AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: 52 ಮಕ್ಕಳಿದ್ದ ಶಾಲಾ ಬಸ್​ ಟ್ರಕ್​ಗೆ ಡಿಕ್ಕಿ, ಇಬ್ಬರು ವಿದ್ಯಾರ್ಥಿನಿಯರು ಸಾವು

52 ಮಕ್ಕಳಿದ್ದ ಶಾಲಾ ಬಸ್​ ಕಲ್ಲಿದ್ದಲು ತುಂಬಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್‌ಪುರ ಕಡೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ರಾಜಸ್ಥಾನ: 52 ಮಕ್ಕಳಿದ್ದ ಶಾಲಾ ಬಸ್​ ಟ್ರಕ್​ಗೆ ಡಿಕ್ಕಿ, ಇಬ್ಬರು ವಿದ್ಯಾರ್ಥಿನಿಯರು ಸಾವು
ಅಪಘಾತImage Credit source: Patrika.com
ನಯನಾ ರಾಜೀವ್
|

Updated on: Jan 11, 2024 | 11:39 AM

Share

ಜೈಪುರ, ಜನವರಿ 11: 52 ಮಕ್ಕಳಿದ್ದ ಶಾಲಾ ಬಸ್​ ಕಲ್ಲಿದ್ದಲು ತುಂಬಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್‌ಪುರ ಕಡೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಕನಿಷ್ಠ 11 ಶಾಲಾ ಮಕ್ಕಳು, ಮೂವರು ಶಿಕ್ಷಕರು ಮತ್ತು ಬಸ್ ಚಾಲಕನನ್ನು ಚಿಕಿತ್ಸೆಗಾಗಿ ಶಿಯೋಗಂಜ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಭೀಕರ ಅಪಘಾತದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ತಕ್ಷಣ, ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಖಾಸಗಿ ಬಸ್‌ನ ಮುಂಭಾಗವು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಕೂಡ ಕಂಡುಬಂದಿತ್ತು.

ಮತ್ತಷ್ಟು ಓದಿ: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು, ಎಂಎಲ್​ಸಿ ಪರ್ವತರೆಡ್ಡಿಗೆ ಗಂಭೀರ ಗಾಯ

ಅಪಘಾತಕ್ಕೆ ಕಾರಣ ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ, ರಸ್ತೆಯ ಬದಿಯಲ್ಲಿ ನಿಂತಿದ್ದ ಕಲ್ಲಿದ್ದಲು ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಹಲವಾರು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಟ್ರಕ್ ಚಾಲಕನ ವಿರುದ್ಧ ನಿರ್ಲಕ್ಷ್ಯಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಸ್ ಚಾಲಕನ ಹೇಳಿಕೆ ಇನ್ನಷ್ಟೇ ದಾಖಲಾಗಬೇಕಿದೆ.

ಸೆಪ್ಟೆಂಬರ್ 2023 ರಲ್ಲಿ, ಬಾರ್ಮರ್ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದ ಸರ್ಕಾರಿ ಮಾದರಿ ಶಾಲೆಯ ವಿದ್ಯಾರ್ಥಿ ಮತ್ತು ಪ್ರಾಂಶುಪಾಲರು ಪ್ರಯಾಣಿಸುತ್ತಿದ್ದ ಬಸ್ ನಿಲ್ಲಿಸಿದ್ದ ಡಂಪರ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದರು. ಅಪಘಾತದ ವೇಳೆ 24 ವಿದ್ಯಾರ್ಥಿಗಳು ಮತ್ತು ನಾಲ್ವರು ಸಿಬ್ಬಂದಿ ಬಸ್‌ನಲ್ಲಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ