AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸ್ಥಾನ ಮರುಸ್ಥಾಪನೆ ಬಳಿಕ ಮೊದಲ ಬಾರಿಗೆ ವಯನಾಡಿಗೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ

Rahul Gandhi Wayanad Visit: ಸಂಸದ ಸ್ಥಾನದ ಮರುಸ್ಥಾಪನೆ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡಿಗೆ ಭೇಟಿ ನೀಡಲಿದ್ದಾರೆ. ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು ಆದರೆ ಸುಪ್ರೀಂಕೋರ್ಟ್​ ಶಿಕ್ಷೆಗೆ ತಡೆ ನೀಡಿದೆ.

ಸಂಸದ ಸ್ಥಾನ ಮರುಸ್ಥಾಪನೆ ಬಳಿಕ ಮೊದಲ ಬಾರಿಗೆ ವಯನಾಡಿಗೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನಯನಾ ರಾಜೀವ್
|

Updated on:Aug 11, 2023 | 2:08 PM

Share

ಸಂಸದ ಸ್ಥಾನದ ಮರುಸ್ಥಾಪನೆ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ವಯನಾಡಿಗೆ ಭೇಟಿ ನೀಡಲಿದ್ದಾರೆ. ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು ಆದರೆ ಸುಪ್ರೀಂಕೋರ್ಟ್​ ಶಿಕ್ಷೆಗೆ ತಡೆ ನೀಡಿದೆ. ಹೀಗಾಗಿ ಅವರ ಸಂಸದ ಸ್ಥಾನ ಮರುಸ್ಥಾಪನೆಗೊಂಡಿದೆ. ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್ ಗೆ ಆಗಸ್ಟ್ 12-13 ರಂದು ಭೇಟಿ ನೀಡಲಿದ್ದಾರೆ ಎಂದು ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ವಯನಾಡಿನ ಜನತೆ ಪ್ರಜಾಪ್ರಭುತ್ವವನ್ನು ಗೆದ್ದು ಸಂಸತ್ತಿನಲ್ಲಿ ತಮ್ಮ ಧ್ವನಿಯನ್ನು ಮರಳಿ ಪಡೆದಿರುವುದಕ್ಕೆ ಸಂತಸಗೊಂಡಿದ್ದಾರೆ. ರಾಹುಲ್ ಗಾಂಧಿ ತಮ್ಮ ಸಂಸದರಷ್ಟೇ ಅಲ್ಲ ಕುಟುಂಬದ ಸದಸ್ಯರಂತೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಮತ್ತಷ್ಟು ಓದಿ: ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ, ಇಂದಿನ ಕಲಾಪದಲ್ಲಿ ಭಾಗಿ

ರಾಹುಲ್ ಗಾಂಧಿ ಅವರು ಶನಿವಾರ ತಮ್ಮ ಕ್ಷೇತ್ರವಾದ ವಯನಾಡ್ ತಲುಪಲಿದ್ದಾರೆ. ಮಾರ್ಚ್‌ನಲ್ಲಿ ಅವರು ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು, ಅದಾದ ಬಳಿಕ ಮೊದಲ ಬಾರಿಗೆ ವಯನಾಡಿಗೆ ಹಿಂತಿರುಗುತ್ತಿರುವ ರಾಹುಲ್ ಅವರನ್ನು ಸ್ವಾಗತಿಸಲು ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿಯು ವಿಸ್ತೃತ ಯೋಜನೆಗಳನ್ನು ರೂಪಿಸಿದೆ.

ವರದಿಗಳ ಪ್ರಕಾರ ರಾಹುಲ್ ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಂಸದರ ನಿಧಿಯಿಂದ ನಿರ್ಮಿಸಲಾದ ಮನೆಗಳ ಕೀಲಿಕೈ ಹಸ್ತಾಂತರಿಸುವ ಕಾರ್ಯಕ್ರಮವೂ ಇದೆ. ಭಾನುವಾರ ಮಾನಂತವಾಡಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

2019 ರಲ್ಲಿ ಕ್ಷೇತ್ರದಿಂದ ಶೇಕಡಾ 60 ಕ್ಕೂ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಗೆದ್ದಿದ್ದ ರಾಹುಲ್, ಸುಮಾರು ನಾಲ್ಕು ತಿಂಗಳ ಕಾಲ ಸಂಸದ ಸ್ಥಾನವನ್ನು ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:08 pm, Fri, 11 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?