AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್‌ ಹಬ್ಬದಂದು ‘ಮಹಾ ಆರತಿ’ ಬೇಡ ಎಂದ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ

ಇದು ಧಾರ್ಮಿಕ ವಿಚಾರವಲ್ಲ. ಇದು ರಾಷ್ಟ್ರೀಯ ವಿಚಾರ. ಆದರೆ ನೀವು ನಮ್ಮನ್ನು ತಡೆದರೆ ನಾವೂ ನಿಲುವು ತಳೆಯುತ್ತೇವೆ. ಎಲ್ಲಾ ಧ್ವನಿವರ್ಧಕಗಳು ಕಾನೂನಿನಡಿಯಲ್ಲಿಲ್ಲ ಮತ್ತು ಇದು ಕಾನೂನುಬಾಹಿರವಾಗಿದೆ. ಇದು ಅಕ್ರಮ ಎಂದು ಸುಪ್ರೀಂಕೋರ್ಟ್ ಈಗಾಗಲೇ ಹೇಳಿದೆ

ಈದ್‌ ಹಬ್ಬದಂದು ‘ಮಹಾ ಆರತಿ’ ಬೇಡ ಎಂದ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ
ರಾಜ್ ಠಾಕ್ರೆ
TV9 Web
| Edited By: |

Updated on:May 02, 2022 | 5:54 PM

Share

ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ (Raj Thackeray)ಅವರು  ಮೇ 3 ರಂದು ಅಕ್ಷಯ ತೃತೀಯ ಪ್ರಯುಕ್ತ  ಘೋಷಿಸಲಾದ ‘ಮಹಾ ಆರತಿ’ ಬೇಡ ಎಂದು ಸೋಮವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಮೇ 3ರಂದು ಈದ್ ಹಬ್ಬವಾಗಿದ್ದು(Eid) ಈ ಸಮಯದಲ್ಲಿ ಮುಸ್ಲಿಮರಿಗೆ ಯಾವುದೇ ಅಡಚಣೆಯನ್ನು ಸೃಷ್ಟಿಸಲು ನಾವು ಬಯಸುವುದಿಲ್ಲ ಎಂದಿದ್ದಾರೆ ಠಾಕ್ರೆ. ಧ್ವನಿವರ್ಧಕಗಳ ವಿರುದ್ಧದ ತಮ್ಮ ಅಭಿಯಾನ ಸಾಮಾಜಿಕ ಸಮಸ್ಯೆಯಾಗಿದೆ ಎಂದು ಪುನರುಚ್ಚರಿಸಿದ ಅವರು ಮಂಗಳವಾರ ಟ್ವಿಟರ್ ಮೂಲಕ ತಮ್ಮ ಭವಿಷ್ಯದ ಯೋಜನೆಗಳನ್ನು ಬಹಿರಂಗಪಡಿಸಲಿದ್ದಾರೆ. ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಕುರಿತು ನಡೆಯುತ್ತಿರುವ ರಾಜಕೀಯ ಗದ್ದಲದ ನಡುವೆ ಭಾನುವಾರ ಎಚ್ಚರಿಕೆ ನೀಡಿದ ಠಾಕ್ರೆ, ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ ಮೇ4ರಿಂದ ಆಜಾನ್‌ ದನಿಗಿಂತ ಡಬಲ್ ವಾಲ್ಯೂಮ್‌ನಲ್ಲಿ ಹನುಮಾನ್ ಚಾಲೀಸಾವನ್ನು ನುಡಿಸಲಾಗುವುದು ಎಂದು ಹೇಳಿದ್ದರು. ಅದೇ ವೇಳೆ ಎಂಎನ್ಎಸ್ ಮುಖ್ಯಸ್ಥರು ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು “ಸಾಮಾಜಿಕ ಸಮಸ್ಯೆ ಅದು ಮತ್ತು ಧಾರ್ಮಿಕ ವಿಷಯವಲ್ಲ” ಎಂದು ಹೇಳಿಗದ್ದಾರೆ. ಧ್ವನಿವರ್ಧಕಗಳನ್ನು ತೆಗೆದುಹಾಕಲು ಮೇ 3 ರ ಗಡುವಿನ ಮೇಲೆ ತಾವು ಅಚಲರಾಗಿದ್ದೇವೆ ಎಂದಿದ್ದಾರೆ.

ಧ್ವನಿವರ್ಧಕವು ಧಾರ್ಮಿಕ ವಿಷಯವಲ್ಲ ಆದರೆ ಇದು ರಾಷ್ಟ್ರೀಯ ಸಮಸ್ಯೆಯಾಗಿದೆ ಎಂದು ಹೇಳಿದ ಠಾಕ್ರೆ ಅವರು ನಿಲ್ಲಿಸದಿದ್ದರೆ ನಾವು ಸಹ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಇದು ಧಾರ್ಮಿಕ ವಿಚಾರವಲ್ಲ. ಇದು ರಾಷ್ಟ್ರೀಯ ವಿಚಾರ. ಆದರೆ ನೀವು ನಮ್ಮನ್ನು ತಡೆದರೆ ನಾವೂ ನಿಲುವು ತಳೆಯುತ್ತೇವೆ. ಎಲ್ಲಾ ಧ್ವನಿವರ್ಧಕಗಳು ಕಾನೂನಿನಡಿಯಲ್ಲಿಲ್ಲ ಮತ್ತು ಇದು ಕಾನೂನುಬಾಹಿರವಾಗಿದೆ. ಇದು ಅಕ್ರಮ ಎಂದು ಸುಪ್ರೀಂಕೋರ್ಟ್ ಈಗಾಗಲೇ ಹೇಳಿದೆ. ಇದು ಸಂಭಾಜಿನಗರ (ಔರಂಗಾಬಾದ್) ವಿಷಯವಲ್ಲ. ನಾವು ಸಭೆ ನಡೆಸುವಾಗ ಅದು ಶಿಕ್ಷಣ ವಲಯ, ದೇವಸ್ಥಾನದ ವಲಯ ಎಂದು ಹೇಳುತ್ತಾರೆ, ನೀವು ಸಭೆ ನಡೆಸಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ. ನಿಮಗೆ ಹಕ್ಕು ಕೊಟ್ಟವರು ಯಾರು?” ಎಂದು ಎಂಎನ್‌ಎಸ್ ಮುಖ್ಯಸ್ಥರು ಪ್ರಶ್ನಿಸಿದರು.

ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದ ಮುಂಬೈ ಮೇಯರ್

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಧ್ವನಿವರ್ಧಕ ತೆಗೆದುಹಾಕುವ ಅಂತಿಮ ಗಡುವಿಗೆ  ಪ್ರತಿಕ್ರಿಯಿಸಿದ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್, ಶಬ್ದ ಮಾಲಿನ್ಯ ನಿಯಮಗಳಿಗೆ ಅನುಸಾರವಾಗಿ ಧ್ವನಿವರ್ಧಕಗಳನ್ನು ಬಳಸಬೇಕು. ಯಾರಾದರೂ ನಿಗದಿತ ಡೆಸಿಬಲ್ ಮಿತಿಯನ್ನು ಉಲ್ಲಂಘಿಸಿದರೆ ಅವುಗಳನ್ನು ತೆಗೆದುಹಾಕಬೇಕು ಎಂದು ಸೋಮವಾರ ಹೇಳಿದ್ದಾರೆ. ಆದಾಗ್ಯೂ, ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಅವರು ಮಹಾರಾಷ್ಟ್ರ ನವನಿರ್ಮಾಣ್ ಸೇನಾ (ಎಂಎನ್‌ಎಸ್) ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು. ಹಾಗೇನಾದರೂ ಆದರೆ ಇಡೀ ಜೀವನ ನ್ಯಾಯಾಲಯದಲ್ಲಿ ಅಲೆಯುವುದರಲ್ಲಿ ವ್ಯರ್ಥವಾಗುತ್ತದೆ ಎಂದಿದ್ದಾರೆ ಪೆಡ್ನೇಕರ್.

ಮುಸ್ಲಿಮರು ಸೇರಿದಂತೆ ಯಾರೂ ಹನುಮಾನ್ ಚಾಲೀಸಾವನ್ನು ವಿರೋಧಿಸಿಲ್ಲ. ಮಂದಿರ, ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆಯಲಾಗುವುದು. ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ .ಕಾನೂನು ಎಲ್ಲರಿಗೂ ಸಮಾನ. ರಾಜ್ ಠಾಕ್ರೆ ತಮ್ಮ ಭಾಷಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೆ ಕ್ರಮ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು” ಎಂದು ಪೆಡ್ನೇಕರ್ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾನುವಾರ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲು ಮೇ 3 ರ ಗಡುವಿನಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದಿದ್ದರು.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮುಖ್ಯಸ್ಥರು ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಠಾಕ್ರೆ   ಅವರಿಗೆ ‘ಹಿಂದೂ’ ಪದದ ಬಗ್ಗೆ ಅಲರ್ಜಿ ಇದೆ ಎಂದು ಹೇಳಿದರು. ಉತ್ತರ ಪ್ರದೇಶ ಸರ್ಕಾರವು ಧ್ವನಿವರ್ಧಕಗಳನ್ನು ತೆಗೆದುಹಾಕುತ್ತದೆ. ಆದರೆ ನಮ್ಮ  ಸಂಬಂಧಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಹಾಗೆ ಮಾಡುವುದನ್ನು ತಡೆಯುತ್ತದೆ ಎಂದು ಎಂಎನ್ಎಸ್ ಮುಖ್ಯಸ್ಥರು ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:44 pm, Mon, 2 May 22

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್