AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Navin: ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

ಐಆರ್​ಎಸ್​ ಅಧಿಕಾರಿ ರಾಹುಲ್ ನವೀನ್ ಅವರನ್ನು ಎರಡು ವರ್ಷಗಳ ಅವಧಿಗೆ ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದುವರೆಗೂ ಜಾರಿ ನಿರ್ದೇಶನಾಲಯದ ಹಂಗಾಮಿ ಮುಖ್ಯಸ್ಥರಾಗಿದ್ದ ರಾಹುಲ್ ನವೀನ್ ಅವರನ್ನು ಎರಡು ವರ್ಷಗಳ ಕಾಲ ಪೂರ್ಣಾವಧಿ ನಿರ್ದೇಶಕರಾಗಿ ಸರ್ಕಾರ ಇಂದು ನೇಮಿಸಿದೆ.

Rahul Navin: ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ
ರಾಹುಲ್ ನವೀನ್
ಸುಷ್ಮಾ ಚಕ್ರೆ
|

Updated on: Aug 14, 2024 | 7:58 PM

Share

ನವದೆಹಲಿ: ಹಂಗಾಮಿ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥ ರಾಹುಲ್ ನವೀನ್ ಅವರನ್ನು ಫೆಡರಲ್ ಆ್ಯಂಟಿ ಮನಿ ಲಾಂಡರಿಂಗ್ ಏಜೆನ್ಸಿಯ ಪೂರ್ಣ ಅವಧಿಯ ನಿರ್ದೇಶಕರಾಗಿ ಇಂದು (ಬುಧವಾರ) ನೇಮಿಸಲಾಗಿದೆ. ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಹೊರಡಿಸಿದ ಆದೇಶದಲ್ಲಿ, ಆದಾಯ ತೆರಿಗೆ ಕೇಡರ್‌ನ 1993ರ ಬ್ಯಾಚ್‌ನ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿ ರಾಹುಲ್ ನವೀನ್ ಅವರ ನೇಮಕಾತಿಯನ್ನು ಎರಡು ವರ್ಷಗಳ ಅವಧಿಗೆ ಮಾಡಲಾಗಿದೆ.

57 ವರ್ಷದ ರಾಹುಲ್ ನವೀನ್ ನವೆಂಬರ್ 2019ರಲ್ಲಿ ವಿಶೇಷ ನಿರ್ದೇಶಕರಾಗಿ ಜಾರಿ ನಿರ್ದೇಶನಾಲಯಕ್ಕೆ ಸೇರಿದರು. ಅವರ ಹಿಂದಿನ ನಿರ್ದೇಶಕರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯು ಕಳೆದ ವರ್ಷ ಸೆಪ್ಟೆಂಬರ್ 15ರಂದು ಕೊನೆಗೊಂಡ ನಂತರ ರಾಹುಲ್ ನವೀನ್ ಅವರನ್ನು EDಯ ಹಂಗಾಮಿ ನಿರ್ದೇಶಕರಾಗಿ ನೇಮಿಸಲಾಯಿತು.

ಇದನ್ನೂ ಓದಿ: National Herald Case: ನ್ಯಾಷನಲ್​ ಹೆರಾಲ್ಡ್​ ಪ್ರಕರಣ, ರಾಹುಲ್​ ಗಾಂಧಿಗೆ ಸಮನ್ಸ್​ ಕಳುಹಿಸಲು ಇಡಿ ಸಿದ್ಧತೆ

ಅಂತಾರಾಷ್ಟ್ರೀಯ ತೆರಿಗೆ ವಿಷಯಗಳಲ್ಲಿ ಪರಿಣಿತರಾಗಿರುವ ರಾಹುಲ್ ನವೀನ್ ಇಡಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಪ್ರತ್ಯೇಕ ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಉನ್ನತ ಮಟ್ಟದ ಬಂಧನಗಳನ್ನು ಕಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ