ಶಿವಸೇನೆ ಜೊತೆ ಮೈತ್ರಿ: ಅಮ್ಮನಿಗೆ ಇಷ್ಟವಿದ್ದರೂ, ರಾಹುಲ್​ ಗಾಂಧಿಗೆ ಬೇಸರ!

ದೆಹಲಿ: ದೇಶದ ಬಹುಪಾಲು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿ, ಇತಿಹಾಸ ಸೃಷ್ಟಿಸಿರುವ ಕಮಲ ಪಾಳಯಕ್ಕೆ ಸದ್ಯ ಸಂಕಷ್ಟ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮಾಡಿದ ಹರಸಾಹಸ ವ್ಯರ್ಥವಾಗಿದೆ. ಮತ್ತೊಂದ್ಕಡೆ ವಿರೋಧಿ ಪಡೆ ಒಂದಾಗಿದ್ದರೂ, ಒಳಗೊಳಗೆ ಅಸಮಾಧಾನ ಭುಗಿಲೆದ್ದಿದೆ. ‘ಮಹಾ’ ಮೈತ್ರಿ ಬಗ್ಗೆ ರಾಹುಲ್ ಸೈಲೆಂಟ್ ಆಗಿದ್ದೇಕೆ..? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗುಡ್​ಬೈ ಹೇಳಿದ್ದರು. ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಿ […]

ಶಿವಸೇನೆ ಜೊತೆ ಮೈತ್ರಿ: ಅಮ್ಮನಿಗೆ ಇಷ್ಟವಿದ್ದರೂ, ರಾಹುಲ್​ ಗಾಂಧಿಗೆ ಬೇಸರ!
ಸಾಧು ಶ್ರೀನಾಥ್​

Updated on: Nov 28, 2019 | 3:41 PM

ದೆಹಲಿ: ದೇಶದ ಬಹುಪಾಲು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿ, ಇತಿಹಾಸ ಸೃಷ್ಟಿಸಿರುವ ಕಮಲ ಪಾಳಯಕ್ಕೆ ಸದ್ಯ ಸಂಕಷ್ಟ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮಾಡಿದ ಹರಸಾಹಸ ವ್ಯರ್ಥವಾಗಿದೆ. ಮತ್ತೊಂದ್ಕಡೆ ವಿರೋಧಿ ಪಡೆ ಒಂದಾಗಿದ್ದರೂ, ಒಳಗೊಳಗೆ ಅಸಮಾಧಾನ ಭುಗಿಲೆದ್ದಿದೆ.

‘ಮಹಾ’ ಮೈತ್ರಿ ಬಗ್ಗೆ ರಾಹುಲ್ ಸೈಲೆಂಟ್ ಆಗಿದ್ದೇಕೆ..?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗುಡ್​ಬೈ ಹೇಳಿದ್ದರು. ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಿ ಸೋಲಿನ ಹೊಣೆ ಹೊತ್ತಿದ್ದರು. ಆದ್ರಿದು ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಬೇಸರ ಮೂಡಿಸಿತ್ತು. ರಾಹುಲ್ ಪಲಾಯನ ಮಾಡಿದ್ದಾರೆ ಅನ್ನೋ ಬಹಿರಂಗ ಟೀಕೆ ಕೇಳಿಬಂದಿತ್ತು. ಈಗ ರಾಹುಲ್​ರ ಮತ್ತೊಂದು ವರ್ತನೆ ಹಿರಿಯ ಕಾಂಗ್ರೆಸ್ಸಿಗರ ಬೇಸರಕ್ಕೆ ಕಾರಣವಾಗಿದೆ.

ಎಐಸಿಸಿ ಹುದ್ದೆಗೆ ರಾಹುಲ್ ರಾಜೀನಾಮೆ ನೀಡುತ್ತಿದ್ದಂತೆ ಮತ್ತೊಮ್ಮೆ ಸೋನಿಯಾ ಬಂದು ಕೂತಿದ್ದರು. ರಾಜಕೀಯ ಅನುಭವದ ಮೂಲಕ ಹೊಸ ತಂತ್ರಗಳನ್ನ ಹೂಡಿ, ಹರಿಯಾಣ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ಗೆ ನವಚೈತನ್ಯ ನೀಡಿದ್ದಾರೆ. ಇದರ ಫಲವಾಗಿ ಮಹಾರಾಷ್ಟ್ರದಲ್ಲಿ ಬದ್ಧವೈರಿ ಶಿವಸೇನೆಗೆ ಕಾಂಗ್ರೆಸ್‌ ಬೆಂಬಲ ನೀಡುತ್ತಿದೆ. ಇದು ಅಮ್ಮನಿಗೆ ಇಷ್ಟವಿದ್ದರೂ, ಸೋನಿಯಾ ಪುತ್ರ ರಾಹುಲ್​ಗೆ ಬಿಲ್​ಕುಲ್ ಹಿಡಿಸಿಲ್ಲ ಎನ್ನಲಾಗ್ತಿದೆ. ರಾಹುಲ್ ಸೈಲೆಂಟಾಗಿರೋದ್ರಿಂದ ಅನುಮಾನಗಳು ಮತ್ತಷ್ಟು ದಟ್ಟವಾಗಿವೆ.

ಹಿರಿಯ ನಾಯಕರ ಜೊತೆ ತಿಕ್ಕಾಟಕ್ಕೆ ಕಾರಣವಾಗುತ್ತಾ ರಾಹುಲ್ ನಡೆ..?
ಈಗಾಗಲೇ ರಾಹುಲ್ ಪಾಳಯದಲ್ಲಿ ಗುರುತಿಸಿಕೊಂಡಿದ್ದ ನಾಯಕರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಅನ್ನೋ ಆರೋಪ ಕೇಳಿಬರ್ತಿದೆ. ಇದ್ರ ನಡುವೆ ಹಿರಿಯರು ಕೈಗೊಂಡ ನಿರ್ಧಾರಕ್ಕೆ ರಾಹುಲ್ ಒಪ್ಪಿಗೆ ಸೂಚಿಸದಿರುವುದು ಮತ್ತೆ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹಕ್ಕೆ ದಾರಿ ಮಾಡಿಕೊಡಲಿದೆಯಾ ಅನ್ನೋ ಪ್ರಶ್ನೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಉದ್ಧವ್ ಠಾಕ್ರೆ ಪ್ರಮಾಣವಚನಕ್ಕೂ ರಾಹುಲ್ ಬರಲ್ಲ ಅಂತಾ ಹೇಳಲಾಗುತ್ತಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us