AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ತನ್ನಿ; ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ರಾಹುಲ್ ಗಾಂಧಿ ಪತ್ರ

ರೋಹಿತ್ ವೇಮುಲಾ, ಪಾಯಲ್ ತಡ್ವಿ ಮತ್ತು ದರ್ಶನ್ ಸೋಲಂಕಿಯಂತಹ ಪ್ರತಿಭಾವಂತ ಯುವಕರ ಹತ್ಯೆ ಸ್ವೀಕಾರಾರ್ಹವಲ್ಲ. ಇದಕ್ಕೆ ಅಂತ್ಯ ಹಾಡುವ ಸಮಯವಿದು. ಡಾ. ಬಿ.ಆರ್. ಅಂಬೇಡ್ಕರ್, ರೋಹಿತ್ ವೇಮುಲಾ ಮತ್ತು ಲಕ್ಷಾಂತರ ಇತರರು ಅನುಭವಿಸಿದ ಅನುಭವವನ್ನು ಭಾರತದ ಯಾವುದೇ ಜನರು ಎದುರಿಸದಂತೆ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಪ್ರಸ್ತಾವಿತ ರೋಹಿತ್ ವೇಮುಲಾ ಕಾಯ್ದೆಯು ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕಾನೂನು ಚೌಕಟ್ಟನ್ನು ಒದಗಿಸುವ ಗುರಿಯನ್ನು ಹೊಂದಿದೆ.

ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ತನ್ನಿ; ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ರಾಹುಲ್ ಗಾಂಧಿ ಪತ್ರ
Rahul Gandhi
Follow us
ಸುಷ್ಮಾ ಚಕ್ರೆ
|

Updated on: Apr 21, 2025 | 4:28 PM

ನವದೆಹಲಿ, ಏಪ್ರಿಲ್ 21: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ರೋಹಿತ್ ವೇಮುಲಾ ಕಾಯ್ದೆಯ ಅನುಷ್ಠಾನವನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ರೋಹಿತ್ ವೇಮುಲಾ ಅವರ ಸ್ಮರಣಾರ್ಥ ಈ ಕಾನೂನನ್ನು ಜಾರಿಗೆ ತರುವ ಮಹತ್ವವನ್ನು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ಪ್ರಸ್ತಾವಿತ ರೋಹಿತ್ ವೇಮುಲಾ ಕಾಯ್ದೆಯು ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು, ನಿರ್ಲಕ್ಷ್ಯ ಅಥವಾ ಕಿರುಕುಳದ ಪ್ರಕರಣಗಳಲ್ಲಿ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಕಾನೂನು ಚೌಕಟ್ಟನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಏಪ್ರಿಲ್ 19ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು, ರೋಹಿತ್ ವೇಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ತಮ್ಮ ಕಾನೂನು ಸಲಹೆಗಾರ ಮತ್ತು ತಂಡಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಯಾರೂ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸದಂತೆ ಕಾನೂನು ಜಾರಿಗೆ ತರುವಂತೆ ರಾಹುಲ್ ಗಾಂಧಿ ಒತ್ತಾಯಿಸಿದ ನಂತರ, ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರುವ ನಿರ್ಧಾರದಲ್ಲಿ ಕರ್ನಾಟಕ ಸರ್ಕಾರ ದೃಢವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

“ಡಾ. ಬಿ. ಆರ್. ಅಂಬೇಡ್ಕರ್ ಅವರು ಎದುರಿಸಿದ ಘಟನೆಯ ಬಗ್ಗೆ ಏಪ್ರಿಲ್ 16ರಂದು ಬರೆದ ನಿಮ್ಮ ಪತ್ರದ ಉಲ್ಲೇಖವು ಇಂದಿಗೂ ದುಃಖಕರ ಸಂಗತಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಎದುರಿಸಿದ ಅವಮಾನ ಮತ್ತು ಕಳಂಕವನ್ನು ಯಾವುದೇ ಮಗು ಅಥವಾ ವಯಸ್ಕ ಎದುರಿಸಬಾರದು” ಎಂದು ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

ಇದನ್ನೂ ಓದಿ: ರಾಹುಲ್ ಗಾಂಧಿಯಿಂದ ಇತಿಹಾಸ ಕಲಿಯಬೇಡಿ; ನೆಹರು ಬಗ್ಗೆಯೇ ತಪ್ಪು ಹೇಳಿದ್ದಕ್ಕೆ ಬಿಜೆಪಿ ಸಂಸದ ವ್ಯಂಗ್ಯ

“ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳನ್ನು ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಇನ್ನು ಮುಂದೆ ಯಾವುದೇ ತಾರತಮ್ಯವನ್ನು ಎದುರಿಸಬಾರದು ಎಂಬ ಉದ್ದೇಶದಿಂದ ಅವರನ್ನು ಮುಖ್ಯವಾಹಿನಿಗೆ ತರಲು ನಾವು ಕೈಜೋಡಿಸಬೇಕು” ಎಂದು ಭರವಸೆ ನೀಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯವನ್ನು ತಡೆಗಟ್ಟಲು ಕಾರ್ಯನಿರ್ವಹಿಸುವ ಶಾಸನವಾದ ರೋಹಿತ್ ವೇಮುಲಾ ಕಾಯ್ದೆಯ ಕರಡನ್ನು ಸಿದ್ಧಪಡಿಸಲು ನಾನು ನನ್ನ ಕಾನೂನು ಸಲಹೆಗಾರರ ತಂಡಕ್ಕೆ ಸೂಚಿಸಿದ್ದೇನೆ” ಎಂದು ಹೇಳಿದ್ದಾರೆ.

ರೋಹಿತ್ ವೇಮುಲಾ ಯಾರು?:

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ 26 ವರ್ಷದ ದಲಿತ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲಾ 2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಯಿತು. ತನ್ನ ಸೂಸೈಡ್ ನೋಟ್​​ನಲ್ಲಿ ಆತ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಾನು ಎದುರಿಸಿದ ಜಾತಿ ಆಧಾರಿತ ತಾರತಮ್ಯವನ್ನು ಪ್ರಸ್ತಾಪಿಸಿದ್ದರು. ಹಾಗೇ, ತಳ ಸಮುದಾಯಗಳ ಅನೇಕ ವಿದ್ಯಾರ್ಥಿಗಳು ಅನುಭವಿಸುವ ಕಠಿಣ ವಾಸ್ತವಗಳತ್ತ ಗಮನ ಸೆಳೆದಿದ್ದರು. ಕಾಂಗ್ರೆಸ್ ಪಕ್ಷವು ಈಗ ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಒತ್ತಾಯಿಸುತ್ತಿದೆ. ಇದು ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಪ್ರಸ್ತಾವಿತ ಶಾಸನವಾಗಿದೆ.

ಇದನ್ನೂ ಓದಿ: ನ್ಯಾಶನಲ್ ಹೆರಾಲ್ಡ್ ಪ್ರಕರಣ: ಇಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಜನವರಿ 17, 2016ರಂದು ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಭಾರತೀಯ ಉನ್ನತ ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯದ ರಾಷ್ಟ್ರೀಯ ಸಂಕೇತವಾಯಿತು. ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ಸದಸ್ಯರಾಗಿದ್ದ ವೇಮುಲಾ ಅವರನ್ನು ಬಲಪಂಥೀಯ ವಿದ್ಯಾರ್ಥಿ ಗುಂಪಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಜೊತೆಗಿನ ವಿವಾದದ ನಂತರ ಇತರ ನಾಲ್ವರೊಂದಿಗೆ ಅಮಾನತುಗೊಳಿಸಲಾಗಿತ್ತು. ಇದಾದ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವು ದೇಶಾದ್ಯಂತ ಪ್ರತಿಭಟನೆಗಳನ್ನು ಹುಟ್ಟುಹಾಕಿತು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ಬಗ್ಗೆ ಚರ್ಚೆಗಳನ್ನು ತೀವ್ರಗೊಳಿಸಿತು. ನಂತರ ಸರ್ಕಾರಿ ಸಮಿತಿಯು ಅವರ ದಲಿತ ಸ್ಥಾನಮಾನವನ್ನು ಪ್ರಶ್ನಿಸಿದರೂ, ಅನೇಕ ಕಾರ್ಯಕರ್ತರು ಮತ್ತು ವಿದ್ವಾಂಸರು ಅವರ ಸಾವನ್ನು ವ್ಯವಸ್ಥಿತ ಜಾತಿ ದಬ್ಬಾಳಿಕೆಯ ಸಂಕೇತವೆಂದು ಪರಿಗಣಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು