ರಾಜಸ್ಥಾನ: ವ್ಯಾನ್​ ಹಾಗೂ ಬಸ್​ ನಡುವೆ ಡಿಕ್ಕಿ, ಒಂದೇ ಕುಟುಂಬದ 7 ಮಂದಿಯ ದುರ್ಮರಣ

ರಾಜಸ್ಥಾನದ ದ್ವಿದಾನಾ-ಕುಚಾಮನ್ ಜಿಲ್ಲೆಯಲ್ಲಿ ಬಸ್​ ಹಾಗೂ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜಸ್ಥಾನ: ವ್ಯಾನ್​ ಹಾಗೂ ಬಸ್​ ನಡುವೆ ಡಿಕ್ಕಿ, ಒಂದೇ ಕುಟುಂಬದ 7 ಮಂದಿಯ ದುರ್ಮರಣ
ಅಪಘಾತ

Updated on: Aug 13, 2023 | 8:45 AM

ಜೈಪುರ, ಆಗಸ್ಟ್​ 13: ರಾಜಸ್ಥಾನದ ದ್ವಿದಾನಾ-ಕುಚಾಮನ್ ಜಿಲ್ಲೆಯಲ್ಲಿ ಬಸ್​ ಹಾಗೂ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ ಬಿಷ್ಣೋಯ್ ಹೇಳಿದ್ದಾರೆ. ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಬಂಗಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಜೈಪುರಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ದುರ್ಮರಣ

ಅಪಘಾತದ ಮೃತಪಟ್ಟವರು ವ್ಯಾನ್‌ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಕಾರ್‌ನಿಂದ ನಾಗೌರ್‌ಗೆ ಪ್ರಯಾಣಿಸುತ್ತಿದ್ದರು. ಅಪಘಾತದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us