Rajasthan Accident: ಹೆದ್ದಾರಿಯಲ್ಲಿ ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ, 11 ಮಂದಿ ಸಾವು, 12 ಜನರಿಗೆ ಗಂಭೀರ ಗಾಯ

|

Updated on: Sep 13, 2023 | 8:19 AM

ರಾಜಸ್ಥಾನದ ಭರತ್‌ಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ 11 ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 21 ರಲ್ಲಿರುವ ಲಖನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಂಟ್ರಾ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Rajasthan Accident: ಹೆದ್ದಾರಿಯಲ್ಲಿ ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ, 11 ಮಂದಿ ಸಾವು, 12 ಜನರಿಗೆ ಗಂಭೀರ ಗಾಯ
ಅಪಘಾತ
Image Credit source: NDTV
Follow us on

ರಾಜಸ್ಥಾನದ ಭರತ್‌ಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ 11 ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 21 ರಲ್ಲಿರುವ ಲಖನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಂಟ್ರಾ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಮಾಹಿತಿಯ ಪ್ರಕಾರ, ಪ್ರಯಾಣಿಕರನ್ನು ತುಂಬಿದ ಬಸ್ ಭಾವನಗರದಿಂದ ಮಥುರಾಗೆ ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ . ಈ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಆರು ಮಹಿಳೆಯರು ಮತ್ತು ಐವರು ಪುರುಷರು ಸೇರಿದ್ದಾರೆ. ಮೃತರು ಮತ್ತು ಗಾಯಗೊಂಡವರೆಲ್ಲರೂ ಭಾವನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ.

ಅಪರಿಚಿತ ವಾಹನವೊಂದು ನಿಂತಿದ್ದ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಲಖನಪುರ, ನಾಡಬಾಯಿ, ಹಲೈನ, ವೈರ್ ಪೊಲೀಸ್ ಠಾಣೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಮಗಳೂರು: ಸಾರಿಗೆ ಬಸ್​- ಕಾರು ಮುಖಾಮುಖಿ ಡಿಕ್ಕಿ, 9 ಜನರಿಗೆ ಗಂಭೀರ ಗಾಯ

ಇತ್ತೀಚೆಗೆ ಭರತ್‌ಪುರ ಜಿಲ್ಲೆಯ ರುಬ್ಬಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಧೋಲ್‌ಪುರದಲ್ಲಿ ವಾಸಿಸುತ್ತಿದ್ದ ಆರು ಜನರು ಸಾವನ್ನಪ್ಪಿದ್ದರು.

ಧೋಲ್‌ಪುರದಲ್ಲಿ ನೆಲೆಸಿರುವ ಎರಡು ಕುಟುಂಬಗಳು ಖಾತು ಶ್ಯಾಮ್‌ ದರ್ಶನ್‌ಗೆ ತೆರಳಿ ಕಾರಿನಲ್ಲಿ ವಾಪಸ್‌ ಧೋಲ್‌ಪುರಕ್ಕೆ ತೆರಳುತ್ತಿದ್ದ ವೇಳೆ ಧೋಲ್‌ಪುರದಿಂದ ಜೈಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಅವರ ಕಾರು ಡಿಕ್ಕಿ ಹೊಡೆದಿತ್ತು. ಎರಡು ಹೋರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ. ಈ ಎಲ್ಲಾ ಪ್ರಯಾಣಿಕರು ಖತುಶ್ಯಾಮ್‌ಜಿಯಿಂದ ಹಿಂತಿರುಗುತ್ತಿದ್ದಾಗ ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ