AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲದ ವಿರುದ್ಧ ಹೋರಾಟ ಇದು: ರಾಹುಲ್ ಗಾಂಧಿ

ಸೋಮವಾರದ ವಿಚಾರಣೆಯ ಕೆಲವೇ ನಿಮಿಷಗಳ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿದ ರಾಹುಲ್ "ಇದು ಪ್ರಜಾಪ್ರಭುತ್ವವನ್ನು ಉಳಿಸಲು 'ಮಿತ್ರಕಾಲ' ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ! ಎಂದಿದ್ದಾರೆ.

Rahul Gandhi: ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲದ ವಿರುದ್ಧ ಹೋರಾಟ ಇದು: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 03, 2023 | 5:43 PM

Share

ಮುಖ್ಯಾಂಶಗಳು

  • 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಜಾಮೀನು
  • ಎಲ್ಲ ಕಳ್ಳರ ಸರ್​​ನೇಮ್ ಮೋದಿ ಎಂದೇ ಯಾಕಿದೆ ಎಂದು ಭಾಷಣದಲ್ಲಿ ಕೇಳಿದ್ದ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು
  • ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ ಎಂದು ರಾಹುಲ್ ಗಾಂಧಿ ಟ್ವೀಟ್

2019ರ ಮಾನನಷ್ಟ ಮೊಕದ್ದಮೆಯಲ್ಲಿ (2019 defamation case) ಸೂರತ್ ನ್ಯಾಯಾಲಯವು ಜಾಮೀನು ನೀಡಿದ ಕೂಡಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದು ಪ್ರಜಾಪ್ರಭುತ್ವವನ್ನು ಉಳಿಸಲು “ಮಿತ್ರಕಾಲ” ವಿರುದ್ಧದ ಹೋರಾಟ ಇದು. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ ಎಂದಿದ್ದಾರೆ. ಎಲ್ಲ ಕಳ್ಳರ ಸರ್​​ನೇಮ್ ಮೋದಿ (Modi Surname)ಎಂದೇ ಯಾಕಿದೆ ಎಂದು ಭಾಷಣದಲ್ಲಿ ಕೇಳಿದ್ದ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಸೋಮವಾರದ ವಿಚಾರಣೆಯ ಕೆಲವೇ ನಿಮಿಷಗಳ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿದ ರಾಹುಲ್ “ಇದು ಪ್ರಜಾಪ್ರಭುತ್ವವನ್ನು ಉಳಿಸಲು ‘ಮಿತ್ರಕಾಲ’ ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ! ಎಂದಿದ್ದಾರೆ.

ಕೇಂದ್ರ ಸರ್ಕಾರವು ತನ್ನ ಸ್ನೇಹಿ ಲಾಭಕೋರ ವ್ಯವಸ್ಥೆಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಗಾಂಧಿಯವರು ‘ಮಿತ್ರಕಾಲ’ವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ ಸೋಮವಾರ ಸೆಷನ್ಸ್ ನ್ಯಾಯಾಲಯವು ಗಾಂಧಿಗೆ ಜಾಮೀನು ಮಂಜೂರು ಮಾಡಿದ್ದು, ಏಪ್ರಿಲ್ 13 ರಂದು ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 52 ವರ್ಷದ ಕಾಂಗ್ರೆಸ್ ನಾಯಕ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ವಿಮಾನದ ಮೂಲಕ ಇಂದು ಮಧ್ಯಾಹ್ನ ಸೂರತ್ ತಲುಪಿದ್ದು ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿದರು.

ಇದನ್ನೂ ಓದಿ: ಹೊಸ ಸಂಸತ್ ಭವನದ ಮಹಾದ್ವಾರದಲ್ಲಿ ಪ್ರಧಾನಿ ಮೋದಿಯವರ ಡಿಗ್ರಿ ಪ್ರದರ್ಶಿಸಿ: ಸಂಜಯ್ ರಾವುತ್

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕೆಳ ನ್ಯಾಯಾಲಯವು 30 ದಿನಗಳ ಕಾಲ ಜಾಮೀನು ನೀಡಿತ್ತು. ಒಂದು ದಿನದ ನಂತರ, ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​