AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಭಾರತ್ ಜೋಡೋ ಯಾತ್ರೆಯ ವಿಶ್ರಾಂತಿ ವೇಳೆ ಮನೆ ಮಾಲೀಕಳನ್ನೇ ಹೊರಗೆ ನಿಲ್ಲಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರ 3,570 ಕಿ.ಮೀ ಉದ್ದದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 5ರಂದು ಜಲಾವರ್‌ನಿಂದ ರಾಜಸ್ಥಾನವನ್ನು ಪ್ರವೇಶಿಸಿತು.

Rahul Gandhi: ಭಾರತ್ ಜೋಡೋ ಯಾತ್ರೆಯ ವಿಶ್ರಾಂತಿ ವೇಳೆ ಮನೆ ಮಾಲೀಕಳನ್ನೇ ಹೊರಗೆ ನಿಲ್ಲಿಸಿದ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆ ವೇಳೆ ತನ್ನ ಮನೆಯ ಹೊರಗೆ ಕಾಯುತ್ತಾ ನಿಂತ ಮಹಿಳೆ
TV9 Web
| Edited By: |

Updated on: Dec 09, 2022 | 6:14 PM

Share

ಕೋಟಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ಫಾರ್ಮ್​ಹೌಸ್​ ಒಂದರಲ್ಲಿ ಚಹಾ ಮತ್ತು ತಿಂಡಿಯನ್ನು ಸೇವಿಸುತ್ತಿರುವಾಗ ಆ ಫಾರ್ಮ್​ಹೌಸ್​ನ ಮಾಲೀಕರಾದ ಮಹಿಳೆ ಹೊರಗೆ ನಿಂತು ಕಾಯುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಡಿಸೆಂಬರ್ 7ರಂದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ರಾಜಸ್ಥಾನದ ಕೋಟಾ ಜಿಲ್ಲೆಯ ಲಾಡ್‌ಪುರ ಬ್ಲಾಕ್‌ಗೆ ಪ್ರವೇಶಿಸಿದಾಗ ಈ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ರಾಂತಿಗಾಗಿ ಮನೆಯೊಂದಕ್ಕೆ ಹೋದಾಗ ಆ ಮನೆಯ ಒಡತಿ ತನ್ನ ಮನೆಯ ಹೊರಗೆ ಕಾಯುತ್ತಿರುವ ಹಲವಾರು ವಿಡಿಯೋಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈ ವಿಷಯವು ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: Bharat Jodo: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ಶಾಲಾ ಶಿಕ್ಷಕರೊಬ್ಬರ ಅಮಾನತು

ರಾಹುಲ್ ಗಾಂಧಿ ಅವರ 3,570 ಕಿ.ಮೀ ಉದ್ದದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 5ರಂದು ಜಲಾವರ್‌ನಿಂದ ರಾಜಸ್ಥಾನವನ್ನು ಪ್ರವೇಶಿಸಿತು. ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮದ ಎರಡನೇ ದಿನದಂದು ಕೋಟಾ ಜಿಲ್ಲೆಯ ಎನ್‌ಎಚ್ -52 ರ ಗೋಪಾಲಪುರ ಗ್ರಾಮದಲ್ಲಿರುವ ಲಾಡ್‌ಪುರ ಪಂಚಾಯತ್ ಸಮಿತಿ ಉಪಾಧ್ಯಕ್ಷ ಅಶೋಕ್ ಮೀನಾ ಅವರ ಫಾರ್ಮ್‌ಹೌಸ್‌ನಲ್ಲಿ ರಾಹುಲ್ ಗಾಂಧಿ ಮತ್ತು ಕೆಲವು ಕಾಂಗ್ರೆಸ್ ನಾಯಕರು ವಿಶ್ರಾಂತಿ ಪಡೆದರು. ಸುಮಾರು 40 ನಿಮಿಷಗಳ ಕಾಲ ಅವರು ಅಲ್ಲಿಯೇ ಇದ್ದರು.

ಇದನ್ನೂ ಓದಿ: ಭರವಸೆ ಈಡೇರಿಸಲಾಗುವುದು: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ನಂತರ ರಾಹುಲ್ ಗಾಂಧಿ ಭರವಸೆ

ಈ ಮಧ್ಯೆ ಅಶೋಕ್ ಮೀನಾ ಅವರ ತಾಯಿ ಊರ್ಮಿಳಾ ಮೀನಾ ಆ ಫಾರ್ಮ್​ಹೌಸ್​ಗೆ ಹೋಗಿದ್ದರು. ಆದರೆ, ಆ ವೇಳೆಗೆ ಅಶೋಕ್ ಮೀನಾ ಅವರ ತಾಯಿ ಊರ್ಮಿಳಾ ಮೀನಾಗೆ ರಾಹುಲ್ ಗಾಂಧಿಯ ಭದ್ರತಾ ಸಿಬ್ಬಂದಿ ಒಳಗೆ ಹೋಗಲು ಅನುಮತಿ ನೀಡಲಿಲ್ಲ. ಭದ್ರತೆಯ ದೃಷ್ಟಿಯಿಂದ ರಾಹುಲ್ ಗಾಂಧಿ ಮತ್ತಿತರ ನಾಯಕರು ಆ ಸ್ಥಳದಿಂದ ಹೊರಡುವವರೆಗೂ ಭದ್ರತಾ ಸಿಬ್ಬಂದಿ ಅವರನ್ನು ಫಾರ್ಮ್‌ಹೌಸ್‌ನೊಳಗೆ ಹೋಗಲು ಬಿಡಲಿಲ್ಲ.

ಹೀಗಾಗಿ, ತಮ್ಮದೇ ಫಾರ್ಮ್​ಹೌಸ್​ನಲ್ಲಿ ಊರ್ಮಿಳಾ ಹೊರಗೆ ನಿಂತು ಸುಮಾರು 40 ನಿಮಿಷಗಳ ಕಾಲ ಕಾಯಬೇಕಾಯಿತು. ಈ ಘಟನೆಯ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ