AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಲುಕಿಕೊಂಡಿದ್ದಾರೆ. ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದೆ. ಉಳಿದವರನ್ನು ರಕ್ಷಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ.

ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ; ಕೊಚ್ಚಿ ಹೋದ ಇಬ್ಬರು ಯಾತ್ರಾರ್ಥಿಗಳು
ಉತ್ತರಾಖಂಡದಲ್ಲಿ ತಾತ್ಕಾಲಿಕ ಸೇತುವೆ ಕುಸಿತ
ಸುಷ್ಮಾ ಚಕ್ರೆ
|

Updated on: Jul 05, 2024 | 10:18 PM

Share

ಗಂಗೋತ್ರಿ: ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರಾಖಂಡದ ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದ್ದು, ಉಳಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

ಕಾಲುದಾರಿಯಲ್ಲಿ ಗಂಗೋತ್ರಿಯಿಂದ ಸರಿಸುಮಾರು 8-9 ಕಿಮೀ ಮುಂದೆ ತಾತ್ಕಾಲಿಕ ಸೇತುವೆ ಕುಸಿದು 30-40 ಯಾತ್ರಿಕರು ಸಿಲುಕಿಕೊಂಡಿದ್ದರು. ಇಂದು ದೇವಗಡದಲ್ಲಿ ಹಠಾತ್ ನದಿ ನೀರಿನ ಹರಿವಿನಿಂದ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: Assam Flood: ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ವ್ಯಕ್ತಿ

ಈ ಬಗ್ಗೆ ಮಾಹಿತಿ ಪಡೆದ ನಂತರ, ಎಸ್‌ಡಿಆರ್‌ಎಫ್ ತಂಡವು ತಕ್ಷಣವೇ ಸ್ಥಳಕ್ಕೆ ತಲುಪಿತು. ಸಿಕ್ಕಿಬಿದ್ದ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ನದಿ ದಾಟಲು ಸಹಾಯ ಮಾಡಿತು. ಇದುವರೆಗೆ 16 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದ್ದು, ಇತರರ ರಕ್ಷಣೆಗಾಗಿ ಪ್ರಯತ್ನ ಮುಂದುವರಿದಿದೆ.

ಎಸ್‌ಡಿಆರ್‌ಎಫ್ ಈ ಹಿಂದೆ ಡೆಹ್ರಾಡೂನ್‌ನ ರಾಬರ್ಸ್ ಗುಹೆ (ಗುಚುಪಾನಿ) ಬಳಿಯ ದ್ವೀಪದಲ್ಲಿ ಸಿಲುಕಿದ್ದ 10 ಯುವಕರನ್ನು ಗುರುವಾರ ರಕ್ಷಿಸಿತ್ತು. ಹರಿದ್ವಾರದಲ್ಲಿ ಇತ್ತೀಚಿನ ಭಾರೀ ಮಳೆಯಿಂದಾಗಿ ಭಾರೀ ಪ್ರವಾಹ ಉಂಟಾಗಿದೆ. ಗಂಗಾ ನದಿಯ ಮಟ್ಟವು ಏರುತ್ತಿದೆ, ರಸ್ತೆಗಳು ಮತ್ತು ವಾಹನಗಳು ಮುಳುಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ