AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು! ಲಾಭ ಮಾತ್ರ ರೈಲ್ವೆ ಇಲಾಖೆಗೇ!!

2019-20 ನೇ ಸಾಲಿನಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಪ್ರಯಾಣಿಕರು, ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೆ ಅಧಿಕಾರಿಗಳು ಟಿಕೆಟ್ ರಹಿತ ಪ್ರಯಾಣಿಕರಿಗೆ ವಿಧಿಸಿದ ದಂಡದಿಂದ ರೈಲ್ವೆ ಇಲಾಖೆ 561.73 ಕೋಟಿ ರೂ ಲಾಭ ಗಳಿಸಿದೆ.  ಮಧ್ಯಪ್ರದೇಶ ಮೂಲದ RTI ಕಾರ್ಯಕರ್ತ ಚಂದ್ರಶೇಖರ್ ಗೌರ್ ಸಲ್ಲಿಸಿದ ಆರ್‌ಟಿಐ ಅರ್ಜಿಗೆ,ಸಂಬಂದಪಟ್ಟ ಇಲಾಖೆ ನೀಡಿದ ಮಾಹಿತಿಯಿಂದಾಗಿ ಈ ವಿಚಾರ ಬಹಿರಂಗಗೊಂಡಿದೆ. ವರ್ಷ ವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು..! ರೈಲ್ವೆ 2016-17ರಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡವಾಗಿ […]

ವರ್ಷವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು! ಲಾಭ ಮಾತ್ರ ರೈಲ್ವೆ ಇಲಾಖೆಗೇ!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 24, 2020 | 3:57 PM

Share

2019-20 ನೇ ಸಾಲಿನಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಪ್ರಯಾಣಿಕರು, ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೆ ಅಧಿಕಾರಿಗಳು ಟಿಕೆಟ್ ರಹಿತ ಪ್ರಯಾಣಿಕರಿಗೆ ವಿಧಿಸಿದ ದಂಡದಿಂದ ರೈಲ್ವೆ ಇಲಾಖೆ 561.73 ಕೋಟಿ ರೂ ಲಾಭ ಗಳಿಸಿದೆ.  ಮಧ್ಯಪ್ರದೇಶ ಮೂಲದ RTI ಕಾರ್ಯಕರ್ತ ಚಂದ್ರಶೇಖರ್ ಗೌರ್ ಸಲ್ಲಿಸಿದ ಆರ್‌ಟಿಐ ಅರ್ಜಿಗೆ,ಸಂಬಂದಪಟ್ಟ ಇಲಾಖೆ ನೀಡಿದ ಮಾಹಿತಿಯಿಂದಾಗಿ ಈ ವಿಚಾರ ಬಹಿರಂಗಗೊಂಡಿದೆ.

ವರ್ಷ ವರ್ಷವೂ ಹೆಚ್ಚಾಗ್ತಿದ್ದಾರೆ ಟಿಕೆಟ್ ರಹಿತ ಪ್ರಯಾಣಿಕರು..! ರೈಲ್ವೆ 2016-17ರಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡವಾಗಿ 405.30 ಕೋಟಿ ರೂ, 2017-18ರಲ್ಲಿ 441.62 ಕೋಟಿ ರೂ, ಮತ್ತು 2018-19ರಲ್ಲಿ 530.06 ಕೋಟಿ ರೂ. ಲಾಭಗಳಿಸಿದೆ. 2019-2020ರಲ್ಲಿ 1.10 ಕೋಟಿ ಪ್ರಯಾಣಿಕರು ಮಾನ್ಯ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿರುವುದು ಕಂಡುಬಂದಿದೆ.

ಟಿಕೆಟ್ ರಹಿತ ಪ್ರಯಾಣವನ್ನು ತಡೆಯಲು ಭಾರತೀಯ ರೈಲ್ವೆ ನಿಯಮಗಳನ್ನು ರೂಪಿಸಿದ್ದು, ಟಿಕೆಟ್ ಇಲ್ಲದೆ ಪ್ರಯಾಣಿಸುವ ಪ್ರಯಾಣಿಕ ಟಿಕೆಟ್ ವೆಚ್ಚದ ಜೊತೆಗೆ ಕನಿಷ್ಠ 250 ರೂ ದಂಡ ಕಟ್ಟಬೇಕು.ಅಥವಾ ಪ್ರಯಾಣಿಕ ದಂಡ ಪಾವತಿಸಲು ನಿರಾಕರಿಸಿದರೆ, ವ್ಯಕ್ತಿಯನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಗೆ ಹಸ್ತಾಂತರಿಸಲಾಗುತ್ತದೆ. ಮತ್ತು ರೈಲ್ವೆ ಕಾಯ್ದೆಯ ಸೆಕ್ಷನ್ 137 ರ ಅಡಿಯಲ್ಲಿ ಕೇಸ್​ ಬುಕ್ ಮಾಡಲಾಗುತ್ತದೆ.

ಬಳಿಕ ವ್ಯಕ್ತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ. ಮ್ಯಾಜಿಸ್ಟ್ರೇಟ್ ಅವನಿಗೆ 1,000 ರೂ ದಂಡ ಕಟ್ಟಬೇಕು. ಒಂದು ವೇಳೆ ವ್ಯಕ್ತಿ ದಂಡವನ್ನು ಪಾವತಿಸಲು ನಿರಾಕರಿಸಿದರೆ, ಅವನು ಅಥವಾ ಅವಳು ಆರು ತಿಂಗಳವರೆಗೆ ಜೈಲುವಾಸ ಅನುಭವಿಸಬೇಕು ಎಂದು ಫರ್ಮಾನು ಹೊರಡಿಸುತ್ತಾರೆ!

Published On - 1:48 pm, Mon, 24 August 20

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು