AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ, ಬಿಜೆಪಿ ನಾಯಕ ಸಂದೀಪ್ ಪಕ್ಷದಿಂದ ಉಚ್ಚಾಟನೆ

ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನ ಬಿಜೆಪಿ ನಾಯಕ ಸಂದೀಪ್ ದಾಯ್ಮಾ ಅವರನ್ನು ಪಕ್ಷವು ಉಚ್ಚಾಟಿಸಿದೆ. ಬಿಜೆಪಿ ನಾಯಕ ಸಂದೀಪ್ದಾಯ್ಮಾ ಅಲ್ವಾರ್​ನಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಗುರುದ್ವಾರಗಳನ್ನು ಕ್ಯಾನ್ಸರ್​ ಎಂದು ಕರೆದಿದ್ದಾರೆ. ಈ ಹೇಳಿಕೆ ವಿರುದ್ಧ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಪಂಜಾಬ್ ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸಿದರು, ಪಕ್ಷದ ಹೈಕಮಾಂಡ್‌ನಿಂದ ಕ್ರಮಕ್ಕೆ ಒತ್ತಾಯಿಸಿದರು.

Rajasthan: ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ, ಬಿಜೆಪಿ ನಾಯಕ ಸಂದೀಪ್ ಪಕ್ಷದಿಂದ ಉಚ್ಚಾಟನೆ
ಸಂದೀಪ್Image Credit source: NDTV
ನಯನಾ ರಾಜೀವ್
|

Updated on: Nov 06, 2023 | 10:21 AM

Share

ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನ ಬಿಜೆಪಿ ನಾಯಕ ಸಂದೀಪ್ ದಾಯ್ಮಾ ಅವರನ್ನು ಪಕ್ಷವು ಉಚ್ಚಾಟಿಸಿದೆ. ಬಿಜೆಪಿ ನಾಯಕ ಸಂದೀಪ್ದಾಯ್ಮಾ ಅಲ್ವಾರ್​ನಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಗುರುದ್ವಾರಗಳನ್ನು ಕ್ಯಾನ್ಸರ್​ ಎಂದು ಕರೆದಿದ್ದಾರೆ. ಈ ಹೇಳಿಕೆ ವಿರುದ್ಧ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಪಂಜಾಬ್ ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸಿದರು, ಪಕ್ಷದ ಹೈಕಮಾಂಡ್‌ನಿಂದ ಕ್ರಮಕ್ಕೆ ಒತ್ತಾಯಿಸಿದರು.

ಬಿಜೆಪಿ ನಾಯಕರು, ಬಿಜೆಪಿ ಯಾವಾಗಲೂ ಸಿಖ್ ಸಮುದಾಯದೊಂದಿಗೆ ನಿಂತಿದೆ ಮತ್ತು ಯಾವಾಗಲೂ ಅದರೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಶಿರೋಮಣಿ ಗುರುದ್ವಾರ ವ್ಯವಸ್ಥಾಪಕರ ಕಾರ್ಯದರ್ಶಿ ಗುರುಚರಣ್ ಸಿಂಗ್ ಗ್ರೆವಾಲ್ ಕೂಡ ಬಿಜೆಪಿ ನಾಯಕ ಸಂದೀಪ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.ಅವರು ಸನಾತನ ಧರ್ಮಕ್ಕಾಗಿ ಸಿಖ್ಖರ ತ್ಯಾಗವನ್ನು ನೆನಪಿಸಿದರು. ಅಕಾಲಿದಳದ ಅಧ್ಯಕ್ಷ ಸುಖಬೀರ್ ಬಾದಲ್ ಕೂಡ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.

ಗುರುದ್ವಾರಗಳ ಬಗ್ಗೆ ಈ ಮಾತುಗಳು ನನ್ನ ಬಾಯಿಂದ ಹೇಗೆ ಬಂದವೋ ಗೊತ್ತಿಲ್ಲ, ನಾನು ಮಸೀದಿ ಮತ್ತು ಮದರಸಾಗಳ ಬಗ್ಗೆ ಮಾತನಾಡುತ್ತಿದ್ದೆ. ಸನಾತನ ಧರ್ಮಕ್ಕಾಗಿ ತ್ಯಾಗ ಮಾಡಿದ ಸಿಖ್ ಸಮುದಾಯದ ಜನರ ಬಗ್ಗೆ ನಾನು ಈ ರೀತಿ ಯೋಚಿಸಲು ಸಾಧ್ಯವಿಲ್ಲ, ತಪ್ಪಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಸಂದೀಪ್ ಹೇಳಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ

ಕಳೆದ ಬುಧವಾರ ಅಲ್ವಾರ್‌ನ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಾಬಾ ಬಾಲಕನಾಥ್ ಅವರ ನಾಮಪತ್ರ ಸಲ್ಲಿಕೆಯಾಗಿತ್ತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರು ಇದರಲ್ಲಿ ಭಾಗವಹಿಸಿದ್ದರು. ಆಗ ಸಂದೀಪ್ ಭಾಷಣ ಮಾಡುವಾಗ ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ