AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಜೊತೆ ಮೈತ್ರಿ: ಅಮ್ಮನಿಗೆ ಇಷ್ಟವಿದ್ದರೂ, ರಾಹುಲ್​ ಗಾಂಧಿಗೆ ಬೇಸರ!

ದೆಹಲಿ: ದೇಶದ ಬಹುಪಾಲು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿ, ಇತಿಹಾಸ ಸೃಷ್ಟಿಸಿರುವ ಕಮಲ ಪಾಳಯಕ್ಕೆ ಸದ್ಯ ಸಂಕಷ್ಟ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮಾಡಿದ ಹರಸಾಹಸ ವ್ಯರ್ಥವಾಗಿದೆ. ಮತ್ತೊಂದ್ಕಡೆ ವಿರೋಧಿ ಪಡೆ ಒಂದಾಗಿದ್ದರೂ, ಒಳಗೊಳಗೆ ಅಸಮಾಧಾನ ಭುಗಿಲೆದ್ದಿದೆ. ‘ಮಹಾ’ ಮೈತ್ರಿ ಬಗ್ಗೆ ರಾಹುಲ್ ಸೈಲೆಂಟ್ ಆಗಿದ್ದೇಕೆ..? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗುಡ್​ಬೈ ಹೇಳಿದ್ದರು. ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಿ […]

ಶಿವಸೇನೆ ಜೊತೆ ಮೈತ್ರಿ: ಅಮ್ಮನಿಗೆ ಇಷ್ಟವಿದ್ದರೂ, ರಾಹುಲ್​ ಗಾಂಧಿಗೆ ಬೇಸರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 28, 2019 | 3:41 PM

Share

ದೆಹಲಿ: ದೇಶದ ಬಹುಪಾಲು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿ, ಇತಿಹಾಸ ಸೃಷ್ಟಿಸಿರುವ ಕಮಲ ಪಾಳಯಕ್ಕೆ ಸದ್ಯ ಸಂಕಷ್ಟ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮಾಡಿದ ಹರಸಾಹಸ ವ್ಯರ್ಥವಾಗಿದೆ. ಮತ್ತೊಂದ್ಕಡೆ ವಿರೋಧಿ ಪಡೆ ಒಂದಾಗಿದ್ದರೂ, ಒಳಗೊಳಗೆ ಅಸಮಾಧಾನ ಭುಗಿಲೆದ್ದಿದೆ.

‘ಮಹಾ’ ಮೈತ್ರಿ ಬಗ್ಗೆ ರಾಹುಲ್ ಸೈಲೆಂಟ್ ಆಗಿದ್ದೇಕೆ..? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗುಡ್​ಬೈ ಹೇಳಿದ್ದರು. ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಿ ಸೋಲಿನ ಹೊಣೆ ಹೊತ್ತಿದ್ದರು. ಆದ್ರಿದು ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಬೇಸರ ಮೂಡಿಸಿತ್ತು. ರಾಹುಲ್ ಪಲಾಯನ ಮಾಡಿದ್ದಾರೆ ಅನ್ನೋ ಬಹಿರಂಗ ಟೀಕೆ ಕೇಳಿಬಂದಿತ್ತು. ಈಗ ರಾಹುಲ್​ರ ಮತ್ತೊಂದು ವರ್ತನೆ ಹಿರಿಯ ಕಾಂಗ್ರೆಸ್ಸಿಗರ ಬೇಸರಕ್ಕೆ ಕಾರಣವಾಗಿದೆ.

ಎಐಸಿಸಿ ಹುದ್ದೆಗೆ ರಾಹುಲ್ ರಾಜೀನಾಮೆ ನೀಡುತ್ತಿದ್ದಂತೆ ಮತ್ತೊಮ್ಮೆ ಸೋನಿಯಾ ಬಂದು ಕೂತಿದ್ದರು. ರಾಜಕೀಯ ಅನುಭವದ ಮೂಲಕ ಹೊಸ ತಂತ್ರಗಳನ್ನ ಹೂಡಿ, ಹರಿಯಾಣ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ಗೆ ನವಚೈತನ್ಯ ನೀಡಿದ್ದಾರೆ. ಇದರ ಫಲವಾಗಿ ಮಹಾರಾಷ್ಟ್ರದಲ್ಲಿ ಬದ್ಧವೈರಿ ಶಿವಸೇನೆಗೆ ಕಾಂಗ್ರೆಸ್‌ ಬೆಂಬಲ ನೀಡುತ್ತಿದೆ. ಇದು ಅಮ್ಮನಿಗೆ ಇಷ್ಟವಿದ್ದರೂ, ಸೋನಿಯಾ ಪುತ್ರ ರಾಹುಲ್​ಗೆ ಬಿಲ್​ಕುಲ್ ಹಿಡಿಸಿಲ್ಲ ಎನ್ನಲಾಗ್ತಿದೆ. ರಾಹುಲ್ ಸೈಲೆಂಟಾಗಿರೋದ್ರಿಂದ ಅನುಮಾನಗಳು ಮತ್ತಷ್ಟು ದಟ್ಟವಾಗಿವೆ.

ಹಿರಿಯ ನಾಯಕರ ಜೊತೆ ತಿಕ್ಕಾಟಕ್ಕೆ ಕಾರಣವಾಗುತ್ತಾ ರಾಹುಲ್ ನಡೆ..? ಈಗಾಗಲೇ ರಾಹುಲ್ ಪಾಳಯದಲ್ಲಿ ಗುರುತಿಸಿಕೊಂಡಿದ್ದ ನಾಯಕರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಅನ್ನೋ ಆರೋಪ ಕೇಳಿಬರ್ತಿದೆ. ಇದ್ರ ನಡುವೆ ಹಿರಿಯರು ಕೈಗೊಂಡ ನಿರ್ಧಾರಕ್ಕೆ ರಾಹುಲ್ ಒಪ್ಪಿಗೆ ಸೂಚಿಸದಿರುವುದು ಮತ್ತೆ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹಕ್ಕೆ ದಾರಿ ಮಾಡಿಕೊಡಲಿದೆಯಾ ಅನ್ನೋ ಪ್ರಶ್ನೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಉದ್ಧವ್ ಠಾಕ್ರೆ ಪ್ರಮಾಣವಚನಕ್ಕೂ ರಾಹುಲ್ ಬರಲ್ಲ ಅಂತಾ ಹೇಳಲಾಗುತ್ತಿದೆ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ