AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೂ ನಿಮ್ಮಂತೆ ಸಾಮಾನ್ಯ ನಾಗರಿಕ; ರೈಲು ಪ್ರಯಾಣ ಮಾಡಿ ಅಭಿಪ್ರಾಯ ಸಂಗ್ರಹಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

Ashwini Vaishnaw: ಮತ್ತೊಂದು ವಿಡಿಯೋದಲ್ಲಿ ಅವರು ಇತರ ಅಧಿಕಾರಿಗಳ ಜೊತೆ ಕುಳಿತು, ಯೋಜನೆಗಳ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂದಿದೆ. ರಾಯಗಢಕ್ಕೆ ಪ್ರಯಾಣ ಬೆಳೆಸಿರುವ ವೇಳೆ ವಿವಿಧ ರೈಲ್ವೇ ಯೋಜನೆಯ ಬಗ್ಗೆ ಚರ್ಚಿಸಿದೆ ಎಂದು ಅವರು ವಿಡಿಯೋ ಹಂಚಿಕೊಂಡಿದ್ದಾರೆ.

ನಾನೂ ನಿಮ್ಮಂತೆ ಸಾಮಾನ್ಯ ನಾಗರಿಕ; ರೈಲು ಪ್ರಯಾಣ ಮಾಡಿ ಅಭಿಪ್ರಾಯ ಸಂಗ್ರಹಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
ರೈಲು ಪ್ರಯಾಣದ ವೇಳೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
TV9 Web
| Edited By: |

Updated on: Aug 20, 2021 | 11:32 AM

Share

ದೆಹಲಿ: ಭುವನೇಶ್ವರ್​ನಿಂದ ರಾಯಗಢ ರೈಲಿನಲ್ಲಿ ಗುರುವಾರ ರಾತ್ರಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಆಶ್ಚರ್ಯಕರ ಘಟನೆಯೊಂದನ್ನು ಎದುರಿಸಿದರು. ಅದೇನೆಂದರೆ, ಭಾರತದ ರೈಲ್ಬೇ ಸಚಿವ ಅಶ್ವಿನಿ ವೈಷ್ಣವ್ ಸ್ವತಃ ರೈಲು ಪ್ರಯಾಣಕ್ಕೆ ಜೊತೆಯಾದದ್ದು! ಹೌದು. ರೈಲ್ವೇ ಮಂತ್ರಿ ಅಶ್ವಿನಿ ವೈಷ್ಣವ್ ಗುರುವಾರ ರಾತ್ರಿ ರೈಲಿನಲ್ಲಿ ಒಂದು ಬೋಗಿಯಿಂದ ಮತ್ತೊಂದು ಬೋಗಿಗೆ ಸಂಚರಿಸುತ್ತಾ ರೈಲು ಸೇವೆ ಹಾಗೂ ಕಾರ್ಯನಿರ್ವಹಿಸುವ ವಿಧಾನದ ಬಗ್ಗೆ ಪ್ರಯಾಣಿಕರಿಂದ ಅಭಿಪ್ರಾಯ ಪಡೆದರು.

ಮಾಜಿ ಐಎಎಸ್ ಅಧಿಕಾರಿ ಆಗಿರುವ ಅಶ್ವಿನಿ ವೈಷ್ಣವ್, ಕಳೆದ ತಿಂಗಳು ಕೇಂದ್ರ ಸಚಿವ ಸಂಪುಟವನ್ನು ಸೇರಿಕೊಂಡಿದ್ದರು. ರೈಲ್ವೇ ಸಚಿವರಾಗಿ ಅಧಿಕಾರ ವಹಿಸಿದ್ದರು. ಅವರು ಬಿಜೆಪಿಯ ಜನ ಆಶೀರ್ವಾದ ಯಾತ್ರೆಯ ಹಿನ್ನೆಲೆಯಲ್ಲಿ, ನಾಲ್ಕು ದಿನಗಳ ಒಡಿಶಾ ಪ್ರವಾಸದಲ್ಲಿ ಇದ್ದಾರೆ. ಈ ವೇಳೆ, ಅವರು ಭುವನೇಶ್ವರ್​ನಿಂದ ರಾಯಗಢದ ರೈಲಿನಲ್ಲಿ ಗುರುವಾರ ಸಂಚಾರ ಮಾಡಿದ್ದಾರೆ.

ಸಚಿವ ಅಶ್ವಿನಿ ವೈಷ್ಣವ್ ರೈಲಿನಲ್ಲಿ ಪ್ರಯಾಣಿಕರ ಜೊತೆಗೆ ಸಂವಾದ ನಡೆಸುತ್ತಿರುವುದು, ಸಹಪ್ರಯಾಣಿಕರಂತೆ ಜನರ ಜೊತೆಯಾಗಿ ಅಭಿಪ್ರಾಯ ಸಂಗ್ರಹಿಸುತ್ತಿರುವ ವಿಡಿಯೋಗಳು ಹರಿದಾಡಿವೆ. ರೈಲು ಸ್ವಚ್ಛವಾಗಿದೆಯೇ ಎಂದು ರೈಲು ಪ್ರಯಾಣದ ಬಗ್ಗೆ ಅನುಭವ ಕೇಳಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ, ಇನ್ನೂ ಕೆಲವು ಪ್ರಯಾಣಿಕರೊಂದಿಗೆ ಅವರು ಮಾತನಾಡಿರುವುದು ಕಂಡುಬಂದಿದೆ. ಪ್ರಯಾಣಿಕರೊಬ್ಬರು ‘ಪ್ರಧಾನಿ ಮೋದಿ ಒಡಿಶಾಗೆ ಮೊದಲ ಬಾರಿಗೆ ರೈಲ್ವೇ ಸಚಿವರನ್ನು ನೀಡಿದ್ದಾರೆ’ ಎಂದು ಹೇಳುವುದು ಕೇಳಿಬಂದಿದೆ. ಅಶ್ವಿನಿ ವೈಷ್ಣವ್ ಟ್ವಿಟರ್​ನಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದರಲ್ಲಿ, ಅವರು ಪ್ರಯಾಣಿಕರ ಜೊತೆ ಕುಳಿತು ಮಾತನಾಡುತ್ತಿರುವುದು ಕಂಡುಬಂದಿದೆ. ಅದರಲ್ಲಿ ಅವರು, ನಿಮ್ಮಂತಹಾ ಯುವಜನರನ್ನು ಭೇಟಿ ಆಗಲು ಅವಕಾಶ ಸಿಕ್ಕಿರುವುದು ಖುಷಿ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಒಬ್ಬರು ಮಹಿಳೆ, ನಿಮ್ಮನ್ನು ಭೇಟಿ ಆಗಲು ಸಿಕ್ಕಿರುವುದು ದೊಡ್ಡ ಅವಕಾಶ. ನಾವು ನಿಮ್ಮನ್ನು ಹೀಗೆ ಭೇಟಿ ಆಗಬಹದು ಎಂದು ಅಂದುಕೊಂಡೇ ಇರಲಿಲ್ಲ ಎಂದು ಅವರು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಅಶ್ವಿನಿ ವೈಷ್ಣವ್, ನಾವು ಕೂಡ ನಿಮ್ಮ ಹಾಗೆ ಸಾಮಾನ್ಯ ನಾಗರಿಕರೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ ಅವರು ಇತರ ಅಧಿಕಾರಿಗಳ ಜೊತೆ ಕುಳಿತು, ಯೋಜನೆಗಳ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂದಿದೆ. ರಾಯಗಢಕ್ಕೆ ಪ್ರಯಾಣ ಬೆಳೆಸಿರುವ ವೇಳೆ ವಿವಿಧ ರೈಲ್ವೇ ಯೋಜನೆಯ ಬಗ್ಗೆ ಚರ್ಚಿಸಿದೆ ಎಂದು ಅವರು ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Neo Metro: ಮೈಸೂರಿಗೆ ಬರಲಿರುವ ನಿಯೋ ಮೆಟ್ರೋ ವಿಶೇಷತೆಗಳೇನು? ರಸ್ತೆಯ ಮೇಲೆ ಓಡಾಡುವ ರೈಲು ಹೇಗಿರಲಿದೆ?

‘ಹೆಮ್ಮೆಯ ಕ್ಷಣ’: ಪುನರ್​ನಿರ್ಮಾಣಗೊಂಡ ಗುಜರಾತ್ ರೈಲ್ವೇ ನಿಲ್ದಾಣದಲ್ಲಿ ಸೆಲ್ಫೀ ಕ್ಲಿಕ್ಕಿಸಿಕೊಂಡ ಅಶ್ವಿನಿ ವೈಷ್ಣವ್

(Railway Minister Ashwini Vaishnaw boards over night Train from Bhuvaneshwar to Rayagada collects feedback from Passengers)

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ