೋ ಬೇರೆಯವರೋ? ಎಂದು ಭಾರತೀಯರಾಗಿ ನಾವು ಪ್ರಶ್ನೆ ಕೇಳಬೇಕು. ಬ್ಯುಸಿನೆಸ್ ನಡೆಸುವ ಕಂಪನಿಯು ನಮ್ಮ ರಾಜಕೀಯವನ್ನು ನಿರ್ಧರಿಸಲು ಯತ್ನಿಸುತ್ತಿರುವುದನ್ನು ಒಪ್ಪಲಾಗದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟ್ವಿಟರ್ ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ‌ಹಸ್ತಕ್ಷೇಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ನಮಗೆ ಪಾರ್ಲಿಮೆಂಟ್​ನಲ್ಲಿ ಮಾತನಾಡಲು ಅವಕಾಶ ಕೊಡದ ಸರ್ಕಾರದ ನಡೆಗೂ ಇದಕ್ಕೂ ವ್ಯತ್ಯಾಸ ಇಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

(Rahul Gandhi slams twitter and Union Government says they are destroying Democracy)

ಇದನ್ನೂ ಓದಿ: ಐವರು ಹಿರಿಯ ನಾಯಕರ ಟ್ವಿಟರ್​ ಖಾತೆ ತಾತ್ಕಾಲಿಕ ಅಮಾನತು: ಲಾರ್ಡ್​ ನರೇಂದ್ರ ಮೋದಿ ಕಾರಣವೆಂದ ಕಾಂಗ್ರೆಸ್​ 

Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ