AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲದ ವಿರುದ್ಧ ಹೋರಾಟ ಇದು: ರಾಹುಲ್ ಗಾಂಧಿ

ಸೋಮವಾರದ ವಿಚಾರಣೆಯ ಕೆಲವೇ ನಿಮಿಷಗಳ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿದ ರಾಹುಲ್ "ಇದು ಪ್ರಜಾಪ್ರಭುತ್ವವನ್ನು ಉಳಿಸಲು 'ಮಿತ್ರಕಾಲ' ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ! ಎಂದಿದ್ದಾರೆ.

Rahul Gandhi: ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲದ ವಿರುದ್ಧ ಹೋರಾಟ ಇದು: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 03, 2023 | 5:43 PM

Share

ಮುಖ್ಯಾಂಶಗಳು

  • 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಜಾಮೀನು
  • ಎಲ್ಲ ಕಳ್ಳರ ಸರ್​​ನೇಮ್ ಮೋದಿ ಎಂದೇ ಯಾಕಿದೆ ಎಂದು ಭಾಷಣದಲ್ಲಿ ಕೇಳಿದ್ದ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು
  • ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ ಎಂದು ರಾಹುಲ್ ಗಾಂಧಿ ಟ್ವೀಟ್

2019ರ ಮಾನನಷ್ಟ ಮೊಕದ್ದಮೆಯಲ್ಲಿ (2019 defamation case) ಸೂರತ್ ನ್ಯಾಯಾಲಯವು ಜಾಮೀನು ನೀಡಿದ ಕೂಡಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದು ಪ್ರಜಾಪ್ರಭುತ್ವವನ್ನು ಉಳಿಸಲು “ಮಿತ್ರಕಾಲ” ವಿರುದ್ಧದ ಹೋರಾಟ ಇದು. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ ಎಂದಿದ್ದಾರೆ. ಎಲ್ಲ ಕಳ್ಳರ ಸರ್​​ನೇಮ್ ಮೋದಿ (Modi Surname)ಎಂದೇ ಯಾಕಿದೆ ಎಂದು ಭಾಷಣದಲ್ಲಿ ಕೇಳಿದ್ದ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಸೋಮವಾರದ ವಿಚಾರಣೆಯ ಕೆಲವೇ ನಿಮಿಷಗಳ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿದ ರಾಹುಲ್ “ಇದು ಪ್ರಜಾಪ್ರಭುತ್ವವನ್ನು ಉಳಿಸಲು ‘ಮಿತ್ರಕಾಲ’ ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ! ಎಂದಿದ್ದಾರೆ.

ಕೇಂದ್ರ ಸರ್ಕಾರವು ತನ್ನ ಸ್ನೇಹಿ ಲಾಭಕೋರ ವ್ಯವಸ್ಥೆಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಗಾಂಧಿಯವರು ‘ಮಿತ್ರಕಾಲ’ವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ ಸೋಮವಾರ ಸೆಷನ್ಸ್ ನ್ಯಾಯಾಲಯವು ಗಾಂಧಿಗೆ ಜಾಮೀನು ಮಂಜೂರು ಮಾಡಿದ್ದು, ಏಪ್ರಿಲ್ 13 ರಂದು ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 52 ವರ್ಷದ ಕಾಂಗ್ರೆಸ್ ನಾಯಕ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ವಿಮಾನದ ಮೂಲಕ ಇಂದು ಮಧ್ಯಾಹ್ನ ಸೂರತ್ ತಲುಪಿದ್ದು ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿದರು.

ಇದನ್ನೂ ಓದಿ: ಹೊಸ ಸಂಸತ್ ಭವನದ ಮಹಾದ್ವಾರದಲ್ಲಿ ಪ್ರಧಾನಿ ಮೋದಿಯವರ ಡಿಗ್ರಿ ಪ್ರದರ್ಶಿಸಿ: ಸಂಜಯ್ ರಾವುತ್

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕೆಳ ನ್ಯಾಯಾಲಯವು 30 ದಿನಗಳ ಕಾಲ ಜಾಮೀನು ನೀಡಿತ್ತು. ಒಂದು ದಿನದ ನಂತರ, ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!