AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಲುಕಿಕೊಂಡಿದ್ದಾರೆ. ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದೆ. ಉಳಿದವರನ್ನು ರಕ್ಷಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ.

ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು
ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ
ಸುಷ್ಮಾ ಚಕ್ರೆ
|

Updated on: Jul 05, 2024 | 10:18 PM

Share

ಗಂಗೋತ್ರಿ: ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರಾಖಂಡದ ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದ್ದು, ಉಳಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

ಕಾಲುದಾರಿಯಲ್ಲಿ ಗಂಗೋತ್ರಿಯಿಂದ ಸರಿಸುಮಾರು 8-9 ಕಿಮೀ ಮುಂದೆ ತಾತ್ಕಾಲಿಕ ಸೇತುವೆ ಕುಸಿದು 30-40 ಯಾತ್ರಿಕರು ಸಿಲುಕಿಕೊಂಡಿದ್ದರು. ಇಂದು ದೇವಗಡದಲ್ಲಿ ಹಠಾತ್ ನದಿ ನೀರಿನ ಹರಿವಿನಿಂದ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: Assam Flood: ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ವ್ಯಕ್ತಿ

ಈ ಬಗ್ಗೆ ಮಾಹಿತಿ ಪಡೆದ ನಂತರ, ಎಸ್‌ಡಿಆರ್‌ಎಫ್ ತಂಡವು ತಕ್ಷಣವೇ ಸ್ಥಳಕ್ಕೆ ತಲುಪಿತು. ಸಿಕ್ಕಿಬಿದ್ದ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ನದಿ ದಾಟಲು ಸಹಾಯ ಮಾಡಿತು. ಇದುವರೆಗೆ 16 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದ್ದು, ಇತರರ ರಕ್ಷಣೆಗಾಗಿ ಪ್ರಯತ್ನ ಮುಂದುವರಿದಿದೆ.

ಎಸ್‌ಡಿಆರ್‌ಎಫ್ ಈ ಹಿಂದೆ ಡೆಹ್ರಾಡೂನ್‌ನ ರಾಬರ್ಸ್ ಗುಹೆ (ಗುಚುಪಾನಿ) ಬಳಿಯ ದ್ವೀಪದಲ್ಲಿ ಸಿಲುಕಿದ್ದ 10 ಯುವಕರನ್ನು ಗುರುವಾರ ರಕ್ಷಿಸಿತ್ತು. ಹರಿದ್ವಾರದಲ್ಲಿ ಇತ್ತೀಚಿನ ಭಾರೀ ಮಳೆಯಿಂದಾಗಿ ಭಾರೀ ಪ್ರವಾಹ ಉಂಟಾಗಿದೆ. ಗಂಗಾ ನದಿಯ ಮಟ್ಟವು ಏರುತ್ತಿದೆ, ರಸ್ತೆಗಳು ಮತ್ತು ವಾಹನಗಳು ಮುಳುಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ