AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ರಾಹುಲ್​ ಗಾಂಧಿ ಜಮ್ಮು ಪ್ರವಾಸ; ಕಾಲ್ನಡಿಗೆಯಲ್ಲೇ ತೆರಳಿ ಮಾತಾ ವೈಷ್ಣೋ ದೇವಿಗೆ ಪೂಜೆ ಸಲ್ಲಿಸಲಿರುವ ಕಾಂಗ್ರೆಸ್ ಸಂಸದ

Rahul Gandhi: ರಾಹುಲ್​ ಗಾಂಧಿ ಕಳೆದ ತಿಂಗಳು ಶ್ರೀನಗರಕ್ಕೆ ಭೇಟಿಕೊಟ್ಟಿದ್ದರು. ಹಾಗೇ, ಸೆಪ್ಟೆಂಬರ್​ 9 ಮತ್ತು 10 ರಂದು ಜಮ್ಮು ಪ್ರವಾಸ ಹಮ್ಮಿಕೊಂಡಿದ್ದಾರೆ.

ಇಂದಿನಿಂದ ರಾಹುಲ್​ ಗಾಂಧಿ ಜಮ್ಮು ಪ್ರವಾಸ; ಕಾಲ್ನಡಿಗೆಯಲ್ಲೇ ತೆರಳಿ ಮಾತಾ ವೈಷ್ಣೋ ದೇವಿಗೆ ಪೂಜೆ ಸಲ್ಲಿಸಲಿರುವ ಕಾಂಗ್ರೆಸ್ ಸಂಸದ
ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ
Follow us
TV9 Web
| Updated By: Lakshmi Hegde

Updated on:Sep 09, 2021 | 11:21 AM

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಇಂದು ಜಮ್ಮುವಿಗೆ ತೆರಳಿದ್ದು, ಅಲ್ಲಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ದೇಗುಲ (Mata Vishno Devi Temple)ಕ್ಕೆ ಕಾಲ್ನಡಿಗೆಯಲ್ಲೇ ಹೋಗಲಿದ್ದಾರೆ. ಅವರಿಂದು ಮಧ್ಯಾಹ್ನ 12ಗಂಟೆ ಹೊತ್ತಿಗೆ ಜಮ್ಮು ತಲುಪಿ ಅಲ್ಲಿಂದ ದೇಗುಲಕ್ಕೆ ಹೋಗಲಿದ್ದಾರೆ. ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದ ಬಳಿಕ ಮಂದಿರದ ಆವರಣದಲ್ಲೇ ಇಂದು ತಂಗಲಿದ್ದಾರೆ.

ರಾಹುಲ್​ ಗಾಂಧಿಯವರ ಜಮ್ಮು ಭೇಟಿಯ ಬಗ್ಗೆ ಎಎನ್​ಐಗೆ ಮಾಹಿತಿ ನೀಡಿದ ಜಮ್ಮು-ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗುಲಾಂ ಅಹ್ಮದ್​ ಮಿರ್​, ‘ವಯಾನಾಡಿನ ಸಂಸದ ರಾಹುಲ್​ ಗಾಂಧಿಯವರು ಮಾತಾ ವೈಷ್ಣೋ ದೇವಿಯಲ್ಲಿ ತುಂಬ ನಂಬಿಕೆ ಇಟ್ಟಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ, ರಾಜಕೀಯ ಬೆಳವಣಿಗೆಗಳು, ಇತರ ಕೆಲಸಗಳ ಕಾರಣದಿಂದ ಅವರಿಗೆ ದೇವಸ್ಥಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ನಾವೂ ಅವರನ್ನು ಜಮ್ಮುವಿಗೆ ಬರುವಂತೆ ಕೇಳಿಕೊಳ್ಳುತ್ತಲೇ ಇದ್ದೆವು. ಆದರೆ ಈಗ ಆ ಕಾಲ ಕೂಡಿಬಂದಿದೆ. ರಾಹುಲ್​ ಗಾಂಧಿ ಕಳೆದ ತಿಂಗಳು ಶ್ರೀನಗರಕ್ಕೆ ಭೇಟಿಕೊಟ್ಟಿದ್ದರು. ಹಾಗೇ, ಸೆಪ್ಟೆಂಬರ್​ 9 ಮತ್ತು 10 ರಂದು ಜಮ್ಮು ಪ್ರವಾಸ ಹಮ್ಮಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

‘ಹಲವು ಪ್ರಮುಖ ನಾಯಕರು ಈ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಬರುತ್ತಾರೆ. ಅದರಲ್ಲಿ ಬಹುತೇಕರು ಚಾಪರ್​ ಅಥವಾ ಕುದುರೆಯ ಮೂಲಕ ದೇಗುಲಕ್ಕೆ ಹೋಗುತ್ತಾರೆ. ಆದರೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕಾತ್ರಾದಿಂದ ನಡೆದುಕೊಂಡೇ ದೇಗುಲಕ್ಕೆ ಹೋಗಲಿದ್ದಾರೆ. ಹಾಗೇ ಮರುದಿನ ಅಂದರೆ ಸೆಪ್ಟೆಂಬರ್​ 10ರಂದು ಕಾಲ್ನಡಿಗೆಯಲ್ಲೇ ದೇಗುಲದಿಂದ ವಾಪಸ್​ ಬರಲಿದ್ದಾರೆ’ ಎಂದು ಮಿರ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೇರಳದಿಂದ ಬೆಳಗ್ಗೆ ಕಾರಿನಲ್ಲೇ ಜಮ್ಮುವಿಗೆ ಹೋಗಲಿದ್ದಾರೆ. ಕತ್ರಾವರೆಗೆ ತೆರಳಿ ಅಲ್ಲಿಂದ ಕಾಲ್ನಡಿಗೆಯಲ್ಲಿ ಮಾತಾ ವೈಷ್ಣೋದೇವಿ ದೇಗುಲ ಇರುವ ಬೆಟ್ಟಕ್ಕೆ ಹೋಗಲಿದ್ದಾರೆ. ನಾಳೆ ಸೆಪ್ಟೆಂಬರ್​ 10ರಂದು ಬೆಳಗ್ಗೆ 11.30ಕ್ಕೆ ಕಾಂಗ್ರೆಸ್ ಕಾರ್ಯಕರ್ತರೊಟ್ಟಿಗೆ ಸಂವಾದ ನಡೆಸಲಿದ್ದಾರೆ. ಅಲ್ಲಿಂದ ರಾಹುಲ್​ ಗಾಂಧಿ ಲಡಾಕ್​ಗೆ ಹೋಗಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಮೇಲೆ ಆಗಸ್ಟ್​ 9ರಂದು ಶ್ರೀನಗರಕ್ಕೆ ಭೇಟಿ ನೀಡಿ, ಅಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿದ್ದರು. ಹಾಗೇ ಲಡಾಖ್​ನ ಖೀರ್​ ಭವಾನಿ ದೇಗುಲ ಮತ್ತು ಹಜರತ್​ ದರ್ಗಾ ಶರೀಫ್​ಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: Farmers Protest ಕರ್ನಾಲ್ ಮಾಜಿ ಎಸ್‌ಡಿಎಮ್ ವಿರುದ್ಧ ಕ್ರಮದ ಕುರಿತು ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಸಿದ ರೈತರು

Coronavirus cases in India ಭಾರತದಲ್ಲಿ 43,263 ಹೊಸ ಕೊವಿಡ್ ಪ್ರಕರಣ ಪತ್ತೆ, 338 ಮಂದಿ ಸಾವು

(Rahul Gandhi to go to Mata Vaishno Devi Temple of Jammu today)

Published On - 11:07 am, Thu, 9 September 21

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ