AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ತಾಮ್ರದ ಗಣಿ ಪರಿಶೀಲನೆಗೆ ಹೋಗಿ 1,800 ಅಡಿ ಆಳದಲ್ಲಿ ಸಿಕ್ಕಿಬಿದ್ದ 14 ಅಧಿಕಾರಿಗಳು

ತಾಮ್ರದ ಕಣಿ ಪರಿಶೀಲನೆಗೆ ಹೋದ ಅಧಿಕಾರಿಗಳು 1,800 ಅಡಿ ಆಳದಲ್ಲಿ ಸಿಲಿಕಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಲಿಫ್ಟ್​ನ ಹಗ್ಗ ತುಂಡಾದ ಪರಿಣಾಮ 14 ಅಧಿಕಾರಿಗಳು ಸುಮಾರು 12 ಗಂಟೆಗಳ ಕಾಲ ಸಿಲುಕಿದ್ದರು.

ರಾಜಸ್ಥಾನ: ತಾಮ್ರದ ಗಣಿ ಪರಿಶೀಲನೆಗೆ ಹೋಗಿ 1,800 ಅಡಿ ಆಳದಲ್ಲಿ ಸಿಕ್ಕಿಬಿದ್ದ 14 ಅಧಿಕಾರಿಗಳು
ಲಿಫ್ಟ್​
Follow us
ನಯನಾ ರಾಜೀವ್
|

Updated on:May 15, 2024 | 8:11 AM

ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಭಾರಿ ಅಪಘಾತ ಸಂಭವಿಸಿದೆ. ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ ಅಧಿಕಾರಿಗಳು ಗಣಿಯ ಆಳದಲ್ಲಿ ಬರೋಬ್ಬರಿ 12 ತಾಸುಗಳನ್ನು ಜೀವ ಬಿಗಿ ಹಿಡಿದುಕೊಂಡು ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ಪ್ರಕಾರ 1875 ಅಡಿ ಆಳದಲ್ಲಿ ಲಿಫ್ಟ್ ಚೈನ್ ತುಂಡಾಗಿದೆ. ಬರೋಬ್ಬರಿ 12 ಗಂಟೆಗಳ ಬಳಿಕ ಅಧಿಕಾರಿಗಳನ್ನು ರಕ್ಷಿಸಲಾಯಿತು.

ಗಣಿಯಲ್ಲಿ ಸಿಕ್ಕಿಬಿದ್ದಿರುವ ಅಧಿಕಾರಿಗಳಿಗೆ ಔಷಧಿಗಳು ಮತ್ತು ಆಹಾರದ ಪ್ಯಾಕೆಟ್‌ಗಳನ್ನು ಆಡಳಿತವು ಕಳುಹಿಸಿತ್ತು. ಆಂಬ್ಯುಲೆನ್ಸ್ ಮತ್ತು ವೈದ್ಯರ ತಂಡವನ್ನು ಸಹ ಅಲ್ಲಿ ನಿಯೋಜಿಸಲಾಗಿತ್ತು. ಮಾಹಿತಿ ಪ್ರಕಾರ, ಮೇ 13 ರಿಂದ ಈ ಗಣಿಯಲ್ಲಿ ತಪಾಸಣೆ ಕಾರ್ಯ ನಡೆಯುತ್ತಿತ್ತು. ಈ ಅನುಕ್ರಮದಲ್ಲಿ ಮೇ 14ರ ಸಂಜೆ ಮುಖ್ಯ ವಿಜಿಲೆನ್ಸ್ ಸೇರಿದಂತೆ ಹಲವು ಅಧಿಕಾರಿಗಳು ಗಣಿಗಾರಿಕೆಗೆ ತೆರಳಿ ಪರಿಶೀಲನೆ ನಡೆಸಿದ್ದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ಖೇತ್ರಿ ಶಾಸಕ ಧರಂಪಾಲ್ ಗುರ್ಜರ್ ಕೂಡ ಸ್ಥಳಕ್ಕೆ ಧಾವಿಸಿದರು.ಚುನಾವಣಾ ಪ್ರಚಾರಕ್ಕಾಗಿ ಹರ್ಯಾಣಕ್ಕೆ ತೆರಳಿದ್ದೆ ಆದರೆ ಗಣಿ ಅಪಘಾತದ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಆಗಮಿಸಿರುವುದಾಗಿ ಅವರು ಎಎನ್‌ಐಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಟ್ಟಿ ಚಿನ್ನದ ಗಣಿ ಉದ್ಯೋಗ ನೇಮಕಾತಿಯಲ್ಲಿ ಅಕ್ರಮ: ಬರೆದದ್ದು ಒಂದು ಪರೀಕ್ಷೆ, ಪ್ರಕಟಿಸಿದ್ದು ಎರಡೆರಡು ಫಲಿತಾಂಶ

ಅಧಿಕಾರಿಗಳೊಂದಿಗೆ ಪತ್ರಕರ್ತ ವಿಕಾಸ್ ಶರ್ಮಾ ಕೂಡ ಒಳಗೆ ಸಿಕ್ಕಿಬಿದ್ದಿದ್ದರು. ಮುಖ್ಯ ವಿಜಿಲೆನ್ಸ್ ಅಧಿಕಾರಿ ಉಪೇಂದ್ರ ಪಾಂಡೆ, ಗಣಿ ಉಪ ಪ್ರಧಾನ ವ್ಯವಸ್ಥಾಪಕ ಎಕೆ ಶರ್ಮಾ, ವಿನೋದ್ ಸಿಂಗ್ ಶೇಖಾವತ್, ಎಕೆ ಬೈರಾ, ಅರ್ನವ್ ಭಂಡಾರಿ, ಯಶೋರಾಜ್ ಮೀನಾ, ವನೇಂದ್ರ ಭಂಡಾರಿ, ನಿರಂಜನ್ ಸಾಹು, ಕರಣ್ ಸಿಂಗ್ ಗೆಹ್ಲೋಟ್, ಪ್ರೀತಮ್ ಸಿಂಗ್, ಹರ್ಸಿರಾಮ್ ಮತ್ತು ಭಗೀರಥ ಅವರು ಒಳಗೆ ಇದ್ದರು.

ಗಣಿಯಿಂದ ಸುರಕ್ಷಿತವಾಗಿ ಹೊರತೆಗೆದ ಬಳಿಕ ಎಲ್ಲಾ ಅಧಿಕಾರಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು 1,800 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು.ಲಿಫ್ಟ್​ನ ಹಗ್ಗ ತುಂಡಾಗಿ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Wed, 15 May 24

ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ