AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಮಾನನಷ್ಟ ಮೊಕದ್ದಮೆಯಲ್ಲಿ ವಿನಾಯಿತಿ ಕೋರಿದ ರಾಹುಲ್ ಗಾಂಧಿ ಅರ್ಜಿ ಏಪ್ರಿಲ್ 15 ರಂದು ವಿಚಾರಣೆ

ಕಳೆದ ವರ್ಷ ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಲು, ಪಕ್ಷದ ಕೆಲಸಕ್ಕೆ ಹಾಜರಾಗಲು ಮತ್ತು ಸಾಕಷ್ಟು ಪ್ರಯಾಣಿಸಬೇಕಾಗಿ ಬರುವುದರಿಂದ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು

Rahul Gandhi: ಮಾನನಷ್ಟ ಮೊಕದ್ದಮೆಯಲ್ಲಿ ವಿನಾಯಿತಿ ಕೋರಿದ ರಾಹುಲ್ ಗಾಂಧಿ ಅರ್ಜಿ ಏಪ್ರಿಲ್ 15 ರಂದು ವಿಚಾರಣೆ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on:Apr 01, 2023 | 8:16 PM

Share

ಥಾಣೆ: ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ನ್ಯಾಯಾಲಯವು ಶನಿವಾರ ಮಾನನಷ್ಟ ಮೊಕದ್ದಮೆಗೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿದ ಅರ್ಜಿಯ ವಾದವನ್ನು ಆಲಿಸಿ ಆದೇಶವನ್ನು ಹೊರಡಿಸುವ ಸಾಧ್ಯತೆಯಿರುವಾಗ ಏಪ್ರಿಲ್ 15 ಕ್ಕೆ ಪ್ರಕರಣವನ್ನು ಮುಂದೂಡಿದೆ. ದೂರುದಾರ ಮತ್ತು ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಕುಂಟೆ ಅವರು 2014 ರಲ್ಲಿ ಭಿವಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಗಾಂಧಿಯವರ ಭಾಷಣವನ್ನು ವೀಕ್ಷಿಸಿದ ನಂತರ ಖಾಸಗಿ ದೂರು ದಾಖಲಿಸಿದ್ದರು. ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಕುಂಟೆ ದೂರು ನೀಡಿದ್ದರು.ಗಾಂಧಿ ಅವರು ಜೂನ್ 2018 ರಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದು ತಾನು ನಿರಪರಾಧಿ ಎಂದು ಹೇಳಿದ್ದರು.

ಕಳೆದ ವರ್ಷ ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಲು, ಪಕ್ಷದ ಕೆಲಸಕ್ಕೆ ಹಾಜರಾಗಲು ಮತ್ತು ಸಾಕಷ್ಟು ಪ್ರಯಾಣಿಸಬೇಕಾಗಿ ಬರುವುದರಿಂದ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ನಂತರ ಕಾಂಗ್ರೆಸ್ ನಾಯಕನನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಕುಂಟೆ , ರಾಹುಲ್ ಅರ್ಜಿಯನ್ನು ವಿರೋಧಿಸಿದ್ದಾರೆ.

ಶನಿವಾರದಂದು ಪ್ರಥಮ ದರ್ಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಎಲ್ ಸಿ ವಾಡಿಕರ್ ಅವರ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಪರ ವಕೀಲ ನಾರಾಯಣ ಅಯ್ಯರ್ ಅವರು ಕಾಂಗ್ರೆಸ್ ನಾಯಕರ ಅನರ್ಹತೆಗೆ ರಾಷ್ಟ್ರಪತಿಗಳಿಗೆ ಮಾತ್ರ ಅಧಿಕಾರವಿದೆ. ಅದಲ್ಲದೆ, ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ಶಿಕ್ಷೆಯನ್ನು ಪ್ರಶ್ನಿಸಲು ರಾಹುಲ್ ಸಿದ್ಧರಿದ್ದಾರೆ ಎಂದು ಅವರು ಹೇಳಿದರು.

ದೂರುದಾರರು ಎತ್ತಿರುವ ಸಂಗತಿ ಈ ಪ್ರಕರಣದಲ್ಲಿ ಶಾಶ್ವತ ವಿನಾಯಿತಿ ಕೋರಿ ಆರೋಪಿಗಳಿಗೆ ಹಾನಿಯನ್ನುಂಟುಮಾಡುವುದಿಲ್ಲ ಅಥವಾ ಕಡೆಗಣಿಸುವಂತಿಲ್ಲ ಎಂದು ಅವರು ವಾದಿಸಿದರು. ಕುಂಟೆ ಅವರ ಪರ ವಕೀಲ ಪ್ರಭೋದ್ ಜಯವಂತ್ ಅವರು ನ್ಯಾಯಾಲಯವನ್ನು ತಮ್ಮ ಮಾಹಿತಿ ಗಮನಿಸಿ ಆದೇಶವನ್ನು ಅಂಗೀಕರಿಸುವಾಗ ಅದರಂತೆ ನಿರ್ಧರಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: Navjot Singh Sidhu: 10 ತಿಂಗಳ ಜೈಲು ಶಿಕ್ಷೆ ನಂತರ ಬಿಡುಗಡೆಯಾದ ನವಜೋತ್ ಸಿಂಗ್ ಸಿಧು; ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ

ಎಲ್ಲಾ ಕಳ್ಳರ ಉಪನಾಮ ಮೋದಿ ಎಂದೇ ಯಾಕಿದೆ? ಎಂಬ ಟೀಕೆಗಳ ವಿರುದ್ಧ 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಸೂರತ್‌ನ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆದರೆ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತು. ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿತು. ಮರುದಿನ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 pm, Sat, 1 April 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ