AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಜೊತೆ ಮೈತ್ರಿ: ಅಮ್ಮನಿಗೆ ಇಷ್ಟವಿದ್ದರೂ, ರಾಹುಲ್​ ಗಾಂಧಿಗೆ ಬೇಸರ!

ದೆಹಲಿ: ದೇಶದ ಬಹುಪಾಲು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿ, ಇತಿಹಾಸ ಸೃಷ್ಟಿಸಿರುವ ಕಮಲ ಪಾಳಯಕ್ಕೆ ಸದ್ಯ ಸಂಕಷ್ಟ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮಾಡಿದ ಹರಸಾಹಸ ವ್ಯರ್ಥವಾಗಿದೆ. ಮತ್ತೊಂದ್ಕಡೆ ವಿರೋಧಿ ಪಡೆ ಒಂದಾಗಿದ್ದರೂ, ಒಳಗೊಳಗೆ ಅಸಮಾಧಾನ ಭುಗಿಲೆದ್ದಿದೆ. ‘ಮಹಾ’ ಮೈತ್ರಿ ಬಗ್ಗೆ ರಾಹುಲ್ ಸೈಲೆಂಟ್ ಆಗಿದ್ದೇಕೆ..? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗುಡ್​ಬೈ ಹೇಳಿದ್ದರು. ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಿ […]

ಶಿವಸೇನೆ ಜೊತೆ ಮೈತ್ರಿ: ಅಮ್ಮನಿಗೆ ಇಷ್ಟವಿದ್ದರೂ, ರಾಹುಲ್​ ಗಾಂಧಿಗೆ ಬೇಸರ!
ಸಾಧು ಶ್ರೀನಾಥ್​
|

Updated on: Nov 28, 2019 | 3:41 PM

Share

ದೆಹಲಿ: ದೇಶದ ಬಹುಪಾಲು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿ, ಇತಿಹಾಸ ಸೃಷ್ಟಿಸಿರುವ ಕಮಲ ಪಾಳಯಕ್ಕೆ ಸದ್ಯ ಸಂಕಷ್ಟ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮಾಡಿದ ಹರಸಾಹಸ ವ್ಯರ್ಥವಾಗಿದೆ. ಮತ್ತೊಂದ್ಕಡೆ ವಿರೋಧಿ ಪಡೆ ಒಂದಾಗಿದ್ದರೂ, ಒಳಗೊಳಗೆ ಅಸಮಾಧಾನ ಭುಗಿಲೆದ್ದಿದೆ.

‘ಮಹಾ’ ಮೈತ್ರಿ ಬಗ್ಗೆ ರಾಹುಲ್ ಸೈಲೆಂಟ್ ಆಗಿದ್ದೇಕೆ..? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗುಡ್​ಬೈ ಹೇಳಿದ್ದರು. ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಿ ಸೋಲಿನ ಹೊಣೆ ಹೊತ್ತಿದ್ದರು. ಆದ್ರಿದು ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಬೇಸರ ಮೂಡಿಸಿತ್ತು. ರಾಹುಲ್ ಪಲಾಯನ ಮಾಡಿದ್ದಾರೆ ಅನ್ನೋ ಬಹಿರಂಗ ಟೀಕೆ ಕೇಳಿಬಂದಿತ್ತು. ಈಗ ರಾಹುಲ್​ರ ಮತ್ತೊಂದು ವರ್ತನೆ ಹಿರಿಯ ಕಾಂಗ್ರೆಸ್ಸಿಗರ ಬೇಸರಕ್ಕೆ ಕಾರಣವಾಗಿದೆ.

ಎಐಸಿಸಿ ಹುದ್ದೆಗೆ ರಾಹುಲ್ ರಾಜೀನಾಮೆ ನೀಡುತ್ತಿದ್ದಂತೆ ಮತ್ತೊಮ್ಮೆ ಸೋನಿಯಾ ಬಂದು ಕೂತಿದ್ದರು. ರಾಜಕೀಯ ಅನುಭವದ ಮೂಲಕ ಹೊಸ ತಂತ್ರಗಳನ್ನ ಹೂಡಿ, ಹರಿಯಾಣ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ಗೆ ನವಚೈತನ್ಯ ನೀಡಿದ್ದಾರೆ. ಇದರ ಫಲವಾಗಿ ಮಹಾರಾಷ್ಟ್ರದಲ್ಲಿ ಬದ್ಧವೈರಿ ಶಿವಸೇನೆಗೆ ಕಾಂಗ್ರೆಸ್‌ ಬೆಂಬಲ ನೀಡುತ್ತಿದೆ. ಇದು ಅಮ್ಮನಿಗೆ ಇಷ್ಟವಿದ್ದರೂ, ಸೋನಿಯಾ ಪುತ್ರ ರಾಹುಲ್​ಗೆ ಬಿಲ್​ಕುಲ್ ಹಿಡಿಸಿಲ್ಲ ಎನ್ನಲಾಗ್ತಿದೆ. ರಾಹುಲ್ ಸೈಲೆಂಟಾಗಿರೋದ್ರಿಂದ ಅನುಮಾನಗಳು ಮತ್ತಷ್ಟು ದಟ್ಟವಾಗಿವೆ.

ಹಿರಿಯ ನಾಯಕರ ಜೊತೆ ತಿಕ್ಕಾಟಕ್ಕೆ ಕಾರಣವಾಗುತ್ತಾ ರಾಹುಲ್ ನಡೆ..? ಈಗಾಗಲೇ ರಾಹುಲ್ ಪಾಳಯದಲ್ಲಿ ಗುರುತಿಸಿಕೊಂಡಿದ್ದ ನಾಯಕರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಅನ್ನೋ ಆರೋಪ ಕೇಳಿಬರ್ತಿದೆ. ಇದ್ರ ನಡುವೆ ಹಿರಿಯರು ಕೈಗೊಂಡ ನಿರ್ಧಾರಕ್ಕೆ ರಾಹುಲ್ ಒಪ್ಪಿಗೆ ಸೂಚಿಸದಿರುವುದು ಮತ್ತೆ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹಕ್ಕೆ ದಾರಿ ಮಾಡಿಕೊಡಲಿದೆಯಾ ಅನ್ನೋ ಪ್ರಶ್ನೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಉದ್ಧವ್ ಠಾಕ್ರೆ ಪ್ರಮಾಣವಚನಕ್ಕೂ ರಾಹುಲ್ ಬರಲ್ಲ ಅಂತಾ ಹೇಳಲಾಗುತ್ತಿದೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು