AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಪೌರತ್ವ ರದ್ದಾಗುತ್ತಾ? ದ್ವಿಪೌರತ್ವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟ ಕೋರ್ಟ್​

Rahul Gandhi’s citizenship Row: ರಾಹುಲ್ ಗಾಂಧಿ ದ್ವಿಪೌರತ್ವ ಆರೋಪದ ವಿಷಯ ದೊಡ್ಡ ರಾಜಕೀಯ ವಿವಾದವಾಗಿ ಪರಿಣಮಿಸಿದೆ. ಪೌರತ್ವ ಸಂಬಂಧಿತ ವಿಷಯಗಳ ಬಗ್ಗೆ ನಿರ್ಧರಿಸಲು ಕೇಂದ್ರ ಸರ್ಕಾರವು ಸಮರ್ಥವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್​ ಹೇಳಿದೆ. ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಬಗ್ಗೆ ಸಿಬಿಐ ತನಿಖೆಗೆ ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಮೌಖಿಕ ಅವಲೋಕನ ಮಾಡಲಾಯಿತು.

ರಾಹುಲ್ ಗಾಂಧಿ ಪೌರತ್ವ ರದ್ದಾಗುತ್ತಾ? ದ್ವಿಪೌರತ್ವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟ ಕೋರ್ಟ್​
ರಾಹುಲ್ ಗಾಂಧಿImage Credit source: NDTV
ನಯನಾ ರಾಜೀವ್
|

Updated on:Dec 20, 2024 | 12:52 PM

Share

ಪೌರತ್ವ ಸಂಬಂಧಿತ ವಿಷಯಗಳ ಬಗ್ಗೆ ನಿರ್ಧರಿಸಲು ಕೇಂದ್ರ ಸರ್ಕಾರವು ಸಮರ್ಥವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್​ ಹೇಳಿದೆ. ಲೋಕಸಭಾ ವಿಪಕ್ಷ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ದ್ವಿಪೌರತ್ವಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್​ ಈ ವಿಚಾರವನ್ನು ಹೇಳಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಬಗ್ಗೆ ಸಿಬಿಐ ತನಿಖೆಗೆ ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಮೌಖಿಕ ಅವಲೋಕನ ಮಾಡಲಾಯಿತು.

ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಮತ್ತು ನ್ಯಾಯಮೂರ್ತಿ ಜಸ್‌ಪ್ರೀತ್ ಸಿಂಗ್ ಅವರ ಪೀಠದ ವಿಚಾರಣೆ ನಡೆಸುತ್ತಿರುವ ಎಸ್. ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ಚುನಾವಣಾ ಆಯುಕ್ತರು, ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮತ್ತು ರಾಯ್ ಬರೇಲಿಯ ಚುನಾವಣಾಧಿಕಾರಿಗೆ ನಿರ್ದೇಶನಗಳನ್ನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಯಿತು.

ಬ್ರಿಟನ್ ಪೌರತ್ವ ಆರೋಪ

ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ಪೌರತ್ವ ಆರೋಪದಡಿ ಸಲ್ಲಿಸಿರುವ ಅರ್ಜಿಯ ಕುರಿತು ನಿರ್ಧಾರವನ್ನು ತಿಳಿಸಲು ಅಲಹಾಬಾದ್ ಹೈಕೋರ್ಟ್‌ ಮುಂದಿನ ವರ್ಷ ಮಾರ್ಚ್ 24 ರವರೆಗೆ ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ ನೀಡಿದೆ. ರಾಹುಲ್ ಅವರ ಬ್ರಿಟಿಷ್ ಪೌರತ್ವವನ್ನು ಮರೆಮಾಚಿರುವ ಆರೋಪದ ಮೇಲೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಈ ವರ್ಷದ ಚುನಾವಣೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಲಾಗಿದೆ.

ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್ ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಮತ್ತು ನ್ಯಾಯಮೂರ್ತಿ ಜಸ್ ಪ್ರೀತ್ ಸಿಂಗ್ ಅವರ ಪೀಠ ಈ ಆದೇಶ ನೀಡಿದೆ. ವಿಘ್ನೇಶ್‌ಗೂ ಮುನ್ನವೇ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಕೂಡ ರಾಹುಲ್‌ ಪೌರತ್ವಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ತಮ್ಮ ವರದಿಯನ್ನು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನ್ಯಾಯಾಲಯದಿಂದ ನಿರ್ದೇಶನವನ್ನು ಕೋರಿದ್ದರು.

ಮತ್ತಷ್ಟು ಓದಿ: ಸಂಸತ್​ನಲ್ಲಿ ಬಿಜೆಪಿ ಸಂಸದರ ಮೇಲೆ ದೈಹಿಕ ಹಲ್ಲೆ ಆರೋಪ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲು

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ವಿರುದ್ಧ ಸಲ್ಲಿಸಿರುವ ವರದಿಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆಯೂ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದರು.

ವಿವಾದ ಏನು? ವಿಘ್ನೇಶ್ ಶಿಶಿರ್ ಅವರು ತಮ್ಮ ಅರ್ಜಿಯಲ್ಲಿ ರಾಹುಲ್ ಗಾಂಧಿಗೆ ದ್ವಿಪೌರತ್ವವಿದೆ, ಅದು ಸಾಬೀತಾದರೆ ಭಾರತೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ ಎಂದು ಆರೋಪಿಸಿದ್ದಾರೆ. ಇದರಿಂದ ಅವರು ಚುನಾವಣೆಗೆ ಸ್ಪರ್ಧಿಸಲು ಅಥವಾ ಲೋಕಸಭಾ ಸದಸ್ಯರಾಗಿ ಅಧಿಕಾರ ನಡೆಸಲು ಅನರ್ಹರಾಗುತ್ತಾರೆ. ಭಾರತೀಯ ನ್ಯಾಯಾಂಗ ಸಂಹಿತೆ ಮತ್ತು ಪಾಸ್‌ಪೋರ್ಟ್ ಕಾಯ್ದೆಯಡಿ ದ್ವಿಪೌರತ್ವ ಅಪರಾಧವಾಗಿರುವುದರಿಂದ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಘ್ನೇಶ್ ಶಿಶಿರ್ ಅವರು ರಾಹುಲ್ ಗಾಂಧಿಯವರ ಚುನಾವಣಾ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ಮುಖ್ಯ ಚುನಾವಣಾ ಆಯುಕ್ತರು, ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮತ್ತು ರಾಯ್ ಬರೇಲಿಯ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ದ್ವಿಪೌರತ್ವ ಎಂದರೇನು? ಭಾರತದಲ್ಲಿ ಅವಕಾಶವಿದೆಯೇ?

ದ್ವಿಪೌರತ್ವವೆಂದರೆ ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡು ದೇಶಗಳ ಪೌರತ್ವ ಹೊಂದಿರುವುದು ಎಂದರ್ಥ. ಯುನೈಟೆಡ್ ಸ್ಟೇಟ್ಸ್, ಫಿನ್ಲ್ಯಾಂಡ್, ಅಲ್ಬೇನಿಯಾ, ಇಸ್ರೇಲ್ ಮತ್ತು ಪಾಕಿಸ್ತಾನದಂತಹ ಅನೇಕ ದೇಶಗಳು ದ್ವಿಪೌರತ್ವವನ್ನು ಅನುಮತಿಸುತ್ತವೆ. ಭಾರತವು ತನ್ನ ಸಂವಿಧಾನದ ಅಡಿಯಲ್ಲಿ ದ್ವಿಪೌರತ್ವವನ್ನು ಅನುಮತಿಸುವುದಿಲ್ಲ. ಇದರರ್ಥ ಒಬ್ಬ ಭಾರತೀಯ ನಾಗರಿಕನು ಏಕಕಾಲದಲ್ಲಿ ಬೇರೆ ಯಾವುದೇ ದೇಶದ ಪೌರತ್ವವನ್ನು ಹೊಂದಲು ಸಾಧ್ಯವಿಲ್ಲ. ಭಾರತದ ಸಂವಿಧಾನದ ಅಡಿಯಲ್ಲಿ ಇಡೀ ದೇಶಕ್ಕೆ ಏಕ ಪೌರತ್ವದ ವ್ಯವಸ್ಥೆ ಇದೆ.

ಇದೆ. ಭಾರತದ ಸಂವಿಧಾನದಲ್ಲಿ ದ್ವಿಪೌರತ್ವಕ್ಕೆ ಯಾವುದೇ ಅವಕಾಶವಿಲ್ಲ. ಭಾರತೀಯ ಪ್ರಜೆಯು ಇನ್ನೊಂದು ದೇಶದ ಪೌರತ್ವವನ್ನು ಪಡೆಯಲು ಬಯಸಿದರೆ, ಅವನು ತನ್ನ ಭಾರತೀಯ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು ಮತ್ತು ಭಾರತೀಯ ಪೌರತ್ವವನ್ನು ತ್ಯಜಿಸಬೇಕಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:52 pm, Fri, 20 December 24

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ