AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು! ಲಾಭ ಮಾತ್ರ ರೈಲ್ವೆ ಇಲಾಖೆಗೇ!!

2019-20 ನೇ ಸಾಲಿನಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಪ್ರಯಾಣಿಕರು, ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೆ ಅಧಿಕಾರಿಗಳು ಟಿಕೆಟ್ ರಹಿತ ಪ್ರಯಾಣಿಕರಿಗೆ ವಿಧಿಸಿದ ದಂಡದಿಂದ ರೈಲ್ವೆ ಇಲಾಖೆ 561.73 ಕೋಟಿ ರೂ ಲಾಭ ಗಳಿಸಿದೆ.  ಮಧ್ಯಪ್ರದೇಶ ಮೂಲದ RTI ಕಾರ್ಯಕರ್ತ ಚಂದ್ರಶೇಖರ್ ಗೌರ್ ಸಲ್ಲಿಸಿದ ಆರ್‌ಟಿಐ ಅರ್ಜಿಗೆ,ಸಂಬಂದಪಟ್ಟ ಇಲಾಖೆ ನೀಡಿದ ಮಾಹಿತಿಯಿಂದಾಗಿ ಈ ವಿಚಾರ ಬಹಿರಂಗಗೊಂಡಿದೆ. ವರ್ಷ ವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು..! ರೈಲ್ವೆ 2016-17ರಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡವಾಗಿ […]

ವರ್ಷವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು! ಲಾಭ ಮಾತ್ರ ರೈಲ್ವೆ ಇಲಾಖೆಗೇ!!
ಸಾಧು ಶ್ರೀನಾಥ್​
|

Updated on:Aug 24, 2020 | 3:57 PM

Share

2019-20 ನೇ ಸಾಲಿನಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಪ್ರಯಾಣಿಕರು, ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೆ ಅಧಿಕಾರಿಗಳು ಟಿಕೆಟ್ ರಹಿತ ಪ್ರಯಾಣಿಕರಿಗೆ ವಿಧಿಸಿದ ದಂಡದಿಂದ ರೈಲ್ವೆ ಇಲಾಖೆ 561.73 ಕೋಟಿ ರೂ ಲಾಭ ಗಳಿಸಿದೆ.  ಮಧ್ಯಪ್ರದೇಶ ಮೂಲದ RTI ಕಾರ್ಯಕರ್ತ ಚಂದ್ರಶೇಖರ್ ಗೌರ್ ಸಲ್ಲಿಸಿದ ಆರ್‌ಟಿಐ ಅರ್ಜಿಗೆ,ಸಂಬಂದಪಟ್ಟ ಇಲಾಖೆ ನೀಡಿದ ಮಾಹಿತಿಯಿಂದಾಗಿ ಈ ವಿಚಾರ ಬಹಿರಂಗಗೊಂಡಿದೆ.

ವರ್ಷ ವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು..! ರೈಲ್ವೆ 2016-17ರಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡವಾಗಿ 405.30 ಕೋಟಿ ರೂ, 2017-18ರಲ್ಲಿ 441.62 ಕೋಟಿ ರೂ, ಮತ್ತು 2018-19ರಲ್ಲಿ 530.06 ಕೋಟಿ ರೂ. ಲಾಭಗಳಿಸಿದೆ. 2019-2020ರಲ್ಲಿ 1.10 ಕೋಟಿ ಪ್ರಯಾಣಿಕರು ಮಾನ್ಯ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿರುವುದು ಕಂಡುಬಂದಿದೆ.

ಟಿಕೆಟ್ ರಹಿತ ಪ್ರಯಾಣವನ್ನು ತಡೆಯಲು ಭಾರತೀಯ ರೈಲ್ವೆ ನಿಯಮಗಳನ್ನು ರೂಪಿಸಿದ್ದು, ಟಿಕೆಟ್ ಇಲ್ಲದೆ ಪ್ರಯಾಣಿಸುವ ಪ್ರಯಾಣಿಕ ಟಿಕೆಟ್ ವೆಚ್ಚದ ಜೊತೆಗೆ ಕನಿಷ್ಠ 250 ರೂ ದಂಡ ಕಟ್ಟಬೇಕು.ಅಥವಾ ಪ್ರಯಾಣಿಕ ದಂಡ ಪಾವತಿಸಲು ನಿರಾಕರಿಸಿದರೆ, ವ್ಯಕ್ತಿಯನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಗೆ ಹಸ್ತಾಂತರಿಸಲಾಗುತ್ತದೆ. ಮತ್ತು ರೈಲ್ವೆ ಕಾಯ್ದೆಯ ಸೆಕ್ಷನ್ 137 ರ ಅಡಿಯಲ್ಲಿ ಕೇಸ್​ ಬುಕ್ ಮಾಡಲಾಗುತ್ತದೆ.

ಬಳಿಕ ವ್ಯಕ್ತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ. ಮ್ಯಾಜಿಸ್ಟ್ರೇಟ್ ಅವನಿಗೆ 1,000 ರೂ ದಂಡ ಕಟ್ಟಬೇಕು. ಒಂದು ವೇಳೆ ವ್ಯಕ್ತಿ ದಂಡವನ್ನು ಪಾವತಿಸಲು ನಿರಾಕರಿಸಿದರೆ, ಅವನು ಅಥವಾ ಅವಳು ಆರು ತಿಂಗಳವರೆಗೆ ಜೈಲುವಾಸ ಅನುಭವಿಸಬೇಕು ಎಂದು ಫರ್ಮಾನು ಹೊರಡಿಸುತ್ತಾರೆ!

Published On - 1:48 pm, Mon, 24 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ