AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಗೆಲ್ಲಬೇಕೆಂದರೆ ಹೀಗೆ ಮಾಡಲೇಬೇಕು: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಅಶೋಕ್ ಗೆಹ್ಲೋಟ್ ಸಲಹೆ

ಮುಂಬರಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಿಎಂ ಅಶೋಕ್ ಗೆಹ್ಲೋಟ್(Ashok Gehlot) ಕೆಲವು ಸಲಹೆಗಳನ್ನು ನೀಡಿದ್ದಾರೆ. ನಾವು ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಗೆಲ್ಲಬಲ್ಲ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಬೇಕು.

ನಾವು ಗೆಲ್ಲಬೇಕೆಂದರೆ ಹೀಗೆ ಮಾಡಲೇಬೇಕು: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಅಶೋಕ್ ಗೆಹ್ಲೋಟ್ ಸಲಹೆ
ಅಶೋಕ್ ಗೆಹ್ಲೋಟ್
ನಯನಾ ರಾಜೀವ್
|

Updated on: Jun 16, 2023 | 8:17 AM

Share

ಮುಂಬರಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಿಎಂ ಅಶೋಕ್ ಗೆಹ್ಲೋಟ್(Ashok Gehlot)  ಕೆಲವು ಸಲಹೆಗಳನ್ನು ನೀಡಿದ್ದಾರೆ. ನಾವು ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಗೆಲ್ಲಬಲ್ಲ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಬೇಕು. ಚುನಾವಣೆಗೆ ಎರಡು ತಿಂಗಳ ಮೊದಲು ಟಿಕೆಟ್ ನಿರ್ಧರಿಸಬೇಕು ಎಂದು ಸಲಹೆ ನೀಡಿದರು. ಜತೆಗೆ ರಾಜಕೀಯದಲ್ಲಿ ಯಶಸ್ಸು ಸಾಧಿಸಲು ಪ್ರಮುಖವಾಗಿ ತಾಳ್ಮೆ ಇರಬೇಕು ಎಂದರು.

ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತು ಮಾತನಾಡಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವಂತೆ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳು ಹಾಗೂ ಮುಖಂಡರಿಗೆ ಕರೆ ನೀಡಿದ ಅವರು, ಪಕ್ಷವು ಗೆಲ್ಲಬೇಕಾದರೆ ಪಕ್ಷ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಯಾರೂ ಕೂಡ ಬೇಸರ ಮಾಡಿಕೊಳ್ಳಬಾರದು, ತಾಳ್ಮೆ ಇಟ್ಟುಕೊಂಡು ಯಾರು ಮುಂದುವರೆಯುತ್ತಾರೋ ಅವರು ಉನ್ನತ ಮಟ್ಟಕ್ಕೆ ಹೋಗುತ್ತಾರೆ ಎಂದರು. ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಜಗಳದ ನಡುವೆಯೇ ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಶೀಘ್ರದಲ್ಲೇ ಮೇಜರ್ ಸರ್ಜರಿ?

ಗೆಲ್ಲಬಹುದಾದ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಬೇಕೆಂದು ಪ್ರತಿಪಾದಿಸಿದ ಅಶೋಕ್ ಗೆಹ್ಲೋಟ್, ಪಕ್ಷವು ಚುನಾವಣೆಗೆ ಎರಡು ತಿಂಗಳ ಮೊದಲು ಅಭ್ಯರ್ಥಿಗಳನ್ನು ನಿರ್ಧರಿಸಬೇಕು ಇದರಿಂದ ಅವರು ತಮ್ಮ ಕ್ಷೇತ್ರಗಳಲ್ಲಿ ಹೆಚ್ಚು ಶ್ರಮಿಸಬಹುದು ಎಂದು ಹೇಳಿದರು.

ಚುನಾವಣೆಯ ಸಮಯದಲ್ಲಿ ಅಭ್ಯರ್ಥಿ ಘೋಷಣೆಯಾದರೆ ಬೀದಿ ಬೀದಿಗಳಲ್ಲಿ ಅಲೆದಾಡಿ ಸುಸ್ತಾಗುತ್ತಾರೆ, ಮೊದಲೇ ಅಭ್ಯರ್ಥಿಗಳನ್ನು ಘೋಷಿಸಿದರೆ, ಅವರ ಕ್ಷೇತ್ರದ ಎಲ್ಲಾ ಭಾಗಗಳಿಗೂ ತೆರಳಿ ಜನರ ಜತೆ ಮಾತನಾಡಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ