AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ತಾಮ್ರದ ಗಣಿ ಪರಿಶೀಲನೆಗೆ ಹೋಗಿ 1,800 ಅಡಿ ಆಳದಲ್ಲಿ ಸಿಕ್ಕಿಬಿದ್ದ 14 ಅಧಿಕಾರಿಗಳು

ತಾಮ್ರದ ಕಣಿ ಪರಿಶೀಲನೆಗೆ ಹೋದ ಅಧಿಕಾರಿಗಳು 1,800 ಅಡಿ ಆಳದಲ್ಲಿ ಸಿಲಿಕಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಲಿಫ್ಟ್​ನ ಹಗ್ಗ ತುಂಡಾದ ಪರಿಣಾಮ 14 ಅಧಿಕಾರಿಗಳು ಸುಮಾರು 12 ಗಂಟೆಗಳ ಕಾಲ ಸಿಲುಕಿದ್ದರು.

ರಾಜಸ್ಥಾನ: ತಾಮ್ರದ ಗಣಿ ಪರಿಶೀಲನೆಗೆ ಹೋಗಿ 1,800 ಅಡಿ ಆಳದಲ್ಲಿ ಸಿಕ್ಕಿಬಿದ್ದ 14 ಅಧಿಕಾರಿಗಳು
ಲಿಫ್ಟ್​
ನಯನಾ ರಾಜೀವ್
|

Updated on:May 15, 2024 | 8:11 AM

Share

ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಭಾರಿ ಅಪಘಾತ ಸಂಭವಿಸಿದೆ. ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ ಅಧಿಕಾರಿಗಳು ಗಣಿಯ ಆಳದಲ್ಲಿ ಬರೋಬ್ಬರಿ 12 ತಾಸುಗಳನ್ನು ಜೀವ ಬಿಗಿ ಹಿಡಿದುಕೊಂಡು ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ಪ್ರಕಾರ 1875 ಅಡಿ ಆಳದಲ್ಲಿ ಲಿಫ್ಟ್ ಚೈನ್ ತುಂಡಾಗಿದೆ. ಬರೋಬ್ಬರಿ 12 ಗಂಟೆಗಳ ಬಳಿಕ ಅಧಿಕಾರಿಗಳನ್ನು ರಕ್ಷಿಸಲಾಯಿತು.

ಗಣಿಯಲ್ಲಿ ಸಿಕ್ಕಿಬಿದ್ದಿರುವ ಅಧಿಕಾರಿಗಳಿಗೆ ಔಷಧಿಗಳು ಮತ್ತು ಆಹಾರದ ಪ್ಯಾಕೆಟ್‌ಗಳನ್ನು ಆಡಳಿತವು ಕಳುಹಿಸಿತ್ತು. ಆಂಬ್ಯುಲೆನ್ಸ್ ಮತ್ತು ವೈದ್ಯರ ತಂಡವನ್ನು ಸಹ ಅಲ್ಲಿ ನಿಯೋಜಿಸಲಾಗಿತ್ತು. ಮಾಹಿತಿ ಪ್ರಕಾರ, ಮೇ 13 ರಿಂದ ಈ ಗಣಿಯಲ್ಲಿ ತಪಾಸಣೆ ಕಾರ್ಯ ನಡೆಯುತ್ತಿತ್ತು. ಈ ಅನುಕ್ರಮದಲ್ಲಿ ಮೇ 14ರ ಸಂಜೆ ಮುಖ್ಯ ವಿಜಿಲೆನ್ಸ್ ಸೇರಿದಂತೆ ಹಲವು ಅಧಿಕಾರಿಗಳು ಗಣಿಗಾರಿಕೆಗೆ ತೆರಳಿ ಪರಿಶೀಲನೆ ನಡೆಸಿದ್ದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ಖೇತ್ರಿ ಶಾಸಕ ಧರಂಪಾಲ್ ಗುರ್ಜರ್ ಕೂಡ ಸ್ಥಳಕ್ಕೆ ಧಾವಿಸಿದರು.ಚುನಾವಣಾ ಪ್ರಚಾರಕ್ಕಾಗಿ ಹರ್ಯಾಣಕ್ಕೆ ತೆರಳಿದ್ದೆ ಆದರೆ ಗಣಿ ಅಪಘಾತದ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಆಗಮಿಸಿರುವುದಾಗಿ ಅವರು ಎಎನ್‌ಐಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಟ್ಟಿ ಚಿನ್ನದ ಗಣಿ ಉದ್ಯೋಗ ನೇಮಕಾತಿಯಲ್ಲಿ ಅಕ್ರಮ: ಬರೆದದ್ದು ಒಂದು ಪರೀಕ್ಷೆ, ಪ್ರಕಟಿಸಿದ್ದು ಎರಡೆರಡು ಫಲಿತಾಂಶ

ಅಧಿಕಾರಿಗಳೊಂದಿಗೆ ಪತ್ರಕರ್ತ ವಿಕಾಸ್ ಶರ್ಮಾ ಕೂಡ ಒಳಗೆ ಸಿಕ್ಕಿಬಿದ್ದಿದ್ದರು. ಮುಖ್ಯ ವಿಜಿಲೆನ್ಸ್ ಅಧಿಕಾರಿ ಉಪೇಂದ್ರ ಪಾಂಡೆ, ಗಣಿ ಉಪ ಪ್ರಧಾನ ವ್ಯವಸ್ಥಾಪಕ ಎಕೆ ಶರ್ಮಾ, ವಿನೋದ್ ಸಿಂಗ್ ಶೇಖಾವತ್, ಎಕೆ ಬೈರಾ, ಅರ್ನವ್ ಭಂಡಾರಿ, ಯಶೋರಾಜ್ ಮೀನಾ, ವನೇಂದ್ರ ಭಂಡಾರಿ, ನಿರಂಜನ್ ಸಾಹು, ಕರಣ್ ಸಿಂಗ್ ಗೆಹ್ಲೋಟ್, ಪ್ರೀತಮ್ ಸಿಂಗ್, ಹರ್ಸಿರಾಮ್ ಮತ್ತು ಭಗೀರಥ ಅವರು ಒಳಗೆ ಇದ್ದರು.

ಗಣಿಯಿಂದ ಸುರಕ್ಷಿತವಾಗಿ ಹೊರತೆಗೆದ ಬಳಿಕ ಎಲ್ಲಾ ಅಧಿಕಾರಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು 1,800 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು.ಲಿಫ್ಟ್​ನ ಹಗ್ಗ ತುಂಡಾಗಿ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Wed, 15 May 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!