AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ತಾಮ್ರದ ಗಣಿ ಪರಿಶೀಲನೆಗೆ ಹೋಗಿ 1,800 ಅಡಿ ಆಳದಲ್ಲಿ ಸಿಕ್ಕಿಬಿದ್ದ 14 ಅಧಿಕಾರಿಗಳು

ತಾಮ್ರದ ಕಣಿ ಪರಿಶೀಲನೆಗೆ ಹೋದ ಅಧಿಕಾರಿಗಳು 1,800 ಅಡಿ ಆಳದಲ್ಲಿ ಸಿಲಿಕಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಲಿಫ್ಟ್​ನ ಹಗ್ಗ ತುಂಡಾದ ಪರಿಣಾಮ 14 ಅಧಿಕಾರಿಗಳು ಸುಮಾರು 12 ಗಂಟೆಗಳ ಕಾಲ ಸಿಲುಕಿದ್ದರು.

ರಾಜಸ್ಥಾನ: ತಾಮ್ರದ ಗಣಿ ಪರಿಶೀಲನೆಗೆ ಹೋಗಿ 1,800 ಅಡಿ ಆಳದಲ್ಲಿ ಸಿಕ್ಕಿಬಿದ್ದ 14 ಅಧಿಕಾರಿಗಳು
ಲಿಫ್ಟ್​
ನಯನಾ ರಾಜೀವ್
|

Updated on:May 15, 2024 | 8:11 AM

Share

ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಭಾರಿ ಅಪಘಾತ ಸಂಭವಿಸಿದೆ. ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ ಅಧಿಕಾರಿಗಳು ಗಣಿಯ ಆಳದಲ್ಲಿ ಬರೋಬ್ಬರಿ 12 ತಾಸುಗಳನ್ನು ಜೀವ ಬಿಗಿ ಹಿಡಿದುಕೊಂಡು ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ಪ್ರಕಾರ 1875 ಅಡಿ ಆಳದಲ್ಲಿ ಲಿಫ್ಟ್ ಚೈನ್ ತುಂಡಾಗಿದೆ. ಬರೋಬ್ಬರಿ 12 ಗಂಟೆಗಳ ಬಳಿಕ ಅಧಿಕಾರಿಗಳನ್ನು ರಕ್ಷಿಸಲಾಯಿತು.

ಗಣಿಯಲ್ಲಿ ಸಿಕ್ಕಿಬಿದ್ದಿರುವ ಅಧಿಕಾರಿಗಳಿಗೆ ಔಷಧಿಗಳು ಮತ್ತು ಆಹಾರದ ಪ್ಯಾಕೆಟ್‌ಗಳನ್ನು ಆಡಳಿತವು ಕಳುಹಿಸಿತ್ತು. ಆಂಬ್ಯುಲೆನ್ಸ್ ಮತ್ತು ವೈದ್ಯರ ತಂಡವನ್ನು ಸಹ ಅಲ್ಲಿ ನಿಯೋಜಿಸಲಾಗಿತ್ತು. ಮಾಹಿತಿ ಪ್ರಕಾರ, ಮೇ 13 ರಿಂದ ಈ ಗಣಿಯಲ್ಲಿ ತಪಾಸಣೆ ಕಾರ್ಯ ನಡೆಯುತ್ತಿತ್ತು. ಈ ಅನುಕ್ರಮದಲ್ಲಿ ಮೇ 14ರ ಸಂಜೆ ಮುಖ್ಯ ವಿಜಿಲೆನ್ಸ್ ಸೇರಿದಂತೆ ಹಲವು ಅಧಿಕಾರಿಗಳು ಗಣಿಗಾರಿಕೆಗೆ ತೆರಳಿ ಪರಿಶೀಲನೆ ನಡೆಸಿದ್ದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ಖೇತ್ರಿ ಶಾಸಕ ಧರಂಪಾಲ್ ಗುರ್ಜರ್ ಕೂಡ ಸ್ಥಳಕ್ಕೆ ಧಾವಿಸಿದರು.ಚುನಾವಣಾ ಪ್ರಚಾರಕ್ಕಾಗಿ ಹರ್ಯಾಣಕ್ಕೆ ತೆರಳಿದ್ದೆ ಆದರೆ ಗಣಿ ಅಪಘಾತದ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಆಗಮಿಸಿರುವುದಾಗಿ ಅವರು ಎಎನ್‌ಐಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಟ್ಟಿ ಚಿನ್ನದ ಗಣಿ ಉದ್ಯೋಗ ನೇಮಕಾತಿಯಲ್ಲಿ ಅಕ್ರಮ: ಬರೆದದ್ದು ಒಂದು ಪರೀಕ್ಷೆ, ಪ್ರಕಟಿಸಿದ್ದು ಎರಡೆರಡು ಫಲಿತಾಂಶ

ಅಧಿಕಾರಿಗಳೊಂದಿಗೆ ಪತ್ರಕರ್ತ ವಿಕಾಸ್ ಶರ್ಮಾ ಕೂಡ ಒಳಗೆ ಸಿಕ್ಕಿಬಿದ್ದಿದ್ದರು. ಮುಖ್ಯ ವಿಜಿಲೆನ್ಸ್ ಅಧಿಕಾರಿ ಉಪೇಂದ್ರ ಪಾಂಡೆ, ಗಣಿ ಉಪ ಪ್ರಧಾನ ವ್ಯವಸ್ಥಾಪಕ ಎಕೆ ಶರ್ಮಾ, ವಿನೋದ್ ಸಿಂಗ್ ಶೇಖಾವತ್, ಎಕೆ ಬೈರಾ, ಅರ್ನವ್ ಭಂಡಾರಿ, ಯಶೋರಾಜ್ ಮೀನಾ, ವನೇಂದ್ರ ಭಂಡಾರಿ, ನಿರಂಜನ್ ಸಾಹು, ಕರಣ್ ಸಿಂಗ್ ಗೆಹ್ಲೋಟ್, ಪ್ರೀತಮ್ ಸಿಂಗ್, ಹರ್ಸಿರಾಮ್ ಮತ್ತು ಭಗೀರಥ ಅವರು ಒಳಗೆ ಇದ್ದರು.

ಗಣಿಯಿಂದ ಸುರಕ್ಷಿತವಾಗಿ ಹೊರತೆಗೆದ ಬಳಿಕ ಎಲ್ಲಾ ಅಧಿಕಾರಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು 1,800 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು.ಲಿಫ್ಟ್​ನ ಹಗ್ಗ ತುಂಡಾಗಿ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Wed, 15 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ