AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಭಾರತ್ ಜೋಡೋ ಯಾತ್ರೆಯ ವಿಶ್ರಾಂತಿ ವೇಳೆ ಮನೆ ಮಾಲೀಕಳನ್ನೇ ಹೊರಗೆ ನಿಲ್ಲಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರ 3,570 ಕಿ.ಮೀ ಉದ್ದದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 5ರಂದು ಜಲಾವರ್‌ನಿಂದ ರಾಜಸ್ಥಾನವನ್ನು ಪ್ರವೇಶಿಸಿತು.

Rahul Gandhi: ಭಾರತ್ ಜೋಡೋ ಯಾತ್ರೆಯ ವಿಶ್ರಾಂತಿ ವೇಳೆ ಮನೆ ಮಾಲೀಕಳನ್ನೇ ಹೊರಗೆ ನಿಲ್ಲಿಸಿದ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆ ವೇಳೆ ತನ್ನ ಮನೆಯ ಹೊರಗೆ ಕಾಯುತ್ತಾ ನಿಂತ ಮಹಿಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 09, 2022 | 6:14 PM

Share

ಕೋಟಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ಫಾರ್ಮ್​ಹೌಸ್​ ಒಂದರಲ್ಲಿ ಚಹಾ ಮತ್ತು ತಿಂಡಿಯನ್ನು ಸೇವಿಸುತ್ತಿರುವಾಗ ಆ ಫಾರ್ಮ್​ಹೌಸ್​ನ ಮಾಲೀಕರಾದ ಮಹಿಳೆ ಹೊರಗೆ ನಿಂತು ಕಾಯುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಡಿಸೆಂಬರ್ 7ರಂದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ರಾಜಸ್ಥಾನದ ಕೋಟಾ ಜಿಲ್ಲೆಯ ಲಾಡ್‌ಪುರ ಬ್ಲಾಕ್‌ಗೆ ಪ್ರವೇಶಿಸಿದಾಗ ಈ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ರಾಂತಿಗಾಗಿ ಮನೆಯೊಂದಕ್ಕೆ ಹೋದಾಗ ಆ ಮನೆಯ ಒಡತಿ ತನ್ನ ಮನೆಯ ಹೊರಗೆ ಕಾಯುತ್ತಿರುವ ಹಲವಾರು ವಿಡಿಯೋಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈ ವಿಷಯವು ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ಶಾಲಾ ಶಿಕ್ಷಕರೊಬ್ಬರ ಅಮಾನತು

ರಾಹುಲ್ ಗಾಂಧಿ ಅವರ 3,570 ಕಿ.ಮೀ ಉದ್ದದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 5ರಂದು ಜಲಾವರ್‌ನಿಂದ ರಾಜಸ್ಥಾನವನ್ನು ಪ್ರವೇಶಿಸಿತು. ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮದ ಎರಡನೇ ದಿನದಂದು ಕೋಟಾ ಜಿಲ್ಲೆಯ ಎನ್‌ಎಚ್ -52 ರ ಗೋಪಾಲಪುರ ಗ್ರಾಮದಲ್ಲಿರುವ ಲಾಡ್‌ಪುರ ಪಂಚಾಯತ್ ಸಮಿತಿ ಉಪಾಧ್ಯಕ್ಷ ಅಶೋಕ್ ಮೀನಾ ಅವರ ಫಾರ್ಮ್‌ಹೌಸ್‌ನಲ್ಲಿ ರಾಹುಲ್ ಗಾಂಧಿ ಮತ್ತು ಕೆಲವು ಕಾಂಗ್ರೆಸ್ ನಾಯಕರು ವಿಶ್ರಾಂತಿ ಪಡೆದರು. ಸುಮಾರು 40 ನಿಮಿಷಗಳ ಕಾಲ ಅವರು ಅಲ್ಲಿಯೇ ಇದ್ದರು.

ಇದನ್ನೂ ಓದಿ: ಭರವಸೆ ಈಡೇರಿಸಲಾಗುವುದು: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ನಂತರ ರಾಹುಲ್ ಗಾಂಧಿ ಭರವಸೆ

ಈ ಮಧ್ಯೆ ಅಶೋಕ್ ಮೀನಾ ಅವರ ತಾಯಿ ಊರ್ಮಿಳಾ ಮೀನಾ ಆ ಫಾರ್ಮ್​ಹೌಸ್​ಗೆ ಹೋಗಿದ್ದರು. ಆದರೆ, ಆ ವೇಳೆಗೆ ಅಶೋಕ್ ಮೀನಾ ಅವರ ತಾಯಿ ಊರ್ಮಿಳಾ ಮೀನಾಗೆ ರಾಹುಲ್ ಗಾಂಧಿಯ ಭದ್ರತಾ ಸಿಬ್ಬಂದಿ ಒಳಗೆ ಹೋಗಲು ಅನುಮತಿ ನೀಡಲಿಲ್ಲ. ಭದ್ರತೆಯ ದೃಷ್ಟಿಯಿಂದ ರಾಹುಲ್ ಗಾಂಧಿ ಮತ್ತಿತರ ನಾಯಕರು ಆ ಸ್ಥಳದಿಂದ ಹೊರಡುವವರೆಗೂ ಭದ್ರತಾ ಸಿಬ್ಬಂದಿ ಅವರನ್ನು ಫಾರ್ಮ್‌ಹೌಸ್‌ನೊಳಗೆ ಹೋಗಲು ಬಿಡಲಿಲ್ಲ.

ಹೀಗಾಗಿ, ತಮ್ಮದೇ ಫಾರ್ಮ್​ಹೌಸ್​ನಲ್ಲಿ ಊರ್ಮಿಳಾ ಹೊರಗೆ ನಿಂತು ಸುಮಾರು 40 ನಿಮಿಷಗಳ ಕಾಲ ಕಾಯಬೇಕಾಯಿತು. ಈ ಘಟನೆಯ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್