AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ, ಬಿಜೆಪಿ ನಾಯಕ ಸಂದೀಪ್ ಪಕ್ಷದಿಂದ ಉಚ್ಚಾಟನೆ

ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನ ಬಿಜೆಪಿ ನಾಯಕ ಸಂದೀಪ್ ದಾಯ್ಮಾ ಅವರನ್ನು ಪಕ್ಷವು ಉಚ್ಚಾಟಿಸಿದೆ. ಬಿಜೆಪಿ ನಾಯಕ ಸಂದೀಪ್ದಾಯ್ಮಾ ಅಲ್ವಾರ್​ನಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಗುರುದ್ವಾರಗಳನ್ನು ಕ್ಯಾನ್ಸರ್​ ಎಂದು ಕರೆದಿದ್ದಾರೆ. ಈ ಹೇಳಿಕೆ ವಿರುದ್ಧ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಪಂಜಾಬ್ ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸಿದರು, ಪಕ್ಷದ ಹೈಕಮಾಂಡ್‌ನಿಂದ ಕ್ರಮಕ್ಕೆ ಒತ್ತಾಯಿಸಿದರು.

Rajasthan: ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ, ಬಿಜೆಪಿ ನಾಯಕ ಸಂದೀಪ್ ಪಕ್ಷದಿಂದ ಉಚ್ಚಾಟನೆ
ಸಂದೀಪ್Image Credit source: NDTV
ನಯನಾ ರಾಜೀವ್
|

Updated on: Nov 06, 2023 | 10:21 AM

Share

ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನ ಬಿಜೆಪಿ ನಾಯಕ ಸಂದೀಪ್ ದಾಯ್ಮಾ ಅವರನ್ನು ಪಕ್ಷವು ಉಚ್ಚಾಟಿಸಿದೆ. ಬಿಜೆಪಿ ನಾಯಕ ಸಂದೀಪ್ದಾಯ್ಮಾ ಅಲ್ವಾರ್​ನಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಗುರುದ್ವಾರಗಳನ್ನು ಕ್ಯಾನ್ಸರ್​ ಎಂದು ಕರೆದಿದ್ದಾರೆ. ಈ ಹೇಳಿಕೆ ವಿರುದ್ಧ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಪಂಜಾಬ್ ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸಿದರು, ಪಕ್ಷದ ಹೈಕಮಾಂಡ್‌ನಿಂದ ಕ್ರಮಕ್ಕೆ ಒತ್ತಾಯಿಸಿದರು.

ಬಿಜೆಪಿ ನಾಯಕರು, ಬಿಜೆಪಿ ಯಾವಾಗಲೂ ಸಿಖ್ ಸಮುದಾಯದೊಂದಿಗೆ ನಿಂತಿದೆ ಮತ್ತು ಯಾವಾಗಲೂ ಅದರೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಶಿರೋಮಣಿ ಗುರುದ್ವಾರ ವ್ಯವಸ್ಥಾಪಕರ ಕಾರ್ಯದರ್ಶಿ ಗುರುಚರಣ್ ಸಿಂಗ್ ಗ್ರೆವಾಲ್ ಕೂಡ ಬಿಜೆಪಿ ನಾಯಕ ಸಂದೀಪ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.ಅವರು ಸನಾತನ ಧರ್ಮಕ್ಕಾಗಿ ಸಿಖ್ಖರ ತ್ಯಾಗವನ್ನು ನೆನಪಿಸಿದರು. ಅಕಾಲಿದಳದ ಅಧ್ಯಕ್ಷ ಸುಖಬೀರ್ ಬಾದಲ್ ಕೂಡ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.

ಗುರುದ್ವಾರಗಳ ಬಗ್ಗೆ ಈ ಮಾತುಗಳು ನನ್ನ ಬಾಯಿಂದ ಹೇಗೆ ಬಂದವೋ ಗೊತ್ತಿಲ್ಲ, ನಾನು ಮಸೀದಿ ಮತ್ತು ಮದರಸಾಗಳ ಬಗ್ಗೆ ಮಾತನಾಡುತ್ತಿದ್ದೆ. ಸನಾತನ ಧರ್ಮಕ್ಕಾಗಿ ತ್ಯಾಗ ಮಾಡಿದ ಸಿಖ್ ಸಮುದಾಯದ ಜನರ ಬಗ್ಗೆ ನಾನು ಈ ರೀತಿ ಯೋಚಿಸಲು ಸಾಧ್ಯವಿಲ್ಲ, ತಪ್ಪಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಸಂದೀಪ್ ಹೇಳಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ

ಕಳೆದ ಬುಧವಾರ ಅಲ್ವಾರ್‌ನ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಾಬಾ ಬಾಲಕನಾಥ್ ಅವರ ನಾಮಪತ್ರ ಸಲ್ಲಿಕೆಯಾಗಿತ್ತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರು ಇದರಲ್ಲಿ ಭಾಗವಹಿಸಿದ್ದರು. ಆಗ ಸಂದೀಪ್ ಭಾಷಣ ಮಾಡುವಾಗ ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!