AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಹಕ್ಕುಚ್ಯುತಿ ನೋಟೀಸ್​ಗೆ ರಾಹುಲ್ ಗಾಂಧಿಯಿಂದ ಇಂದು ಉತ್ತರ

Breach Of Privilege: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂಸತ್ ಕಲಾಪದ ವೇಳೆ ಅವಹೇಳನಕಾರಿ ಹೇಳಿಕೆಗಳನ್ನು ಮಾಡಿದ ಆರೋಪದ ಮೇಲೆ ರಾಹುಲ್ ಗಾಂಧಿಯಿಂದ ಉತ್ತರ ಕೋರಿ ಹಕ್ಕು ಚ್ಯುತಿ ನೋಟೀಸ್ ಕೊಡಲಾಗಿತ್ತು. ಅದಕ್ಕೆ ರಾಹುಲ್ ಇಂದು ಉತ್ತರಿಸುವ ಸಾಧ್ಯತೆ ಇದೆ.

Rahul Gandhi: ಹಕ್ಕುಚ್ಯುತಿ ನೋಟೀಸ್​ಗೆ ರಾಹುಲ್ ಗಾಂಧಿಯಿಂದ ಇಂದು ಉತ್ತರ
ರಾಹುಲ್ ಗಾಂಧಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 15, 2023 | 8:41 AM

Share

ನವದೆಹಲಿ: ಸಂಸತ್ ಕಲಾಪದಲ್ಲಿ ಅಸಂಸದೀಯ ಹೇಳಿಕೆ ನೀಡಿದ ಆರೋಪದ ಮೇಲೆ ತನಗೆ ನೀಡಿರುವ ಹಕ್ಕುಚ್ಯುತಿ ನೋಟೀಸ್​ಗೆ (Breach Of Privilege Notice) ರಾಹುಲ್ ಗಾಂಧಿ ಇಂದು ಉತ್ತರಿಸುವ ನಿರೀಕ್ಷೆ ಇದೆ. ನೋಟೀಸ್​ಗೆ ಬುಧವಾರದೊಳಗೆ ಉತ್ತರ ನೀಡಬೇಕೆಂದು ಲೋಕಸಭಾ ಕಾರ್ಯಾಲಯ (Lok Sabha Secretariat) ತಿಳಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಫೆಬ್ರುವರಿ 7ರಂದು ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯ ವೇಳೆ ರಾಹುಲ್ ಗಾಂಧಿ ಪ್ರಧಾನಿಗಳ ಬಗ್ಗೆ ಅಸಂಸದೀಯ ಹೇಳಿಕೆಗಳನ್ನು ನೀಡಿದರೆನ್ನಲಾಗಿದೆ. ಸದ್ಯ ಕಡತದಿಂದ ಆ ಪದ ಬಳಕೆಯನ್ನು ತೆಗೆದುಹಾಕಲಾಗಿದೆ. ಅಂದಿನ ಕಲಾಪದ ವೇಳೆ ರಾಹುಲ್ ಗಾಂಧಿ ಅದಾನಿ ವಿಚಾರವನ್ನು ಕೆದಕಿದ್ದರು. ಜೊತೆಗೆ ಅದಾನಿ ರಕ್ಷಣೆಗೆ ಪ್ರಧಾನಿ ಯಾಕೆ ನಿಂತಿದ್ದಾರೆಂದು ಕೇಳಿದ್ದರು. ಹಾಗೆಯೇ, ಅಸಂಸದೀಯ ಎನಿಸುವಂತಹ ಹೇಳಿಕೆಗಳನ್ನು ಪ್ರಧಾನಿಗಳ ಮೇಲೆ ಬಳಕೆ ಮಾಡಿದ್ದರೆನ್ನಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ನಾಯಕ ನಿಶಿಕಾಂತ್ ದುಬೇ ಇಬ್ಬರೂ ರಾಹುಲ್ ಗಾಂಧಿಯಿಂದ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: BBC Tax Survey: ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ ಪರಿಶೀಲನೆ; ಇದು ನಿರೀಕ್ಷಿತ ಎಂದ ವಿಪಕ್ಷ

ನಿಶಿಕಾಂತ್ ದುಬೇ ಅವರು ರಾಹುಲ್ ಗಾಂಧಿಗೆ ಹಕ್ಕು ಚ್ಯುತಿ ನೋಟೀಸ್ ಕೊಟ್ಟರೆ, ಪ್ರಹ್ಲಾದ್ ಜೋಶಿ ಲೋಕಸಭಾಧ್ಯಕ್ಷರಿಗೆ ಪತ್ರ ಬರೆದು, ರಾಹುಲ್ ಗಾಂಧಿ ಮಾಡಿದ ಆರೋಪಗಳನ್ನು ಸಂಸತ್​ನ ಕಲಾಪಗಳ ಕಡತದಿಂದ ತೆಗೆದುಹಾಕಬೇಕೆಂದು ಕೇಳಿಕೊಂಡಿದ್ದರು. ಈ ಸಂಬಂಧ ಫೆಬ್ರುವರಿ 15ರೊಳಗೆ ಉತ್ತರಿಸಬೇಕೆಂದು ರಾಹುಲ್ ಗಾಂಧಿಗೆ ಲೋಕಸಭಾ ಕಾರ್ಯಾಲಯದಿಂದ ನೋಟೀಸ್ ಜಾರಿಯಾಗಿದೆ. ಇವತ್ತಿನ ಅಧಿವೇಶನದ ವೇಳೆ ರಾಹುಲ್ ಗಾಂಧಿ ಈ ನೋಟೀಸ್​ಗೆ ಉತ್ತರಿಸುವ ಸಾಧ್ಯತೆ ಇದೆ.

ಪ್ರಧಾನಿ ಕೈ ನಡುಗುತ್ತಿದ್ದುದು ನೋಡಿದಿರಾ?

ಸಂಸತ್ ಕಲಾಪದ ವೇಳೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿ ಹೆಸರಲ್ಲಿ ನೆಹರೂ ಯಾಕಿಲ್ಲ ಎಂದು ಪ್ರಶ್ನಿಸಿದ್ದರು. ಕೇರಳದ ತಮ್ಮ ಸ್ವಕ್ಷೇತ್ರ ವಯನಾಡಿನಲ್ಲಿ ಮಾತನಾಡುತ್ತಾ ರಾಹುಲ್ ಗಾಂಧಿ ಈ ವಿಚಾರವನ್ನು ಕೆದಕಿ ಪ್ರಧಾನಿಯನ್ನು ಕುಟುಕಿದ್ದರು.

ಇದನ್ನೂ ಓದಿ: Air India: ಏರ್ ಇಂಡಿಯಾ ಭರ್ಜರಿ ಡೀಲ್; ಫ್ರಾನ್ಸ್, ಅಮೆರಿಕದಿಂದ ದಾಖಲೆ ಸಂಖ್ಯೆಯಲ್ಲಿ ವಿಮಾನ ಖರೀದಿ

ನಾನು ಅದಾನಿ ವಿಚಾರ ಪ್ರಸ್ತಾಪ ಮಾಡಿದರೆ ಮೋದಿ ಅವರು ನನ್ನ ಉಪನಾಮ ಪ್ರಸ್ತಾಪ ಮಾಡುತ್ತಾರೆ. ನಿಮ್ಮ ಹೆಸರು ಗಾಂಧಿ ಅಂತಿದೆ, ನೆಹರೂ ಅಂತ ಯಾಕಿಲ್ಲ ಎನ್ನುತ್ತಾರೆ. ನನ್ನನ್ನು ಅವರು ನೇರವಾಗಿ ಅವಹೇಳನ ಮಾಡುತ್ತಾರೆ. ಆದರೆ ಅವರ ಮಾತುಗಳನ್ನು ಕಡತದಿಂದ ತೆಗೆದುಹಾಕಿಲ್ಲ. ನಾವು ಬಹಳ ಸಭ್ಯವಾಗಿಯೇ ಅದಾನಿ ವಿಚಾರ ಕೇಳಿದ್ದೆ. ಆದರೂ ಕೂಡ ಹೇಳಿಕೆಯನ್ನು ಕಡತದಿಂದ ತೆಗೆದಿದ್ದಾರೆ. ಅದೇನೇ ಇರಲಿ ಸತ್ಯವನ್ನು ಮುಚ್ಚಿಡಲು ಯಾವತ್ತೂ ಆಗೋದಿಲ್ಲ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದರು.

ಇನ್ನು, ಸಂಸತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಕೈ ನಡುಗುತ್ತಿತ್ತು ಎಂದೂ ರಾಹುಲ್ ಗಾಂಧಿ ಲೇವಡಿ ಮಾಡಿದ್ದರು.

Published On - 8:41 am, Wed, 15 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!