AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 13 ರಂದು ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 13 ರಂದು ರಾಹುಲ್ ಗಾಂಧಿ ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.

ಜೂನ್ 13 ರಂದು ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ
ರಾಹಲ್ ಗಾಂಧಿImage Credit source: India Today
TV9 Web
| Edited By: ವಿವೇಕ ಬಿರಾದಾರ|

Updated on:Jun 08, 2022 | 11:01 PM

Share

ನವದೆಹಲಿ: ನ್ಯಾಷನಲ್ ಹೆರಾಲ್ಡ್ (National Herald) ಪತ್ರಿಕೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 13 ರಂದು ರಾಹುಲ್ ಗಾಂಧಿ (Rahul Gandhi) ಇ.ಡಿ (E.D) ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿಗೆ ಇ.ಡಿ ಸಮನ್ಸ್ ನೀಡಿತ್ತು. ಇಂದು (ಜೂನ್​8) ರಂದು ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ  ಹಾಜರಾಗಿರಲಿಲ್ಲ.

ಇದನ್ನು ಓದಿ: ಟ್ರಾಫಿಕ್ ಪೊಲೀಸ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ ಯುವತಿ; ಪೊಲೀಸ್​​ಗೆ ಜನರಿಂದ ಥಳಿತ

ಇ.ಡಿ ಕಚೇರಿಗೆ ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ಸಂಸದರು, ನಾಯಕರು ತೆರಳಲಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥರು ಜೂನ್ 9 ರ ಗುರುವಾರ ಸಂಜೆ 4 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲು ನಿರ್ಧರಿಸಿದ್ದಾರೆ. ಜೂನ್ 13 ರಂದು ಕಾಂಗ್ರೆಸ್ ಪಕ್ಷದ ಎಲ್ಲ ಸಂಸದರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ.  ಜೂ‌ನ್‌ 13 ರಂದು ರಾಜ್ಯಗಳ ರಾಜಧಾನಿಯಲ್ಲಿ ಪ್ರತಿಭಟನೆಗೆ ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ.

ಇದನ್ನು ಓದಿ: ಬಾಲಿವುಡ್ ನಟ ಸಲ್ಮಾನ್ ಖಾನ್​​​ಗೆ ಜೀವ ಬೆದರಿಕೆ ಪ್ರಕರಣ: ಗ್ಯಾಂಗ್​​ಸ್ಟರ್​​​ ಲಾರೆನ್ಸ್​​​​ ಬಿಷ್ಣೋಯ್​​​ ವಿಚಾರಣೆಗಾಗಿ ದೆಹಲಿಗೆ ಬಂದ ಮುಂಬೈ ಪೊಲೀಸ್

ಜೂನ್ 2 ರಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರು ಹೆಚ್ಚಿನ ಸಮಯ ಕೋರಿದ್ದರು. ಕಾಂಗ್ರೆಸ್ ನಾಯಕನಿಗೆ ಹೊಸದಾಗಿ ನೋಟಿಸ್ ಕಳುಹಿಸಲಾಗಿದ್ದು, ಜೂನ್ 13 ರಂದು ಇಡಿ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸಾವಿರಾರು ಕೋಟಿ ರೂಪಾಯಿಗಳ ಭೂಕಬಳಿಕೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದಾಗ ನ್ಯಾಷನಲ್ ಹೆರಾಲ್ಡ್ ವಿಷಯವು ಮುನ್ನೆಲೆಗೆ ಬಂದಿತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 10:58 pm, Wed, 8 June 22

Follow Us
TV9 Web
TV9 Web

TV9 Kannada

Read More
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ