AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ, ಬಿಜೆಪಿ ನಾಯಕ ಸಂದೀಪ್ ಪಕ್ಷದಿಂದ ಉಚ್ಚಾಟನೆ

ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನ ಬಿಜೆಪಿ ನಾಯಕ ಸಂದೀಪ್ ದಾಯ್ಮಾ ಅವರನ್ನು ಪಕ್ಷವು ಉಚ್ಚಾಟಿಸಿದೆ. ಬಿಜೆಪಿ ನಾಯಕ ಸಂದೀಪ್ದಾಯ್ಮಾ ಅಲ್ವಾರ್​ನಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಗುರುದ್ವಾರಗಳನ್ನು ಕ್ಯಾನ್ಸರ್​ ಎಂದು ಕರೆದಿದ್ದಾರೆ. ಈ ಹೇಳಿಕೆ ವಿರುದ್ಧ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಪಂಜಾಬ್ ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸಿದರು, ಪಕ್ಷದ ಹೈಕಮಾಂಡ್‌ನಿಂದ ಕ್ರಮಕ್ಕೆ ಒತ್ತಾಯಿಸಿದರು.

Rajasthan: ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ, ಬಿಜೆಪಿ ನಾಯಕ ಸಂದೀಪ್ ಪಕ್ಷದಿಂದ ಉಚ್ಚಾಟನೆ
ಸಂದೀಪ್Image Credit source: NDTV
ನಯನಾ ರಾಜೀವ್
|

Updated on: Nov 06, 2023 | 10:21 AM

Share

ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನ ಬಿಜೆಪಿ ನಾಯಕ ಸಂದೀಪ್ ದಾಯ್ಮಾ ಅವರನ್ನು ಪಕ್ಷವು ಉಚ್ಚಾಟಿಸಿದೆ. ಬಿಜೆಪಿ ನಾಯಕ ಸಂದೀಪ್ದಾಯ್ಮಾ ಅಲ್ವಾರ್​ನಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಗುರುದ್ವಾರಗಳನ್ನು ಕ್ಯಾನ್ಸರ್​ ಎಂದು ಕರೆದಿದ್ದಾರೆ. ಈ ಹೇಳಿಕೆ ವಿರುದ್ಧ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಪಂಜಾಬ್ ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸಿದರು, ಪಕ್ಷದ ಹೈಕಮಾಂಡ್‌ನಿಂದ ಕ್ರಮಕ್ಕೆ ಒತ್ತಾಯಿಸಿದರು.

ಬಿಜೆಪಿ ನಾಯಕರು, ಬಿಜೆಪಿ ಯಾವಾಗಲೂ ಸಿಖ್ ಸಮುದಾಯದೊಂದಿಗೆ ನಿಂತಿದೆ ಮತ್ತು ಯಾವಾಗಲೂ ಅದರೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಶಿರೋಮಣಿ ಗುರುದ್ವಾರ ವ್ಯವಸ್ಥಾಪಕರ ಕಾರ್ಯದರ್ಶಿ ಗುರುಚರಣ್ ಸಿಂಗ್ ಗ್ರೆವಾಲ್ ಕೂಡ ಬಿಜೆಪಿ ನಾಯಕ ಸಂದೀಪ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.ಅವರು ಸನಾತನ ಧರ್ಮಕ್ಕಾಗಿ ಸಿಖ್ಖರ ತ್ಯಾಗವನ್ನು ನೆನಪಿಸಿದರು. ಅಕಾಲಿದಳದ ಅಧ್ಯಕ್ಷ ಸುಖಬೀರ್ ಬಾದಲ್ ಕೂಡ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.

ಗುರುದ್ವಾರಗಳ ಬಗ್ಗೆ ಈ ಮಾತುಗಳು ನನ್ನ ಬಾಯಿಂದ ಹೇಗೆ ಬಂದವೋ ಗೊತ್ತಿಲ್ಲ, ನಾನು ಮಸೀದಿ ಮತ್ತು ಮದರಸಾಗಳ ಬಗ್ಗೆ ಮಾತನಾಡುತ್ತಿದ್ದೆ. ಸನಾತನ ಧರ್ಮಕ್ಕಾಗಿ ತ್ಯಾಗ ಮಾಡಿದ ಸಿಖ್ ಸಮುದಾಯದ ಜನರ ಬಗ್ಗೆ ನಾನು ಈ ರೀತಿ ಯೋಚಿಸಲು ಸಾಧ್ಯವಿಲ್ಲ, ತಪ್ಪಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಸಂದೀಪ್ ಹೇಳಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ

ಕಳೆದ ಬುಧವಾರ ಅಲ್ವಾರ್‌ನ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಾಬಾ ಬಾಲಕನಾಥ್ ಅವರ ನಾಮಪತ್ರ ಸಲ್ಲಿಕೆಯಾಗಿತ್ತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರು ಇದರಲ್ಲಿ ಭಾಗವಹಿಸಿದ್ದರು. ಆಗ ಸಂದೀಪ್ ಭಾಷಣ ಮಾಡುವಾಗ ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ