AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ವ್ಯವಹಾರಗಳ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್ ಗಾಂಧಿ

ಸಮಿತಿ ಸಭೆಯಲ್ಲಿ ಸಮವಸ್ತ್ರದ ಬಗ್ಗೆ ಚರ್ಚೆ ನಡೆಸುವಾಗ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಸಮಿತಿ ಸದಸ್ಯರು ಈ ರೀತಿಯ ವಿಷಯಗಳನ್ನು ಚರ್ಚಿಸಿ ಹಿರಿಯ ಅಧಿಕಾರಿಗಳ ಸಮಯ ವ್ಯರ್ಥ ಮಾಡಬಾರದು. ನೈಜ ನಿಯಂತ್ರಣ ರೇಖೆಯಲ್ಲಿನ ಪರಿಸ್ಥಿತಿ ಮೊದಲಾದ ಗಂಭೀರ ವಿಷಯಗಳನ್ನು ಸಮಿತಿ ಸದಸ್ಯರು ಚರ್ಚಿಸಬೇಕು ಎಂದು ಹೇಳಿದ್ದಾರೆ.

ರಕ್ಷಣಾ ವ್ಯವಹಾರಗಳ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
| Updated By: ಸಾಧು ಶ್ರೀನಾಥ್​

Updated on: Dec 17, 2020 | 12:08 PM

ನವದೆಹಲಿ: ರಾಷ್ಟ್ರೀಯ ಭದ್ರತೆ ವಿಷಯವನ್ನು ಚರ್ಚಿಸುವ ಬದಲು ಸಶಸ್ತ್ರ ಪಡೆಗಳ ಸಮವಸ್ತ್ರ ಮತ್ತು ಶ್ರೇಣಿ ಬಗ್ಗೆ ಚರ್ಚಿಸಿ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಕ್ಷಣಾ ವ್ಯವಹಾರಗಳ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದಿದ್ದಾರೆ.

ಬುಧವಾರ ಈ ಸಭೆ ನಡೆದಿದ್ದು, ರಾಹುಲ್ ಜತೆಗೆ ಸಮಿತಿಯಲ್ಲಿದ್ದ ಇಬ್ಬರು ಕಾಂಗ್ರೆಸ್ ಸದಸ್ಯರು ಹೊರ ನಡೆದಿದ್ದಾರೆ. ಸಭೆಯಲ್ಲಿ ಯಾಕೆ ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ಸಮಿತಿ ಸಭೆಯಲ್ಲಿ ಸಮವಸ್ತ್ರದ ಬಗ್ಗೆ ಚರ್ಚೆ ನಡೆಸುವಾಗ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಸಮಿತಿ ಸದಸ್ಯರು ಈ ರೀತಿಯ ವಿಷಯಗಳನ್ನು ಚರ್ಚಿಸಿ ಹಿರಿಯ ಅಧಿಕಾರಿಗಳ ಸಮಯ ವ್ಯರ್ಥ ಮಾಡಬಾರದು. ನೈಜ ನಿಯಂತ್ರಣ ರೇಖೆಯಲ್ಲಿನ ಪರಿಸ್ಥಿತಿ ಮೊದಲಾದ ಗಂಭೀರ ವಿಷಯಗಳನ್ನು ಸಮಿತಿ ಸದಸ್ಯರು ಚರ್ಚಿಸಬೇಕು ಎಂದು ಹೇಳಿದ್ದಾರೆ.

ಸಮಿತಿ ಸಭೆಯ ಅಜೆಂಡಾ ರಕ್ಷಣಾ ಪಡೆಯಲ್ಲಿನ ಶ್ರೇಣಿ ವ್ಯವಸ್ಥೆ, ಸಮವಸ್ತ್ರ, ಸ್ಟಾರ್ ಮತ್ತು ಬ್ಯಾಡ್ಜ್ ಆಗಿತ್ತು. ಈ ಬಗ್ಗೆ ರಕ್ಷಣಾ ಖಾತೆ ಸಚಿವಾಲಯದ ಪ್ರತಿನಿಧಿಗಳು ಸಭೆಯಲ್ಲಿ ವಿವರಣೆ ನೀಡಿದ್ದರು. ಈ ವೇಳೆ ರಕ್ಷಣಾ ಪಡೆಯ ಸಮವಸ್ತ್ರ ಮತ್ತು ಬ್ಯಾಡ್ಜ್ ಗೆ ಅದರದ್ದೇ ಆದ ಇತಿಹಾಸವಿದೆ ಎಂದು ಹೇಳಿ ರಾಹುಲ್ ಮಧ್ಯ ಪ್ರವೇಶಿಸಿದ್ದಾರೆ. ಸಮಿತಿ ಅಧ್ಯಕ್ಷ ಜುವಾಲ್ ಓರಾಮ್ Jual Oram ಮಾತಿಗೆ ತಡೆಯೊಡ್ಡಿದಾಗ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿ ರಾಹುಲ್ ಸಭೆಯಿಂದ ಹೊರನಡೆದಿದ್ದಾರೆ.

ರಾಹುಲ್ ಜತೆ ಕಾಂಗ್ರೆಸ್ ಸದಸ್ಯರಾದ ರಾಜೀವ್ ಸತವ್ ಮತ್ತು ಅನುಮುಲ ರೇವಂತ್ ರೆಡ್ಡಿ ಹೊರನಡೆದಿದ್ದು, ಬಿಎಸ್​ಪಿಯ ಡ್ಯಾನಿಷ್ ಅಲಿ ಮತ್ತು ಶಿವಸೇನಾದ ಸಂಜಯ್ ರಾವುತ್, ರಾಹುಲ್ ನಡೆಗೆ ಬೆಂಬಲ ಸೂಚಿಸಿದ್ದಾರೆ.

ರೈತರ ಗಳಿಕೆ ದುಪ್ಪಟ್ಟು ಅಲ್ಲ; ಅರ್ಧದಷ್ಟು ಇಳಿಕೆ! ಇದು ‘ಸೂಟ್ ಬೂಟ್ ಕೀ ಸರ್ಕಾರ್’ ಕೊಡುಗೆ ಎಂದ ರಾಹುಲ್ ಗಾಂಧಿ

ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?