AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Updates: ಒಡಿಶಾ, ತೆಲಂಗಾಣ ಸೇರಿ ಈ ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್​ ಘೋಷಣೆ

ಮುಂದಿನ 3 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಮಳೆಯಾಗಲಿದೆ

Rain Updates: ಒಡಿಶಾ, ತೆಲಂಗಾಣ ಸೇರಿ ಈ ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್​ ಘೋಷಣೆ
ಮಳೆ
TV9 Web
| Edited By: |

Updated on: Sep 19, 2022 | 3:50 PM

Share

ನವದೆಹಲಿ: ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಈ ವರ್ಷದ ಮುಂಗಾರು (Monsoon) ಕೊನೆಯ ಹಂತದಲ್ಲಿದ್ದರೂ ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಒಡಿಶಾ (Odisha Rain), ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಸೆ. 21ರವರೆಗೆ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಸೆ. 21 ಮತ್ತು 22ರಂದು ವ್ಯಾಪಕ ಮಳೆಯಾಗುತ್ತದೆ ಎಂದು IMD ಹೇಳಿದೆ.

ಮುಂದಿನ 3 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Rain Updates: ಒಡಿಶಾದಲ್ಲಿ ಇಂದಿನಿಂದ 1 ವಾರ ಭಾರೀ ಮಳೆ; ಮಹಾರಾಷ್ಟ್ರದಲ್ಲಿ ರೈಲ್ವೆ ಹಳಿಗಳು ಮುಳುಗಡೆ

ಇಂದಿನಿಂದ ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಳೆ (ಸೆ. 20ರಂದು) ಛತ್ತೀಸ್‌ಗಢ, ಜಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತೆಲಂಗಾಣ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಪೂರ್ವ ರಾಜ್ಯಗಳು ಇಡೀ ಅಕ್ಟೋಬರ್‌ನಲ್ಲಿ ಮುಂದುವರಿಯುವ ಹಬ್ಬಗಳ ಸಾಲಿಗೆ ಸಜ್ಜಾಗುತ್ತಿರುವಾಗ ಮುನ್ಸೂಚನೆ ಬಂದಿದೆ. ಒಡಿಶಾ, ಕರಾವಳಿ ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 21ರವರೆಗೆ ವಿದರ್ಭ ಮತ್ತು ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 20ರಿಂದ 22ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 22 ಮತ್ತು 23ರಂದು ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ, ಮರಾಠವಾಡ, ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ