AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು

1995ರ ವಕ್ಫ್ ಕಾಯಿದೆಗೆ ತಿದ್ದುಪಡಿ ತರುವ ವಕ್ಫ್ (ತಿದ್ದುಪಡಿ) ಮಸೂದೆ, 2024ರ ಚರ್ಚೆಯ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಹೇಗೆ ಅಪಹಾಸ್ಯ ಮಾಡಿದ್ದಾರೆ ಎಂಬುದನ್ನು ತೋರಿಸುವ ವೀಡಿಯೊಗಳು ವೈರಲ್ ಆಗಿವೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು
ರಾಹುಲ್ ಗಾಂಧಿ ನಿದ್ರೆ
ಸುಷ್ಮಾ ಚಕ್ರೆ
|

Updated on: Aug 08, 2024 | 9:27 PM

Share

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿರುವಾಗ ನಿದ್ದೆಗೆ ಜಾರಿದ್ದಾರೆ. ಈ ಕುರಿತಾದ ಫೋಟೋಗಳು, ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ಚರ್ಚೆಯ ಸಮಯದಲ್ಲಿ ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಲೇವಡಿ ಮಾಡಿದ್ದಾರೆ.

ಬಿಜೆಪಿ ಸಂಸದರು ನಗುತ್ತಾ ವಿಪಕ್ಷದ ಸಂಸದರನ್ನು ಮೂದಲಿಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ನಿದ್ರಿಸುತ್ತಿರುವುದನ್ನು ಕಾಣಬಹುದು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಮಾತನಾಡುತ್ತಿರುವುದು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರ ಪಕ್ಕದಲ್ಲಿ ಕುಳಿತಿರುವುದನ್ನು ವೀಡಿಯೊ ತೋರಿಸಿದೆ.

ಕಿರಣ್ ರಿಜಿಜು ಮಾತನಾಡುತ್ತಿದ್ದಂತೆ, ಗಿರಿರಾಜ್ ಸಿಂಗ್ ಮತ್ತು ಕಾಂಗ್ರೆಸ್ ಸಂಸದರು ನಿದ್ದೆಗೆ ಜಾರಿದ್ದಾರೆ.

ಇದನ್ನೂ ಓದಿ: Video: ಖುಷಿಯಿಂದ ಡಾನ್ಸ್​​​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಕುಸಿದು ಬಿದ್ದು ಸಾವು; ವಿಡಿಯೋ ಇಲ್ಲಿದೆ ನೋಡಿ

ಇದ್ದಕ್ಕಿದ್ದಂತೆ, ಭೂಪೇಂದ್ರ ಯಾದವ್ ಮತ್ತು ಜಿತೇಂದ್ರ ಸಿಂಗ್ ಸೇರಿದಂತೆ ಕಿರಣ್ ರಿಜಿಜು ಪಕ್ಕದಲ್ಲಿ ಕುಳಿತಿರುವ ಬಿಜೆಪಿ ಸಂಸದರು ನಿದ್ರಿಸುತ್ತಿರುವವರ ಕಡೆ ಕೈ ತೋರಿಸಿ ನಗುತ್ತಾರೆ. “ಅದಕ್ಕಾಗಿಯೇ ನಾನು ನಿಮಗೆ ನಿದ್ದೆ ಬರುವಂತೆ ಮಾಡುವುದರಿಂದ ಮಧ್ಯೆ ಮಾತನಾಡಬೇಡಿ ಅಥವಾ ಪದೇ ಪದೇ ಅಡ್ಡಿಪಡಿಸಬೇಡಿ ಎಂದು ಹೇಳುತ್ತೇನೆ” ಎಂದು ಕಿರಣ್ ರಿಜಿಜು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್