Diarrhoea: ಮಧ್ಯಪ್ರದೇಶದ ಮೂರು ಜಿಲ್ಲೆಗಳಲ್ಲಿ ಅತಿಸಾರದಿಂದ ಸಾವಿಗೀಡಾಗಿದ್ದು 17 ಮಂದಿ

ಮಂಡ್ಲಾದಲ್ಲಿ ಸುಮಾರು 180 ಅತಿಸಾರ ಪ್ರಕರಣಗಳು ವರದಿಯಾಗಿದ್ದು, ಜಬಲ್‌ಪುರವು ಕುಂಡಮ್, ಸಿಹೋರಾ ಮತ್ತು ಪಟಾನ್ ಬ್ಲಾಕ್‌ಗಳಲ್ಲಿ 150 ಪ್ರಕರಣಗಳನ್ನು ದಾಖಲಿಸಿದೆ ಎಂದು ಅವರು ಹೇಳಿದರು.  ಅವರ ಪ್ರಕಾರ, ರೋಗಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.ಕೆಲವು ಸ್ಥಳಗಳಲ್ಲಿ ನೀರು ಕಲುಷಿತಗೊಂಡಿರುವುದು ಕಂಡುಬಂದಿದೆ.

Diarrhoea: ಮಧ್ಯಪ್ರದೇಶದ ಮೂರು ಜಿಲ್ಲೆಗಳಲ್ಲಿ ಅತಿಸಾರದಿಂದ ಸಾವಿಗೀಡಾಗಿದ್ದು 17 ಮಂದಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ

Updated on: Aug 01, 2024 | 4:54 PM

ಜಬಲ್‌ಪುರ ಆಗಸ್ಟ್ 01: ಮಧ್ಯಪ್ರದೇಶದ (Madhya pradesh) ಜಬಲ್‌ಪುರ ವಿಭಾಗದ ಮೂರು ಜಿಲ್ಲೆಗಳಲ್ಲಿ ಇದುವರೆಗೆ 17 ಮಂದಿ ಅತಿಸಾರದಿಂದ (Diarrhoea )ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಈ 17 ಸಾವುನೋವುಗಳಲ್ಲಿ, ಜಬಲ್ಪುರ ಮತ್ತು ಮಾಂಡ್ಲಾ ಜಿಲ್ಲೆಗಳಲ್ಲಿ ತಲಾ ಆರು, ದಿಂಡೋರಿ ಜಿಲ್ಲೆಯಲ್ಲಿ ಐದು ವರದಿಯಾಗಿದೆ. ಒಟ್ಟು 800 ಜನರು ಅತಿಸಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯ ಸೇವೆಗಳ ಪ್ರಾದೇಶಿಕ ನಿರ್ದೇಶಕ ಸಂಜಯ್ ಡಿ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.  ಈ ಸಾವುಗಳು ಒಂದೂವರೆ ತಿಂಗಳಲ್ಲಿ ಸಂಭವಿಸಿವೆ ಎಂದು ಅವರು ಹೇಳಿದರು.

ದಿಂಡೋರಿ ಜಿಲ್ಲೆಯಲ್ಲಿ ಅತಿ ಹೆಚ್ಚು 350 ಅತಿಸಾರ ರೋಗಿಗಳು ಕಂಡುಬಂದಿದ್ದು, ಅವರಲ್ಲಿ ಐವರು ಸಾವಿಗೀಡಾಗಿದ್ದಾರೆ ಎಂದು ಮಿಶ್ರಾ ಹೇಳಿದರು.

ಮಂಡ್ಲಾದಲ್ಲಿ ಸುಮಾರು 180 ಅತಿಸಾರ ಪ್ರಕರಣಗಳು ವರದಿಯಾಗಿದ್ದು, ಜಬಲ್‌ಪುರವು ಕುಂಡಮ್, ಸಿಹೋರಾ ಮತ್ತು ಪಟಾನ್ ಬ್ಲಾಕ್‌ಗಳಲ್ಲಿ 150 ಪ್ರಕರಣಗಳನ್ನು ದಾಖಲಿಸಿದೆ ಎಂದು ಅವರು ಹೇಳಿದರು.  ಅವರ ಪ್ರಕಾರ, ರೋಗಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.ಕೆಲವು ಸ್ಥಳಗಳಲ್ಲಿ ನೀರು ಕಲುಷಿತಗೊಂಡಿರುವುದು ಕಂಡುಬಂದಿದೆ.

ನೀರನ್ನು ಕುದಿಸಿದ ನಂತರ ಕುಡಿಯಬೇಕು. ಆಹಾರವನ್ನು ಮುಚ್ಚಿಡಬೇಕು. ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಇಲ್ಲಿನ ಜನರಿಗೆ ಸೂಚನೆ ನೀಡಲಾಗಿದೆ. ಸಂತ್ರಸ್ತ ಪ್ರದೇಶಗಳಲ್ಲಿ ಬೋರ್ ವೆಲ್ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ಪೀಡಿತ ಪ್ರದೇಶಗಳಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಮತ್ತು ಔಷಧಿಗಳನ್ನು ಸಹ ಒದಗಿಸಲಾಗುತ್ತಿದೆ ಎಂದು ಮಿಶ್ರಾ ಹೇಳಿದರು.

ಸಂತ್ರಸ್ತರನ್ನು ಚಿಕಿತ್ಸೆಗಾಗಿ ತಡವಾಗಿ ಆಸ್ಪತ್ರೆಗೆ ಕರೆತರಲಾಗುತ್ತಿದ್ದು, ಇದರಿಂದ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು.
ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ರೋಗಿಗಳಿಗೆ ಮತ್ತು ಇತರ ನಾಗರಿಕರಿಗೆ ಸಲಹೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ಛತ್ತೀಸಗಢದಲ್ಲೂ ಮಲೇರಿಯಾ, ಅತಿಸಾರ ಪ್ರಕರಣ ವರದಿ

ರಾಯ್‌ಪುರ: ಬಿಲಾಸ್‌ಪುರ ಜಿಲ್ಲೆಯ ಕೋಟಾ ಪ್ರದೇಶದಲ್ಲಿ ಪ್ರಸ್ತುತ ಮಲೇರಿಯಾ ಮತ್ತು ಅತಿಸಾರ ಎರಡೂ ಪ್ರಕರಣಗಳು ಹೆಚ್ಚಾಗುತ್ತಿವೆ. ಬುಧವಾರ, ಆರೋಗ್ಯ ಅಧಿಕಾರಿಗಳು ಮಲೇರಿಯಾದ ಹೊಸ ಪ್ರಕರಣಗಳು ಮತ್ತು 16 ಅತಿಸಾರ ಪ್ರಕರಣಗಳನ್ನು ವರದಿ ಮಾಡಿದ್ದಾರೆ. ಈ ಪರಿಸ್ಥಿತಿಯು ನಿವಾಸಿಗಳು ಮತ್ತು ಆರೋಗ್ಯ ಅಧಿಕಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.  ಕೋಟಾದ 54 ಅರಣ್ಯ ಗ್ರಾಮಗಳು ಮಲೇರಿಯಾಕ್ಕೆ ಹೆಚ್ಚು ಗುರಿಯಾಗುತ್ತವೆ. ನಾಲ್ವರು ಮಲೇರಿಯಾ ರೋಗಿಗಳ ಸಾವಿನ ನಂತರ ಆರೋಗ್ಯ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದರೂ, ರೋಗವು ಅನಿಯಂತ್ರಿತವಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡಿನಲ್ಲಿ ಭೂಕುಸಿತವಾದ ಸ್ಥಳಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ಕಳೆದ ವಾರದಲ್ಲಿ, 98 ಮಲೇರಿಯಾ ಪಾಸಿಟಿವ್ ಪ್ರಕರಣಗಳನ್ನು ಗುರುತಿಸಲಾಗಿದ್ದು, ಸಂಖ್ಯೆಗಳು ಸ್ಥಿರವಾಗಿ ಹೆಚ್ಚುತ್ತಿವೆ.  ಏತನ್ಮಧ್ಯೆ, ಕೋಟಾ ಪ್ರದೇಶದಲ್ಲಿ ಅತಿಸಾರವೂ ಹರಡುತ್ತಿದ್ದು, ಪ್ರತಿದಿನ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಕೆಂಡಾ, ಶಿವತರೈ, ಬೆಲ್ಗಾಹ್ನಾ, ಚಪೋರಾ ಮತ್ತು ಫುಲ್ವಾರಿಪಾರಾ ಮುಂತಾದ ಪ್ರದೇಶಗಳು ತೀವ್ರವಾಗಿ ಬಾಧಿತವಾಗಿದ್ದು, ಮಲೇರಿಯಾ ವೇಗವಾಗಿ ಹರಡುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us