ನೀನಾ, ನಾನಾ ನೋಡೇ ಬಿಡೋಣ, ಕುಸ್ತಿಪಟುಗಳ ಜತೆ ಅಖಾಡಕ್ಕಿಳಿದ ರಾಹುಲ್ ಗಾಂಧಿ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಕುಸ್ತಿಪಟು(Wrestler)ಗಳ ಜತೆ ಅಖಾಡಕ್ಕಿಳಿದಿರುವ ವಿಡಿಯೋ ಹಾಗೂ ಫೋಟೊಗಳು ವೈರಲ್ ಆಗುತ್ತಿದೆ. ಹರ್ಯಾಣದ ಕುಸ್ತಿಪಟುಗಳು ಮತ್ತು ಭಾರತೀಯ ಕುಸ್ತಿ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ನಡುವಿನ ಕಾದಾಟ ಮುಂದುವರೆದಿದೆ.

ನೀನಾ, ನಾನಾ ನೋಡೇ ಬಿಡೋಣ, ಕುಸ್ತಿಪಟುಗಳ ಜತೆ ಅಖಾಡಕ್ಕಿಳಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ

Updated on: Dec 27, 2023 | 12:34 PM

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಕುಸ್ತಿಪಟು(Wrestler)ಗಳ ಜತೆ ಅಖಾಡಕ್ಕಿಳಿದಿರುವ ವಿಡಿಯೋ ಹಾಗೂ ಫೋಟೊಗಳು ವೈರಲ್ ಆಗುತ್ತಿವೆ. ಹರ್ಯಾಣದ ಕುಸ್ತಿಪಟುಗಳು ಮತ್ತು ಭಾರತೀಯ ಕುಸ್ತಿ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ನಡುವಿನ ಕಾದಾಟ ಮುಂದುವರೆದಿದೆ.

ಈ ಮಧ್ಯೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಬೆಳಗ್ಗೆ ಹರ್ಯಾಣದ ಜಜ್ಜರ್ ಜಿಲ್ಲೆಯ ಛಾರಾ ಗ್ರಾಮಕ್ಕೆ ಹಠಾತ್ತನೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕುಸ್ತಿಪಟುಗಳೊಂದಿಗೆ ಅಖಾಡಕ್ಕಿಳಿದು ಕೆಲ ಸಮಯ ಅವರೊಂದಿಗೆ ಕಳೆದಿದ್ದಾರೆ.
ಛಾರಾ ಗ್ರಾಮವು ಕುಸ್ತಿಪಟು ದೀಪಕ್ ಪುನಿಯಾ ಅವರ ಗ್ರಾಮವಾಗಿದೆ. ಈ ಸಂದರ್ಭದಲ್ಲಿ, ರಾಹುಲ್ ಗಾಂಧಿ ಜೊತೆಗೆ ಬಜರಂಗ್ ಪುನಿಯಾ ಮತ್ತು ಬೇರಿ ಶಾಸಕ ರಘುಬೀರ್ ಕಡಿಯನ್ ಕೂಡ ಉಪಸ್ಥಿತರಿದ್ದರು.

ಅಖಾಡಕ್ಕೆ ಆಗಮಿಸಿದ ರಾಹುಲ್‌ಗೆ ಕುಸ್ತಿಪಟುಗಳು ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ರಾಹುಲ್ ಗಾಂಧಿ ಕುಸ್ತಿಪಟುಗಳೊಂದಿಗೆ ಸಂವಾದ ನಡೆಸಿ ಅವರ ಆಟದ ಬಗ್ಗೆ ಮಾಹಿತಿ ಪಡೆದರು. ಕಾಂಗ್ರೆಸ್ ನಾಯಕರು ಚಳಿಗಾಲದಲ್ಲಿ ಕುಸ್ತಿಪಟುಗಳೊಂದಿಗೆ ರಾಗಿ ರೊಟ್ಟಿಯನ್ನು ಸಹ ತಿಂದರು.

ಮತ್ತಷ್ಟು ಓದಿ: WFI ಅಮಾನತು, ಪ್ರತಿಭಟನೆ ನಡುವೆ ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಕುಸ್ತಿ ಕೋಚ್ ವೀರೇಂದ್ರ ಆರ್ಯ ಮಾತನಾಡಿ, ಅಖಾಡದಲ್ಲಿ ಎಲ್ಲರೂ ಅಭ್ಯಾಸ ನಡೆಸುತ್ತಿದ್ದರು, ಇದ್ದಕ್ಕಿದ್ದಂತೆ ರಾಹುಲ್ ಗಾಂಧಿ ಬೆಳಿಗ್ಗೆಯೇ ಅಲ್ಲಿಗೆ ಬಂದರು. ರಾಹುಲ್ ವ್ಯಾಯಾಮ ಮಾಡಿ ಕ್ರೀಡೆಯ ಬಗ್ಗೆಯೂ ಮಾತನಾಡಿದ್ದಾರೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರು ಕುಸ್ತಿಪಟುಗಳೊಂದಿಗಿನ ಭೇಟಿಯ ಕೆಲವು ಚಿತ್ರಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ರಾಹುಲ್ ಅವರು ಆಟಗಾರರ ಬಗ್ಗೆ ಸುದೀರ್ಘ ಪೋಸ್ಟ್ ಅನ್ನು ಸಹ ಬರೆದಿದ್ದಾರೆ.

ಅದರಲ್ಲಿ ಅವರು ವರ್ಷಗಳ ಕಠಿಣ ಪರಿಶ್ರಮ ಮತ್ತು ರಕ್ತ ಮತ್ತು ಬೆವರಿನ ನಂತರ ಆಟಗಾರನು ದೇಶಕ್ಕಾಗಿ ಪದಕಗಳನ್ನು ತರುತ್ತಾನೆ ಎಂದು ಹೇಳಿದ್ದಾರೆ.

ಭಾರತದ ಹೆಣ್ಣುಮಕ್ಕಳು ತಮ್ಮ ಅಖಾಡದಲ್ಲಿ ಹೋರಾಟವನ್ನು ಬಿಟ್ಟು ತಮ್ಮ ಹಕ್ಕುಗಳು ಮತ್ತು ನ್ಯಾಯಕ್ಕಾಗಿ ಬೀದಿಗಳಲ್ಲಿ ಹೋರಾಡಬೇಕಾದರೆ, ಅವರ ಮಕ್ಕಳನ್ನು ಈ ಮಾರ್ಗವನ್ನು ಆಯ್ಕೆ ಮಾಡಲು ಪ್ರೋತ್ಸಾಹಿಸುವವರು ಯಾರು?. ಮಹಿಳಾ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ಭಾರತೀಯ ಕುಸ್ತಿ ಸಂಸ್ಥೆಯ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ ಎಂಬುದು ಗಮನಾರ್ಹ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 12:33 pm, Wed, 27 December 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us