AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಾಜಸ್ಥಾನದ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯ ಹೊರತೆಗೆದ ವೈದ್ಯರು!

ಜೋಧ್‌ಪುರದ ಎಂಡಿಎಂ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ನಾಣ್ಯಗಳನ್ನು ಹೊರಗೆ ತೆಗೆಯಲಾಗಿದೆ. ಆ ವ್ಯಕ್ತಿ ಖಿನ್ನತೆಯಿಂದ ಈ ನಾಣ್ಯಗಳನ್ನು ನುಂಗಿದ್ದ ಎಂದು ಹೇಳಲಾಗಿದೆ.

Shocking News: ರಾಜಸ್ಥಾನದ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯ ಹೊರತೆಗೆದ ವೈದ್ಯರು!
ರೋಗಿಯ ಹೊಟ್ಟೆಯಲ್ಲಿ ಸಿಕ್ ನಾಣ್ಯಗಳು
TV9 Web
| Edited By: |

Updated on: Aug 01, 2022 | 4:18 PM

Share

ಜೋಧ್​​ಪುರ: ರಾಜಸ್ಥಾನದಲ್ಲಿ (Rajasthan) ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊಟ್ಟೆನೋವೆಂದು ಬಂದ ರೋಗಿಯನ್ನು ಪರೀಕ್ಷಿಸಿದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಪತ್ತೆಯಾಗಿದೆ. ರಾಜಸ್ಥಾನದ ವೈದ್ಯರು ಎಂಡೋಸ್ಕೋಪಿಕ್ ಪ್ರಕ್ರಿಯೆಯ ಮೂಲಕ ಆ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯಗಳನ್ನು ಹೊರತೆಗೆದಿದ್ದಾರೆ.

ಜೋಧ್‌ಪುರದ ಎಂಡಿಎಂ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ನಾಣ್ಯಗಳನ್ನು ಹೊರಗೆ ತೆಗೆಯಲಾಗಿದೆ. ಆ ವ್ಯಕ್ತಿ ಖಿನ್ನತೆಯಿಂದ ಈ ನಾಣ್ಯಗಳನ್ನು ನುಂಗಿದ್ದ ಎಂದು ಹೇಳಲಾಗಿದೆ. “ಆಸ್ಪತ್ರೆಗೆ ಬಂದ ಅವರು 10-15 ನಾಣ್ಯಗಳನ್ನು ನುಂಗಿದ್ದಾರೆ ಎಂದು ನಮ್ಮ ಬಳಿ ಹೇಳಿದರು. ನಾವು ಹೊಟ್ಟೆಯ ಎಕ್ಸ್-ರೇ ನಡೆಸಿದಾಗ ನಾಣ್ಯಗಳ ರಾಶಿಯೇ ಅಲ್ಲಿರುವುದು ಕಂಡುಬಂದಿತು” ಎಂದು ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮುಖ್ಯಸ್ಥ ನರೇಂದ್ರ ಭಾರ್ಗವ್ ವಿವರಿಸಿದ್ದಾರೆ.

ಇದನ್ನೂ ಓದಿ: Shocking News: ಮನೆಯ ಯಜಮಾನಿಯನ್ನು ಕೊಂದು ಹಾಕಿದ ಪಿಟ್ ಬುಲ್! ವೈದ್ಯರು ಹೇಳಿದ್ದೇನು ಗೊತ್ತಾ?

ವೈದ್ಯರು ಎರಡು ದಿನಗಳಲ್ಲಿ 1 ರೂ.ನ 63 ನಾಣ್ಯಗಳನ್ನು ಸೇವಿಸಿರುವುದು ಪತ್ತೆಯಾಗಿದೆ. ಅವುಗಳನ್ನು ಹೊರತೆಗೆಯಲಾಗಿದ್ದು, ರೋಗಿ ಚೆನ್ನಾಗಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಡಿಸ್ಚಾರ್ಜ್ ಆಗಿದ್ದಾರೆ ಎಂದು ಭಾರ್ಗವ ಹೇಳಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ