AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಭಾರೀ ಬಿರುಗಾಳಿ, ಧರೆಗುರುಳಿದ 300ಕ್ಕೂ ಹೆಚ್ಚು ಮರಗಳು, ಇಬ್ಬರ ಸಾವು

ಗಂಟೆಗೆ 100 ಕಿಮೀಗಿಂತಲೂ ಹೆಚ್ಚು ವೇಗದಲ್ಲಿ ಗಾಳಿ ಬೀಸಿದೆ. ಹಲವು ಮರಗಳು ಬುಡಸಹಿತ ಉರುಳಿಬಿದ್ದಿದ್ದು, ಟ್ರಾಫಿಕ್ ಅಸ್ತವ್ಯಸ್ತಗೊಂಡಿತ್ತು.

ದೆಹಲಿಯಲ್ಲಿ ಭಾರೀ ಬಿರುಗಾಳಿ, ಧರೆಗುರುಳಿದ 300ಕ್ಕೂ ಹೆಚ್ಚು ಮರಗಳು, ಇಬ್ಬರ ಸಾವು
ಮಳೆ (ಸಂಗ್ರಹ ಚಿತ್ರ)
TV9 Web
| Edited By: |

Updated on:May 31, 2022 | 7:07 AM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ (ಮೇ 30) ಭಾರೀ ಬಿರುಗಾಳಿಯೊಂದಿಗೆ ಹಠಾತ್ ಮಳೆ (Thunderstorm) ಸುರಿದಿದ್ದು ಜನಜೀವನ ಅಸ್ತವ್ಯವಸ್ತವಾಯಿತು. ಗಂಟೆಗೆ 100 ಕಿಮೀಗಿಂತಲೂ ಹೆಚ್ಚು ವೇಗದಲ್ಲಿ ಗಾಳಿ ಬೀಸಿದೆ. ಹಲವು ಮರಗಳು ಬುಡಸಹಿತ ಉರುಳಿಬಿದ್ದಿದ್ದು, ಟ್ರಾಫಿಕ್ ಅಸ್ತವ್ಯಸ್ತಗೊಂಡಿತ್ತು. ಬಿರುಗಾಳಿ ಮತ್ತು ಮಳೆಯಿಂದಾಗಿ ಕೆಲ ಪ್ರದೇಶಗಳಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಟ್ರಾಫಿಕ್ ಜಾಮ್​ ಉಂಟಾಗಿತ್ತು. ಕೆಟ್ಟು ಹೋದ ವಾಹನಗಳನ್ನು ರಸ್ತೆಗಳಲ್ಲಿಯೇ ಬಿಟ್ಟು, ಜನರು ಮನೆಗಳಿಗೆ ನಡೆದು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಕೇಂದ್ರ ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿ ನೆರೆಮನೆಯ ಬಾಲ್ಕನಿ ಕುಸಿದ ಕಾರಣ 50 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಪ್ರಬಲ ಗಾಳಿಯಿಂದ ನಗರದಲ್ಲಿ ಹಲವು ಕಟ್ಟಡಗಳಿಗೂ ಧಕ್ಕೆಯಾಗಿದೆ. ಉತ್ತರ ದೆಹಲಿಯ ಅಂಗೂರಿ ಬಾಗ್ ಪ್ರದೇಶದಲ್ಲಿ 65 ವರ್ಷದ ಮನೆ ರಹಿತ ವ್ಯಕ್ತಿ, ಬಸೀರ್ ಬಾಬಾ ಮರದ ಕೊಂಬೆಯೊಂದು ಮೈಮೇಲೆ ಬಿದ್ದ ಕಾರಣ ಮೃತಪಟ್ಟಿದ್ದಾನೆ.

2018ರ ನಂತರ ಇಷ್ಟು ಪ್ರಬಲವಾದ ಬಿರುಗಾಳಿ ದೆಹಲಿಯ ಮೇಲೆ ಬೀಸಿದ್ದು ಇದೇ ಮೊದಲು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಸೋಮವಾರವೂ ರಾಷ್ಟ್ರ ರಾಜಧಾನಿಗೆ ಬಿರುಗಾಳಿ ಸಹಿತ ಭಾರೀ ಮಳೆ ಅಪ್ಪಳಿಸಿತ್ತು.

ಮಳೆಯಿಂದಾಗಿ ನಗರದ ಉಷ್ಣಾಂಶ 13ರಿಂದ 16 ಡಿಗ್ರಿಗಳಷ್ಟು ಕಡಿಮೆಯಾಗಿದೆ. ನಗರದ ಫಿರೊಝೆಶಾ ರಸ್ತೆ, ಟೊಲ್​ಸ್ಟಾಯ್ ಮಾರ್ಗ್, ಕೊಪರ್​ನಿಕಸ್ ರಸ್ತೆ, ಕೆಜಿ ಮಾರ್ಗ್, ಪಂಡಿತ್ ರವಿ ಶಂಕರ್ ಶುಕ್ಲ ಲೇನ್ ರಸ್ತೆಗಳಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಮೇಲೆ ನೀರು ನಿಂತಿತ್ತು. ವಾಹನ ಸಂಚಾರ ಸ್ಥಗಿತಗೊಂಡಿತ್ತು.

ದೆಹಲಿಯ ಪೂರ್ವ ಮತ್ತು ಮಧ್ಯ ಭಾಗದಲ್ಲಿ ಮಳೆಯಿಂದ ಹೆಚ್ಚಿನ ಅನಾಹುತ ಸಂಭವಿಸಿದೆ. ನಾಗರಿಕ ಸೇವಾ ಪ್ರಾಧಿಕಾರಗಳಿಗೆ ಮರ ಉರುಳಿರುವ ಬಗ್ಗೆ 300ಕ್ಕೂ ಹೆಚ್ಚು ಕರೆಗಳು ಬಂದಿವೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:05 am, Tue, 31 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ